<p>ಶ್ರೀರಂಗಪಟ್ಟಣ: ₹14 ಕೋಟಿ ವೆಚ್ಚದಲ್ಲಿ ಆಧುನೀಕರಣಗೊಂಡಿರುವ ಐತಿಹಾಸಿಕ ಬಂಗಾರದೊಡ್ಡಿ ನಾಲೆ ಮೂಲಕ ಕೃಷಿ ಭೂಮಿಗೆ ನೀರು ಹರಿಸುವ ಕಾರ್ಯಕ್ಕೆ ಶಾಸಕ ರವೀಂದ್ರ ಶ್ರೀಕಂಠಯ್ಯ ಬುಧವಾರ ಚಾಲನೆ ನೀಡಿದರು.</p>.<p>ಪಟ್ಟಣ ಸಮೀಪ ಕಾವೇರಿ ನದಿಗೆ ನಿರ್ಮಿಸಿರುವ ಬಂಗಾರದೊಡ್ಡಿ ಅಣೆಕಟ್ಟೆಯ ಬಳಿ ಕಾವೇರಿ ನದಿಗೆ ಪೂಜೆ ಸಲ್ಲಿಸಿ, ಗೇಟ್ ತೆರೆದು ನೀರು ಹರಿಯಬಿಟ್ಟರು.</p>.<p>350 ವರ್ಷಗಳ ಹಿಂದೆ, ಕಂಠೀರವ ನರಸರಾಜ ಒಡೆಯರ್ ಅವರು ನಿರ್ಮಿಸಿರುವ 8 ಕಿ.ಮೀ. ಉದ್ದದ ಈ ನಾಲೆ ತೀರಾ ಶಿಥಿಲಗೊಂಡಿತ್ತು. ನೀರು ಸೋರಿಕೆ ತಡೆಯುವುದು ಮತ್ತು ಮುಂದಿನ ಭಾಗಕ್ಕೆ ಸರಾಗವಾಗಿ ನೀರು ಹರಿಯು ವಂತೆ ಮಾಡಲು ಕಳೆದ ಬೇಸಿಗೆಯ ಆರಂಭದಲ್ಲಿ ನಾಲೆಯ ಆಧುನೀಕರಣ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿತ್ತು. ಸುಮಾರು ಒಂದು ಸಾವಿರ ಎಕರೆ ಕೃಷಿ ಭೂಮಿಗೆ ನೀರುಣಿಸುವ ಈ ನಾಲೆಯ ಆಧುನೀಕರಣ ಕಾಮಗಾರಿ ಭಾಗಶಃ ಮುಗಿದಿದ್ದು, ಮುಂಗಾರು ಹಂಗಾಮು ಬೆಳೆಗೆ ಅನುಕೂಲ ಆಗಲೆಂದು ನೀರು ಹರಿಸಲಾಗಿದೆ ಎಂದು ರವೀಂದ್ರ ಶ್ರೀಕಂಠಯ್ಯ ಹೇಳಿದರು.</p>.<p>‘ಕಾವೇರಿ ನೀರಾವರಿ ನಿಗಮದ ಅನುದಾನದಲ್ಲಿ 65 ಕ್ಯುಸೆಕ್ ನೀರು ಹರಿವಿನ ಸಾಮರ್ಥ್ಯದ ನಾಲೆಯ ಆಧುನೀಕರಣ ಕಾಮಗಾರಿ ನಡೆದಿದೆ. ನಾಲೆಯ ಅಲ್ಪ ಸ್ವಲ್ಪ ಕೆಲಸ ಮಾತ್ರ ಬಾಕಿ ಇದ್ದು, ಒಂದೆರಡು ತಿಂಗಳಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದು ಅವರು ತಿಳಿಸಿದರು.</p>.<p>ವೈದಿಕರಾದ ಕೆ.ಎಸ್. ಲಕ್ಷ್ಮೀಶ್ ಶರ್ಮಾ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ನಡೆದವು.</p>.<p>ಕಾವೇರಿ ನೀರಾವರಿ ನಿಗಮದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ತಮ್ಮೇಗೌಡ, ಪುರಸಭೆ ಅಧ್ಯಕ್ಷೆ ನಿರ್ಮಲಾ, ಉಪಾಧ್ಯಕ್ಷ ಎಸ್.ಪ್ರಕಾಶ್, ಸದಸ್ಯರಾದ ಕೃಷ್ಣಪ್ಪ, ಗಂಜಾಂ ಶಿವು, ಲಿಂಗರಾಜು, ಎಸ್.