<p><strong>ಶ್ರೀರಂಗಪಟ್ಟಣ</strong>: ತಾಲ್ಲೂಕಿನ ಅರಕೆರೆ ಹೋಬಳಿಯ 12 ಗ್ರಾಮಗಳ ಕೆರೆ– ಕಟ್ಟೆಗಳಿಗೆ ಕಾವೇರಿ ನದಿಯಿಂದ ನೀರು ತುಂಬಿಸುವ ಯೋಜನೆ ಈ ವರ್ಷಾಂತ್ಯಕ್ಕೆ ಅನುಷ್ಠಾನಗೊಳ್ಳಲಿದೆ’ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ತಿಳಿಸಿದರು.</p>.<p>ತಾಲ್ಲೂಕಿನ ಅರಕೆರೆ, ನೇರಲಕೆರೆ, ಕಾಲ್ಕೆರೆ, ಮಾರಸಿಂಗನಹಳ್ಳಿ, ಗಾಮನಹಳ್ಳಿ ಇತರ ಗ್ರಾಮಗಳಿಗೆ ಕಾವೇರಿ ನೀರಾವರಿ ನಿಗಮ ಮತ್ತು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳ ಜತೆ ಸೋಮವಾರ ಭೇಟಿ ನೀಡಿ ಆಯಾ ಗ್ರಾಮಗಳ ರೈತರ ಜತೆ ಅವರು ಚರ್ಚಿಸಿದರು. ಈ ಭಾಗದ ಕೆರೆ, ಕಟ್ಟೆಗಳಿಗೆ ನೀರು ತುಂಬಿಸಬೇಕು ಎಂಬುದು ನನ್ನ ತಂದೆ, ಮಾಜಿ ಸಚಿವ ಎ.ಎಸ್. ಬಂಡಿಸಿದ್ದೇಗೌಡ ಅವರ ಆಶಯವಾಗಿತ್ತು. ಈ ಯೋಜನೆ ಅನುಷ್ಠಾನಕ್ಕೆ ಕಾಲ ಕೂಡಿ ಬಂದಿದೆ ಎಂದು ಹೇಳಿದರು.</p>.<p>ಕಾವೇರಿ ನದಿಯಿಂದ ಕೆರೆ, ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಗೆ ಅನುದಾನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದೆ. ತಕ್ಷಣ ಸ್ಪಂದಿಸಿದ ಅವರು ಈ ಯೋಜನೆಗೆ ₹35 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ. ಮಂಡ್ಯಕೊಪ್ಪಲು ಬಳಿ ಕಾವೇರಿ ನದಿಯಿಂದ, ಏತ ನೀರಾವರಿ ಯೋಜನೆ ಮೂಲಕ ನೇರಲಕೆರೆ ಮಾರ್ಗವಾಗಿ ಮೊತ್ತಹಳ್ಳಿ ವರೆಗೂ ನೀರು ಕೊಂಡೊಯ್ಯಲಾಗುತ್ತದೆ. ಇದರಿಂದ ಮಳೆಯಾಶ್ರಿತ ಗ್ರಾಮಗಳ ಜನ, ಜಾನುವಾರುಗಳಿಗೆ ಬೇಸಿಗೆಯಲ್ಲೂ ನೀರು ಸಿಗಲಿದೆ. ಕೃಷಿಗೂ ಅನುಕೂಲವಾಗಲಿದೆ ಎಂದು ತಿಳಿಸಿದರು.</p>.<p>ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಎಂಜಿನಿಯರ್ ಜಯಂತ್, ಎಇಇ ಜಯರಾಂ, ಎಇ ಕಿರಣ್, ಸಣ್ಣ ನೀರಾವರಿ ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಈಶ್ವರ್, ತಾ.ಪಂ. ಮಾಜಿ ಸದಸ್ಯ ಸುರೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ</strong>: ತಾಲ್ಲೂಕಿನ ಅರಕೆರೆ ಹೋಬಳಿಯ 12 ಗ್ರಾಮಗಳ ಕೆರೆ– ಕಟ್ಟೆಗಳಿಗೆ ಕಾವೇರಿ ನದಿಯಿಂದ ನೀರು ತುಂಬಿಸುವ ಯೋಜನೆ ಈ ವರ್ಷಾಂತ್ಯಕ್ಕೆ ಅನುಷ್ಠಾನಗೊಳ್ಳಲಿದೆ’ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ತಿಳಿಸಿದರು.</p>.<p>ತಾಲ್ಲೂಕಿನ ಅರಕೆರೆ, ನೇರಲಕೆರೆ, ಕಾಲ್ಕೆರೆ, ಮಾರಸಿಂಗನಹಳ್ಳಿ, ಗಾಮನಹಳ್ಳಿ ಇತರ ಗ್ರಾಮಗಳಿಗೆ ಕಾವೇರಿ ನೀರಾವರಿ ನಿಗಮ ಮತ್ತು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳ ಜತೆ ಸೋಮವಾರ ಭೇಟಿ ನೀಡಿ ಆಯಾ ಗ್ರಾಮಗಳ ರೈತರ ಜತೆ ಅವರು ಚರ್ಚಿಸಿದರು. ಈ ಭಾಗದ ಕೆರೆ, ಕಟ್ಟೆಗಳಿಗೆ ನೀರು ತುಂಬಿಸಬೇಕು ಎಂಬುದು ನನ್ನ ತಂದೆ, ಮಾಜಿ ಸಚಿವ ಎ.ಎಸ್. ಬಂಡಿಸಿದ್ದೇಗೌಡ ಅವರ ಆಶಯವಾಗಿತ್ತು. ಈ ಯೋಜನೆ ಅನುಷ್ಠಾನಕ್ಕೆ ಕಾಲ ಕೂಡಿ ಬಂದಿದೆ ಎಂದು ಹೇಳಿದರು.</p>.<p>ಕಾವೇರಿ ನದಿಯಿಂದ ಕೆರೆ, ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಗೆ ಅನುದಾನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದೆ. ತಕ್ಷಣ ಸ್ಪಂದಿಸಿದ ಅವರು ಈ ಯೋಜನೆಗೆ ₹35 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ. ಮಂಡ್ಯಕೊಪ್ಪಲು ಬಳಿ ಕಾವೇರಿ ನದಿಯಿಂದ, ಏತ ನೀರಾವರಿ ಯೋಜನೆ ಮೂಲಕ ನೇರಲಕೆರೆ ಮಾರ್ಗವಾಗಿ ಮೊತ್ತಹಳ್ಳಿ ವರೆಗೂ ನೀರು ಕೊಂಡೊಯ್ಯಲಾಗುತ್ತದೆ. ಇದರಿಂದ ಮಳೆಯಾಶ್ರಿತ ಗ್ರಾಮಗಳ ಜನ, ಜಾನುವಾರುಗಳಿಗೆ ಬೇಸಿಗೆಯಲ್ಲೂ ನೀರು ಸಿಗಲಿದೆ. ಕೃಷಿಗೂ ಅನುಕೂಲವಾಗಲಿದೆ ಎಂದು ತಿಳಿಸಿದರು.</p>.<p>ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಎಂಜಿನಿಯರ್ ಜಯಂತ್, ಎಇಇ ಜಯರಾಂ, ಎಇ ಕಿರಣ್, ಸಣ್ಣ ನೀರಾವರಿ ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಈಶ್ವರ್, ತಾ.ಪಂ. ಮಾಜಿ ಸದಸ್ಯ ಸುರೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>