ಭಾನುವಾರ ಪಶ್ಚಿಮವಾಹಿನಿಗೆ ಭೇಟಿ ನೀಡಿ ಮಾತನಾಡಿದ ಅವರು ‘ಆಂಜನೇಯನ ದೇವಾಲಯ ಒಡೆದು ಜಾಮಿಯಾ ಮಸೀದಿ ನಿರ್ಮಿಸಿರುವುದಕ್ಕೆ ಸಾಕಷ್ಟು ಕುರುಹುಗಳಿವೆ. ಅಲ್ಲಿ ಆಂಜನೇಯನ ಪೂಜೆಗೆ ಅವಕಾಶ ನೀಡಬೇಕು. ಮಸೀದಿ ಆವರಣದಲ್ಲಿ ಕೊಳದಲ್ಲಿ ಸ್ನಾನ ಮಾಡಿದರೆ, ತೀರ್ಥ ಸೇವನೆ ಮಾಡಿದರೆ ರೋಗರುಜಿನಗಳು ವಾಸಿಯಾಗುತ್ತವೆ. ಈ ಬಗ್ಗೆ ದಾಖಲೆಗಳಿದ್ದು ಮಂಡ್ಯ ಜಿಲ್ಲಾಧಿಕಾರಿಗಳು ತೀರ್ಥ ಸೇವನೆಗೆ ಅವಕಾಶ ನೀಡಬೇಕು’ ಎಂದು ಒತ್ತಾಯಿಸಿದರು.