‘ಕಾಂಗ್ರೆಸ್ ದರೋಡೆ ಮಾಡುತ್ತಿದೆ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಟೀಕೆಗೆ ಪ್ರತಿಕ್ರಿಯಿಸಿದ ಅವರು, ‘ನಾವು ವಿರೋಧ ಪಕ್ಷದಲ್ಲಿದ್ದೇವೆ. ಬಿಜೆಪಿಯವರು ಅಧಿಕಾರದಲ್ಲಿದ್ದಾರೆ. ಅವರೇ ಹಗಲು ದರೋಡೆ ನಡೆ ಸುತ್ತಿದ್ದು, ತಪ್ಪಾಗಿ ಕಾಂಗ್ರೆಸ್ ಎಂದು ಹೇಳಿರಬಹುದು’ ಎಂದು ತಿರುಗೇಟು ನೀಡಿದರು. ‘ನಮ್ಮ ಮೇಲೆ ಆರೋಪ ಮಾಡುವ ಅವರು ವಿರೋಧ ಪಕ್ಷದಲ್ಲಿದ್ದಾಗ ಏನು ಮಾಡುತ್ತಿದ್ದರು? ಆಗ ಕೊಲೆ ಮಾಡಿದ್ದೇವೆ ಎಂದು ಅವರೂ ಕೊಲೆ ಮಾಡುತ್ತಾರೆಯೇ? ಅವರ ತಪ್ಪುಗಳನ್ನು ಮುಚ್ಚಿಕೊಳ್ಳಲು ನಮ್ಮ ಮೇಲೆ ಆರೋಪ ಮಾಡುತ್ತಾರೆ’ ಎಂದರು.