ಗ್ರಾಮದಲ್ಲಿ ನೂತನ ಶಾಲಾ ಕಟ್ಟಡ ಕಟ್ಟಲು ಉದ್ದೇಶಿಸುವ ಜಾಗ ತಮಗೆ ಸೇರಬೇಕು ಎಂದು ಖಾಸಗಿ ವ್ಯಕ್ತಿಯೊಬ್ಬರು ಕೋರ್ಟ್ ಮೆಟ್ಟಿಲೇರಿದ್ದಾರೆ. ಹಳೆಯ ಶಾಲಾ ಕಟ್ಟಡ ಶಿಥಿಲಗೊಂಡಿದ್ದು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡದಲ್ಲಿ ತರಗತಿ ನಡೆಸಲಾಗುತ್ತಿದೆ. ಈ ಕುರಿತು ಗ್ರಾಮದ ಮುಖಂಡ ಪುಟ್ಟಸ್ವಾಮಿ ಸಚಿವ ಸುರೇಶ್ಕುಮಾರ್ ಅವರ ವಾಟ್ಸ್ಆ್ಯಪ್ ಸಂಖ್ಯೆ ಪಡೆದು ಸಮಸ್ಯೆ ಬಗ್ಗೆ ವಿವರಿಸಿ ದೂರು ಕೊಟ್ಟಿದ್ದರು.