<p><strong>ಪಾಂಡವಪುರ:</strong> ತುಂಬಿದ ಶೌಚಗುಂಡಿಗಳನ್ನು ಯಾಂತ್ರಿಕ ವಿಧಾನದ ಮೂಲಕ ತೆರವುಗೊಳಿಸಿ ಎಲ್ಲೆಂದರಲ್ಲಿ ವಿಲೇವಾರಿ ಮಾಡಲಾಗುತ್ತಿರುವುದು ಅಪಾಯಕಾರಿಯಾದ ಕ್ರಮವಾಗಿದೆ ಎಂದು ಜಿ.ಪಂ.ಸಿಇಒ ಕೆ.ಆರ್.ನಂದಿನಿ ಹೇಳಿದರು.</p>.<p>ತಾಲ್ಲೂಕಿನ ಕೆ.ಬೆಟ್ಟಹಳ್ಳಿ ಗ್ರಾ.ಪಂ.ವ್ಯಾಪ್ತಿಯ ಜಗಶೆಟ್ಟಹಳ್ಳಿ ಗ್ರಾಮದಲ್ಲಿ ನಿರ್ಮಾಣವಾಗಿರುವ ಮಲ ತ್ಯಾಜ್ಯ ನಿರ್ವಹಣಾ ಘಟಕ ಕಾಮಗಾರಿಯನ್ನು ಪರಿಶೀಲಿಸಿ ಅವರು ಮಾತನಾಡಿದರು. ‘ಮಲ ತ್ಯಾಜ್ಯವನ್ನು ವೈಜ್ಞಾನಿಕವಾಗಿ ನಿರ್ವಹಣೆ ಮಾಡಬೇಕು. ತ್ಯಾಜ್ಯ ನಿರ್ವಹಣಾ ಘಟಕವನ್ನು ಶೀಘ್ರ ಹಸ್ತಾಂತರ ಪಡೆದು ಇದರ ಸದುಪಯೋಗಪಡಿಸಿಕೊಳ್ಳಬೇಕು’ ಎಂದರು.</p>.<p>ಕಾಮಗಾರಿಯ ಬಗ್ಗೆ ಪಿಡಿಒ ಮತ್ತು ಕೆಆರ್ಐಡಿಎಲ್ ಅಧಿಕಾರಿಗಳಿಂದ ಮಾಹಿತಿ ಪಡೆದ ಜಿ.ಪಂ.ಸಿಇಒ ನಂದಿನಿ ಅವರು ನಿರ್ವಹಣೆಯನ್ನು ಸರಿಯಾಗಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಪಾಂಡವಪುರ ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿರುವ ಸಕ್ಕಿಂಗ್ ಯಂತ್ರವನ್ನು ಗ್ರಾ.ಪಂ.ಮಟ್ಟದ ಒಕ್ಕೂಟಕ್ಕೆ ಹಸ್ತಾಂತರ ಮಾಡಿ ಉದ್ಯಮದ ಮಾದರಿಯಲ್ಲಿ ನಿರ್ವಹಣೆ ಮಾಡಲು ಕ್ರಮವಹಿಸುವಂತೆ ತಾ.ಪಂ.ಇಒ ವೀಣಾ ಅವರಿಗೆ ಸೂಚನೆ ನೀಡಿದರು.</p>.<p>ಮಲ ತ್ಯಾಜ್ಯ ನಿರ್ವಹಣಾ ಘಟಕಗಳನ್ನು ಕೆಆರ್ಐಡಿಎಲ್ ನಿರ್ವಹಿಸುತ್ತಿದ್ದು, ಎರಡು ಘಟಕಗಳನ್ನು ಈಗಾಗಲೇ ಪೂರ್ಣಗೊಳಿಸಿದೆ. ಉಳಿದ ಘಟಕಗಳ ಕಾಮಗಾರಿ ಪ್ರಗತಿಯಲ್ಲಿದ್ದು, ಶೀಘ್ರ ಪೂರ್ಣಗೊಳಿಸುವುದಾಗಿ ಕೆಆರ್ಐಡಿಎಲ್ ಇಇ ಸೋಮಶೇಖರ್ ಅವರು ಜಿ.ಪಂ.ಸಿಇಒ ನಂದಿನಿ ಅವರಿಗೆ ಮಾಹಿತಿ ನೀಡಿದರು.</p>.<p>ಜಿ.ಪಂ.ಉಪ ಕಾರ್ಯದರ್ಶಿ ಲಕ್ಷ್ಮೀ, ತಾ.ಪಂ.ಇಒ ವೀಣಾ, ಕೆ.ಆರ್.ಪೇಟೆ ತಾ.ಪಂ.ಇಒ ಸುಷ್ಮಾ ಇತರರು ಇದ್ದರು.</p>.