ಇಲ್ಲಿನ ಅಂಬೇಡ್ಕರ್ ಭವನದ ಬಳಿ, ಕಾವೇರಿ ನದಿಯ ದಡದಲ್ಲಿ ನಿಂತು ಪ್ರತಿಭಟಿಸಿದರು. ರಾಜ್ಯ ಸರ್ಕಾರ, ಮುಖ್ಯಮಂತ್ರಿ, ಜಲ ಸಂಪನ್ಮೂಲ ಇಲಾಖೆ ಹಾಗೂ ಕಾವೇರಿ ನೀರಾವರಿ ನಿಗಮದ ವಿರುದ್ಧ ಘೋಷಣೆ ಕೂಗಿದರು. ತಮಿಳುನಾಡಿಗೆ ನೀರು ಹರಿಸುವುದನ್ನು ತಕ್ಷಣ ನಿಲ್ಲಿಸಬೇಕು ಎಂದು ವೇದಿಕೆಯ ಅಧ್ಯಕ್ಷ ಬಿ. ಶಂಕರಬಾಬು ಆಗ್ರಹಿಸಿದರು.