ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಬುಧವಾರ ಎನ್ಡಿಎ ನಾಯಕರ ಸಭೆ ಇದ್ದು, ದೆಹಲಿಗೆ ತೆರಳುತ್ತಿದ್ದೇನೆ. ಕೇಂದ್ರದಲ್ಲಿ ಎನ್ಡಿಎ ಸರ್ಕಾರ ರಚನೆಗೆ ತೊಂದರೆ ಇಲ್ಲ. ಜಿಲ್ಲೆಯ ಜನ ನನ್ನನ್ನು ಪಕ್ಷಾತೀತವಾಗಿ ಬೆಂಬಲಿಸಿದ್ದಾರೆ, ಬೇರೆ ಪಕ್ಷಗಳ ಮುಖಂಡರೂ ಗೆಲುವಿಗೆ ಸಹಕರಿಸಿದ್ದಾರೆ. ಅವರ ನಿರೀಕ್ಷೆಗಳು ಸುಳ್ಳಾಗಲಿಲ್ಲ’ ಎಂದರು.