<p><strong>ಮಲ ತ್ಯಾಜ್ಯ ನಿರ್ವಹಣಾ ಘಟಕ ಕಾಮಗಾರಿ ಪರಿಶೀಲನೆ ಕಾಮಗಾರಿಯ ಸಮರ್ಪಕ ನಿರ್ವಹಣೆಗೆ ಸಿಇಒ ಸೂಚನೆ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾಂಡವಪುರ:</strong> ತುಂಬಿದ ಶೌಚಗುಂಡಿಗಳನ್ನು ಯಾಂತ್ರಿಕ ವಿಧಾನದ ಮೂಲಕ ತೆರವುಗೊಳಿಸಿ ಎಲ್ಲೆಂದರಲ್ಲಿ ವಿಲೇವಾರಿ ಮಾಡಲಾಗುತ್ತಿರುವುದು ಅಪಾಯಕಾರಿಯಾದ ಕ್ರಮವಾಗಿದೆ ಎಂದು ಜಿ.ಪಂ.ಸಿಇಒ ಕೆ.ಆರ್.ನಂದಿನಿ ಹೇಳಿದರು.</p>.<p>ತಾಲ್ಲೂಕಿನ ಕೆ.ಬೆಟ್ಟಹಳ್ಳಿ ಗ್ರಾ.ಪಂ.ವ್ಯಾಪ್ತಿಯ ಜಗಶೆಟ್ಟಹಳ್ಳಿ ಗ್ರಾಮದಲ್ಲಿ ನಿರ್ಮಾಣವಾಗಿರುವ ಮಲ ತ್ಯಾಜ್ಯ ನಿರ್ವಹಣಾ ಘಟಕ ಕಾಮಗಾರಿಯನ್ನು ಪರಿಶೀಲಿಸಿ ಅವರು ಮಾತನಾಡಿದರು. ‘ಮಲ ತ್ಯಾಜ್ಯವನ್ನು ವೈಜ್ಞಾನಿಕವಾಗಿ ನಿರ್ವಹಣೆ ಮಾಡಬೇಕು. ತ್ಯಾಜ್ಯ ನಿರ್ವಹಣಾ ಘಟಕವನ್ನು ಶೀಘ್ರ ಹಸ್ತಾಂತರ ಪಡೆದು ಇದರ ಸದುಪಯೋಗಪಡಿಸಿಕೊಳ್ಳಬೇಕು’ ಎಂದರು.</p>.<p>ಕಾಮಗಾರಿಯ ಬಗ್ಗೆ ಪಿಡಿಒ ಮತ್ತು ಕೆಆರ್ಐಡಿಎಲ್ ಅಧಿಕಾರಿಗಳಿಂದ ಮಾಹಿತಿ ಪಡೆದ ಜಿ.ಪಂ.ಸಿಇಒ ನಂದಿನಿ ಅವರು ನಿರ್ವಹಣೆಯನ್ನು ಸರಿಯಾಗಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ಪಾಂಡವಪುರ ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿರುವ ಸಕ್ಕಿಂಗ್ ಯಂತ್ರವನ್ನು ಗ್ರಾ.ಪಂ.ಮಟ್ಟದ ಒಕ್ಕೂಟಕ್ಕೆ ಹಸ್ತಾಂತರ ಮಾಡಿ ಉದ್ಯಮದ ಮಾದರಿಯಲ್ಲಿ ನಿರ್ವಹಣೆ ಮಾಡಲು ಕ್ರಮವಹಿಸುವಂತೆ ತಾ.ಪಂ.ಇಒ ವೀಣಾ ಅವರಿಗೆ ಸೂಚನೆ ನೀಡಿದರು.</p>.<p>ಮಲ ತ್ಯಾಜ್ಯ ನಿರ್ವಹಣಾ ಘಟಕಗಳನ್ನು ಕೆಆರ್ಐಡಿಎಲ್ ನಿರ್ವಹಿಸುತ್ತಿದ್ದು, ಎರಡು ಘಟಕಗಳನ್ನು ಈಗಾಗಲೇ ಪೂರ್ಣಗೊಳಿಸಿದೆ. ಉಳಿದ ಘಟಕಗಳ ಕಾಮಗಾರಿ ಪ್ರಗತಿಯಲ್ಲಿದ್ದು, ಶೀಘ್ರ ಪೂರ್ಣಗೊಳಿಸುವುದಾಗಿ ಕೆಆರ್ಐಡಿಎಲ್ ಇಇ ಸೋಮಶೇಖರ್ ಅವರು ಜಿ.ಪಂ.ಸಿಇಒ ನಂದಿನಿ ಅವರಿಗೆ ಮಾಹಿತಿ ನೀಡಿದರು.</p>.<p>ಜಿ.ಪಂ.ಉಪ ಕಾರ್ಯದರ್ಶಿ ಲಕ್ಷ್ಮೀ, ತಾ.ಪಂ.ಇಒ ವೀಣಾ, ಕೆ.ಆರ್.ಪೇಟೆ ತಾ.ಪಂ.ಇಒ ಸುಷ್ಮಾ ಇತರರು ಇದ್ದರು.</p>.<p><strong>ಮಲ ತ್ಯಾಜ್ಯ ನಿರ್ವಹಣಾ ಘಟಕ ಕಾಮಗಾರಿ ಪರಿಶೀಲನೆ ಕಾಮಗಾರಿಯ ಸಮರ್ಪಕ ನಿರ್ವಹಣೆಗೆ ಸಿಇಒ ಸೂಚನೆ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>