<p><strong>ಹಲಗೂರು:</strong> ಸಮೀಪದ ಕರಲಕಟ್ಟೆ ಗ್ರಾಮದ ಜಮೀನಿನಲ್ಲಿ ಸೋಮವಾರ ನಸುಕಿನ ವೇಳೆ ವಿದ್ಯುತ್ ಸ್ಪರ್ಶಿಸಿ ಕಾಡಾನೆ ಸ್ಥಳದಲ್ಲೇ ಮೃತಪಟ್ಟಿತು.</p>.<p>ಎಚ್.ಸಿ.ರಮೇಶ ಅವರ ಜಮೀನಿನ ಸುತ್ತಲೂ ಸೋಲಾರ್ ತಂತಿ ಬೇಲಿ ಹಾಕಿ, ವಿದ್ಯುತ್ ಸಂಪರ್ಕ ಕಲ್ಪಿಸಿದ್ದರು. ಭಾನುವಾರ ತಡರಾತ್ರಿ ಮುತ್ತತ್ತಿ ಅರಣ್ಯ ಪ್ರದೇಶದಿಂದ ಬಂದ ಕಾಡಾನೆಗಳು ವಿದ್ಯುತ್ ಸ್ಪರ್ಶವಾಗಿ ಹಿಂದೆ ಸರಿದಿದ್ದವು. ಆದರೆ ಅವುಗಳ ಪೈಕಿ 30 ವರ್ಷದ ಗಂಡಾನೆ ಮೃತಪಟ್ಟಿತು.</p>.<p>ಜಿಲ್ಲಾ ಅರಣ್ಯ ಸಂರಕ್ಷಣಾ ಅಧಿಕಾರಿ ರಘು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಹದೇವಸ್ವಾಮಿ, ಸಿಪಿಐ ಬಿ.ಎಸ್.ಶ್ರೀಧರ್, ಪ್ರಾದೇಶಿಕ ವಲಯ ಅರಣ್ಯ ಅಧಿಕಾರಿ ಮಧುರ ಮೂರ್ತಿ, ಪಿಎಸ್ಐ ಲೋಕೇಶ, ಸೆಸ್ಕ್ ಮಳವಳ್ಳಿ ಗ್ರಾಮೀಣ ಉಪ ವಿಭಾಗದ ಎಇಇ ನಿತೇಶ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿದರು.</p>.<p>ಡಾ.ವಸೀಂ ಮತ್ತು ಡಾ.ನವೀನ್ ನೇತೃತ್ವದಲ್ಲಿ ಮರಣೋತ್ತರ ಪರೀಕ್ಷೆ ನಡೆಯಿತು. ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಲಗೂರು:</strong> ಸಮೀಪದ ಕರಲಕಟ್ಟೆ ಗ್ರಾಮದ ಜಮೀನಿನಲ್ಲಿ ಸೋಮವಾರ ನಸುಕಿನ ವೇಳೆ ವಿದ್ಯುತ್ ಸ್ಪರ್ಶಿಸಿ ಕಾಡಾನೆ ಸ್ಥಳದಲ್ಲೇ ಮೃತಪಟ್ಟಿತು.</p>.<p>ಎಚ್.ಸಿ.ರಮೇಶ ಅವರ ಜಮೀನಿನ ಸುತ್ತಲೂ ಸೋಲಾರ್ ತಂತಿ ಬೇಲಿ ಹಾಕಿ, ವಿದ್ಯುತ್ ಸಂಪರ್ಕ ಕಲ್ಪಿಸಿದ್ದರು. ಭಾನುವಾರ ತಡರಾತ್ರಿ ಮುತ್ತತ್ತಿ ಅರಣ್ಯ ಪ್ರದೇಶದಿಂದ ಬಂದ ಕಾಡಾನೆಗಳು ವಿದ್ಯುತ್ ಸ್ಪರ್ಶವಾಗಿ ಹಿಂದೆ ಸರಿದಿದ್ದವು. ಆದರೆ ಅವುಗಳ ಪೈಕಿ 30 ವರ್ಷದ ಗಂಡಾನೆ ಮೃತಪಟ್ಟಿತು.</p>.<p>ಜಿಲ್ಲಾ ಅರಣ್ಯ ಸಂರಕ್ಷಣಾ ಅಧಿಕಾರಿ ರಘು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಹದೇವಸ್ವಾಮಿ, ಸಿಪಿಐ ಬಿ.ಎಸ್.ಶ್ರೀಧರ್, ಪ್ರಾದೇಶಿಕ ವಲಯ ಅರಣ್ಯ ಅಧಿಕಾರಿ ಮಧುರ ಮೂರ್ತಿ, ಪಿಎಸ್ಐ ಲೋಕೇಶ, ಸೆಸ್ಕ್ ಮಳವಳ್ಳಿ ಗ್ರಾಮೀಣ ಉಪ ವಿಭಾಗದ ಎಇಇ ನಿತೇಶ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿದರು.</p>.<p>ಡಾ.ವಸೀಂ ಮತ್ತು ಡಾ.ನವೀನ್ ನೇತೃತ್ವದಲ್ಲಿ ಮರಣೋತ್ತರ ಪರೀಕ್ಷೆ ನಡೆಯಿತು. ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>