<p><strong>ಶ್ರೀರಂಗಪಟ್ಟಣ</strong>: ‘ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಹಿನ್ನೀರಿನಿಂದ 133 ಅಡಿ ಆಳದಲ್ಲಿ ಮೈಸೂರು ನಗರಕ್ಕೆ ನೀರು ಕೊಂಡೊಯ್ಯುತ್ತಿದ್ದು, ಇದರಿಂದ ಮಂಡ್ಯ ಜಿಲ್ಲೆಗೆ ತೊಂದರೆಯಾಗಲಿದೆ’ ಎಂದು ಬಿಜೆಪಿ ಮುಖಂಡ ಕೆ.ಎಸ್. ನಂಜುಂಡೇಗೌಡ ಹೇಳಿದರು.</p>.<p>‘ಹಳೇ ಉಂಡವಾಡಿ ಗ್ರಾಮದಿಂದ ಮೈಸೂರು ನಗರದವರೆಗೆ 6 ಅಡಿ ವ್ಯಾಸದ ಕೊಳವೆಗಳನ್ನು ಅಳವಡಿಸಿ ನೀರು ಕೊಂಡೊಯ್ಯುವ ಕಾಮಗಾರಿ ನಡೆಯುತ್ತಿದೆ. ಈ ಪ್ರಮಾಣದಲ್ಲಿ ನೀರು ಹೋದರೆ 4 ದಿನಗಳಲ್ಲಿ ಜಲಾಶಯದ ಒಂದು ಟಿಎಂಸಿ ಅಡಿ ನೀರು ಖಾಲಿಯಾಗಲಿದೆ. ಜಲಾಶಯದ 130 ಅಡಿ ಆಳದಲ್ಲಿ ಈ ಬೃಹತ್ ಕೊಳವೆಗಳನ್ನು ಹಾಕಲಾಗುತ್ತಿದ್ದು, ಡೆಡ್ ಸ್ಟೋರೇಜ್ವರೆಗೂ ನೀರು ಖಾಲಿಯಾಗಲಿದೆ. ಬೆಂಗಳೂರು ನಗರಕ್ಕೂ ಇದೇ ರೀತಿ ನೀರು ಕೊಂಡೊಯ್ಯುವ ಪ್ರಯತ್ನ ನಡೆಯುತ್ತಿದೆ. ಇದರಿಂದ ಮಂಡ್ಯ ಜಿಲ್ಲೆಗೆ ಯಾವುದೇ ತೊಂದರೆ ಇಲ್ಲ ಎಂಬುದನ್ನು ಜಿಲ್ಲಾ ಉಸ್ತುವಾರಿ ಸಚಿವರು ಸ್ಪಷ್ಟಪಡಿಸಬೇಕು’ ಎಂದು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಬೆಂಗಳೂರಿನಲ್ಲಿ, ರಾಜ್ಯ ಸರ್ಕಾರ ಆಯೋಜಿಸಿದ್ದ ಐಪಿಲ್ ಗೆಲುವಿನ ವಿಜಯೋತ್ಸವದಲ್ಲಿ 11 ಮಂದಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಸಂವಿಧಾನದ ಬಗ್ಗೆ ಗೌರವ ಇದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು.</p>.<p>ವಿಜಯೋತ್ಸವಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಲಾಯಿತು. ಬಿಜೆಪಿ ಮುಖಂಡರಾದ ಹನಿಯಂಬಾಡಿ ನಾಗರಾಜು, ಬಿ.ಸಿ. ಕೃಷ್ಣೇಗೌಡ, ದರಸಗುಪ್ಪೆ ಸುರೇಶ್, ಪುಟ್ಟಮಾದು, ರಾಮಕೃಷ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ</strong>: ‘ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಹಿನ್ನೀರಿನಿಂದ 133 ಅಡಿ ಆಳದಲ್ಲಿ ಮೈಸೂರು ನಗರಕ್ಕೆ ನೀರು ಕೊಂಡೊಯ್ಯುತ್ತಿದ್ದು, ಇದರಿಂದ ಮಂಡ್ಯ ಜಿಲ್ಲೆಗೆ ತೊಂದರೆಯಾಗಲಿದೆ’ ಎಂದು ಬಿಜೆಪಿ ಮುಖಂಡ ಕೆ.ಎಸ್. ನಂಜುಂಡೇಗೌಡ ಹೇಳಿದರು.</p>.<p>‘ಹಳೇ ಉಂಡವಾಡಿ ಗ್ರಾಮದಿಂದ ಮೈಸೂರು ನಗರದವರೆಗೆ 6 ಅಡಿ ವ್ಯಾಸದ ಕೊಳವೆಗಳನ್ನು ಅಳವಡಿಸಿ ನೀರು ಕೊಂಡೊಯ್ಯುವ ಕಾಮಗಾರಿ ನಡೆಯುತ್ತಿದೆ. ಈ ಪ್ರಮಾಣದಲ್ಲಿ ನೀರು ಹೋದರೆ 4 ದಿನಗಳಲ್ಲಿ ಜಲಾಶಯದ ಒಂದು ಟಿಎಂಸಿ ಅಡಿ ನೀರು ಖಾಲಿಯಾಗಲಿದೆ. ಜಲಾಶಯದ 130 ಅಡಿ ಆಳದಲ್ಲಿ ಈ ಬೃಹತ್ ಕೊಳವೆಗಳನ್ನು ಹಾಕಲಾಗುತ್ತಿದ್ದು, ಡೆಡ್ ಸ್ಟೋರೇಜ್ವರೆಗೂ ನೀರು ಖಾಲಿಯಾಗಲಿದೆ. ಬೆಂಗಳೂರು ನಗರಕ್ಕೂ ಇದೇ ರೀತಿ ನೀರು ಕೊಂಡೊಯ್ಯುವ ಪ್ರಯತ್ನ ನಡೆಯುತ್ತಿದೆ. ಇದರಿಂದ ಮಂಡ್ಯ ಜಿಲ್ಲೆಗೆ ಯಾವುದೇ ತೊಂದರೆ ಇಲ್ಲ ಎಂಬುದನ್ನು ಜಿಲ್ಲಾ ಉಸ್ತುವಾರಿ ಸಚಿವರು ಸ್ಪಷ್ಟಪಡಿಸಬೇಕು’ ಎಂದು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.</p>.<p>‘ಬೆಂಗಳೂರಿನಲ್ಲಿ, ರಾಜ್ಯ ಸರ್ಕಾರ ಆಯೋಜಿಸಿದ್ದ ಐಪಿಲ್ ಗೆಲುವಿನ ವಿಜಯೋತ್ಸವದಲ್ಲಿ 11 ಮಂದಿ ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಸಂವಿಧಾನದ ಬಗ್ಗೆ ಗೌರವ ಇದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು.</p>.<p>ವಿಜಯೋತ್ಸವಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಲಾಯಿತು. ಬಿಜೆಪಿ ಮುಖಂಡರಾದ ಹನಿಯಂಬಾಡಿ ನಾಗರಾಜು, ಬಿ.ಸಿ. ಕೃಷ್ಣೇಗೌಡ, ದರಸಗುಪ್ಪೆ ಸುರೇಶ್, ಪುಟ್ಟಮಾದು, ರಾಮಕೃಷ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>