ಟಿ. ರಾಜು, ಪೂರ್ಣಿಮಾ, ರವಿಕುಮಾರ್, ಚೈತ್ರಾ, ಮಾಜಿ ಸದಸ್ಯ ವಿಜೇಂದ್ರು, ಮುಖಂಡರಾದ ಸತ್ಯಪ್ಪ, ಬಾಲು, ಶೇಖರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶ್ರೀರಂಗಪಟ್ಟಣ: ₹14 ಕೋಟಿ ವೆಚ್ಚದಲ್ಲಿ ಆಧುನೀಕರಣಗೊಂಡಿರುವ ಐತಿಹಾಸಿಕ ಬಂಗಾರದೊಡ್ಡಿ ನಾಲೆ ಮೂಲಕ ಕೃಷಿ ಭೂಮಿಗೆ ನೀರು ಹರಿಸುವ ಕಾರ್ಯಕ್ಕೆ ಶಾಸಕ ರವೀಂದ್ರ ಶ್ರೀಕಂಠಯ್ಯ ಬುಧವಾರ ಚಾಲನೆ ನೀಡಿದರು.</p>.<p>ಪಟ್ಟಣ ಸಮೀಪ ಕಾವೇರಿ ನದಿಗೆ ನಿರ್ಮಿಸಿರುವ ಬಂಗಾರದೊಡ್ಡಿ ಅಣೆಕಟ್ಟೆಯ ಬಳಿ ಕಾವೇರಿ ನದಿಗೆ ಪೂಜೆ ಸಲ್ಲಿಸಿ, ಗೇಟ್ ತೆರೆದು ನೀರು ಹರಿಯಬಿಟ್ಟರು.</p>.<p>350 ವರ್ಷಗಳ ಹಿಂದೆ, ಕಂಠೀರವ ನರಸರಾಜ ಒಡೆಯರ್ ಅವರು ನಿರ್ಮಿಸಿರುವ 8 ಕಿ.ಮೀ. ಉದ್ದದ ಈ ನಾಲೆ ತೀರಾ ಶಿಥಿಲಗೊಂಡಿತ್ತು. ನೀರು ಸೋರಿಕೆ ತಡೆಯುವುದು ಮತ್ತು ಮುಂದಿನ ಭಾಗಕ್ಕೆ ಸರಾಗವಾಗಿ ನೀರು ಹರಿಯು ವಂತೆ ಮಾಡಲು ಕಳೆದ ಬೇಸಿಗೆಯ ಆರಂಭದಲ್ಲಿ ನಾಲೆಯ ಆಧುನೀಕರಣ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿತ್ತು. ಸುಮಾರು ಒಂದು ಸಾವಿರ ಎಕರೆ ಕೃಷಿ ಭೂಮಿಗೆ ನೀರುಣಿಸುವ ಈ ನಾಲೆಯ ಆಧುನೀಕರಣ ಕಾಮಗಾರಿ ಭಾಗಶಃ ಮುಗಿದಿದ್ದು, ಮುಂಗಾರು ಹಂಗಾಮು ಬೆಳೆಗೆ ಅನುಕೂಲ ಆಗಲೆಂದು ನೀರು ಹರಿಸಲಾಗಿದೆ ಎಂದು ರವೀಂದ್ರ ಶ್ರೀಕಂಠಯ್ಯ ಹೇಳಿದರು.</p>.<p>‘ಕಾವೇರಿ ನೀರಾವರಿ ನಿಗಮದ ಅನುದಾನದಲ್ಲಿ 65 ಕ್ಯುಸೆಕ್ ನೀರು ಹರಿವಿನ ಸಾಮರ್ಥ್ಯದ ನಾಲೆಯ ಆಧುನೀಕರಣ ಕಾಮಗಾರಿ ನಡೆದಿದೆ. ನಾಲೆಯ ಅಲ್ಪ ಸ್ವಲ್ಪ ಕೆಲಸ ಮಾತ್ರ ಬಾಕಿ ಇದ್ದು, ಒಂದೆರಡು ತಿಂಗಳಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದು ಅವರು ತಿಳಿಸಿದರು.</p>.<p>ವೈದಿಕರಾದ ಕೆ.ಎಸ್. ಲಕ್ಷ್ಮೀಶ್ ಶರ್ಮಾ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ನಡೆದವು.</p>.<p>ಕಾವೇರಿ ನೀರಾವರಿ ನಿಗಮದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ತಮ್ಮೇಗೌಡ, ಪುರಸಭೆ ಅಧ್ಯಕ್ಷೆ ನಿರ್ಮಲಾ, ಉಪಾಧ್ಯಕ್ಷ ಎಸ್.ಪ್ರಕಾಶ್, ಸದಸ್ಯರಾದ ಕೃಷ್ಣಪ್ಪ, ಗಂಜಾಂ ಶಿವು, ಲಿಂಗರಾಜು, ಎಸ್.ಟಿ. ರಾಜು, ಪೂರ್ಣಿಮಾ, ರವಿಕುಮಾರ್, ಚೈತ್ರಾ, ಮಾಜಿ ಸದಸ್ಯ ವಿಜೇಂದ್ರು, ಮುಖಂಡರಾದ ಸತ್ಯಪ್ಪ, ಬಾಲು, ಶೇಖರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>