<p><strong>ಕೆ.ಆರ್.ಪೇಟೆ:</strong> ತಾಲ್ಲೂಕಿನ ಕತ್ತರಘಟ್ಟ ಗ್ರಾಮದಲ್ಲಿ ಹುಲ್ಲಿನ ಬಣವೆಗೆ ಹೊತ್ತಿದ್ದ ಬೆಂಕಿ ನಂದಿಸಲು ಹೋಗಿ ಮೃತಪಟ್ಟ ಪ್ರಕರಣ ಸಂಬಂಧ ಗ್ರಾಮದ ಸವರ್ಣೀಯ ಯುವಕ ಅನಿಲ್ಕುಮಾರ್ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.</p>.<p>‘ಅನಿಲ್ಕುಮಾರ್ ಜಾತಿ ನಿಂದನೆ ಮಾಡಿ, ಕೊಲೆ ಬೆದರಿಕೆ ಹಾಕಿದ್ದರಿಂದ ನನ್ನ ಪತಿ ಮನನೊಂದು ಹುಲ್ಲಿನ ಬಣವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಮೃತ ಜಯಕುಮಾರ್ ಪತ್ನಿ ಲಕ್ಷ್ಮಿ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.</p>.<p>‘ಗ್ರಾಮದಲ್ಲಿ ನಮಗೆ ಸೇರಿರುವ ಗ್ರಾಂಟ್ ಜಮೀನಿನಲ್ಲಿ ಅನಿಲ್ಕುಮಾರ್ ಹುಲ್ಲಿನ ಬಣವೆ ಹಾಕಿಕೊಂಡಿದ್ದು, ತೆರವು ಮಾಡುವಂತೆ ಒತ್ತಾಯಿಸುತ್ತಾ ಬರಲಾಗಿತ್ತು. ಈ ಸಂಬಂಧ ಗ್ರಾಮದಲ್ಲಿ ರಾಜಿ ಪಂಚಾಯ್ತಿ ಮಾಡಿ ಅದು ಪ್ರಯೋಜನವಾಗದೇ ಇದ್ದುದರಿಂದ ನನ್ನ ಪತಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದರಿಂದ ಅನಿಲ್ಕುಮಾರ್ ಮತ್ತು ನನ್ನ ಪತಿ ಜಯಕುಮಾರ್ ನಡುವೆ ಶನಿವಾರ ಪರಸ್ಪರ ಗಲಾಟೆ ನಡೆದಿತ್ತು’ ಎಂದು ತಿಳಿಸಿದ್ದಾರೆ. </p>.<p>‘ಆರೋಪಿಯು ನನ್ನ ಪತಿಯನ್ನು ಮನಬಂದಂತೆ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದರಿಂದಲೇ ಮನನೊಂದು ನನ್ನ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದು, ನನ್ನ ಪತಿಯ ಸಾವಿಗೆ ಕಾರಣನಾಗಿರುವ ಅನಿಲ್ ಕುಮಾರ್ ವಿರುದ್ಧ ಸೂಕಕ್ತ ಕ್ರಮ ಜರುಗಿಸಬೇಕು’ ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.</p>.<p>ನಾಗಮಂಗಲ ಡಿವೈಎಸ್ಪಿ ಚಲುವರಾಜು, ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಆನಂದ್ ಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪೇಟೆ:</strong> ತಾಲ್ಲೂಕಿನ ಕತ್ತರಘಟ್ಟ ಗ್ರಾಮದಲ್ಲಿ ಹುಲ್ಲಿನ ಬಣವೆಗೆ ಹೊತ್ತಿದ್ದ ಬೆಂಕಿ ನಂದಿಸಲು ಹೋಗಿ ಮೃತಪಟ್ಟ ಪ್ರಕರಣ ಸಂಬಂಧ ಗ್ರಾಮದ ಸವರ್ಣೀಯ ಯುವಕ ಅನಿಲ್ಕುಮಾರ್ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.</p>.<p>‘ಅನಿಲ್ಕುಮಾರ್ ಜಾತಿ ನಿಂದನೆ ಮಾಡಿ, ಕೊಲೆ ಬೆದರಿಕೆ ಹಾಕಿದ್ದರಿಂದ ನನ್ನ ಪತಿ ಮನನೊಂದು ಹುಲ್ಲಿನ ಬಣವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಮೃತ ಜಯಕುಮಾರ್ ಪತ್ನಿ ಲಕ್ಷ್ಮಿ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.</p>.<p>‘ಗ್ರಾಮದಲ್ಲಿ ನಮಗೆ ಸೇರಿರುವ ಗ್ರಾಂಟ್ ಜಮೀನಿನಲ್ಲಿ ಅನಿಲ್ಕುಮಾರ್ ಹುಲ್ಲಿನ ಬಣವೆ ಹಾಕಿಕೊಂಡಿದ್ದು, ತೆರವು ಮಾಡುವಂತೆ ಒತ್ತಾಯಿಸುತ್ತಾ ಬರಲಾಗಿತ್ತು. ಈ ಸಂಬಂಧ ಗ್ರಾಮದಲ್ಲಿ ರಾಜಿ ಪಂಚಾಯ್ತಿ ಮಾಡಿ ಅದು ಪ್ರಯೋಜನವಾಗದೇ ಇದ್ದುದರಿಂದ ನನ್ನ ಪತಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದರಿಂದ ಅನಿಲ್ಕುಮಾರ್ ಮತ್ತು ನನ್ನ ಪತಿ ಜಯಕುಮಾರ್ ನಡುವೆ ಶನಿವಾರ ಪರಸ್ಪರ ಗಲಾಟೆ ನಡೆದಿತ್ತು’ ಎಂದು ತಿಳಿಸಿದ್ದಾರೆ. </p>.<p>‘ಆರೋಪಿಯು ನನ್ನ ಪತಿಯನ್ನು ಮನಬಂದಂತೆ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದರಿಂದಲೇ ಮನನೊಂದು ನನ್ನ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದು, ನನ್ನ ಪತಿಯ ಸಾವಿಗೆ ಕಾರಣನಾಗಿರುವ ಅನಿಲ್ ಕುಮಾರ್ ವಿರುದ್ಧ ಸೂಕಕ್ತ ಕ್ರಮ ಜರುಗಿಸಬೇಕು’ ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.</p>.<p>ನಾಗಮಂಗಲ ಡಿವೈಎಸ್ಪಿ ಚಲುವರಾಜು, ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಆನಂದ್ ಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>