<p><strong>ಮಳವಳ್ಳಿ:</strong> ನಾಡಿನ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ನಾಡಪ್ರಭು ಕೆಂಪೇಗೌಡರು ಸಮ ಸಮಾಜದ ನಿರ್ಮಾಣಕ್ಕೆ ಮುನ್ನುಡಿ ಬರೆದಿದ್ದರು ಎಂದು ಮಂಡ್ಯ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶ್ ಗೌಡ ಹೇಳಿದರು.</p>.<p>ತಾಲ್ಲೂಕಿನ ಕೋರೇಗಾಲ ಗ್ರಾಮದಲ್ಲಿ ಶ್ರೀ ಬಾಲಾಜಿ ಸಾಂಸ್ಕೃತಿಕ ಟ್ರಸ್ಟ್ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ ಹಾಗೂ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತ್ಯುತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಜನರಿಗೆ ಉದ್ಯೋಗ ಕಲ್ಪಿಸಲು ಅನೇಕ ಕಾರ್ಖಾನೆಗಳನ್ನು ಸ್ಥಾಪಿಸಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ತಳಸಮುದಾಯಗಳಿಗೆ ಶಿಕ್ಷಣ ಮತ್ತು ಉದ್ಯೋಗ ನೀಡಲು ಶಾಲಾ- ಕಾಲೇಜು ಆರಂಭಿಸಿದರು. ನಾಡಪ್ರಭು ಕೆಂಪೇಗೌಡರು ಕೋಟೆ, ಪೇಟೆ, ಗುಡಿ, ಕೆರೆ, ಉದ್ಯಾನವನಗಳ ಪರಿಕಲ್ಪನೆಗಳೊಂದಿಗೆ ನವ ಬೆಂಗಳೂರು ನಿರ್ಮಾಣಕ್ಕೆ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.</p>.<p>ನಿವೃತ್ತ ಪ್ರಾಂಶುಪಾಲ ಪುಟ್ಟಸ್ವಾಮಿಗೌಡ ಮಾತನಾಡಿ, ಮಹನೀಯರನ್ನು ನಿರಂತರ ಸ್ಮರಿಸುವ ಜತೆಗೆ ಸಮಾಜಮುಖಿ ಚಟುವಟಿಕೆಗಳನ್ನು ನಡೆಸಬೇಕು ಎಂದು ಸಲಹೆ ನೀಡಿದರು.</p>.<p>ವಿವಿಧ ಕ್ಷೇತ್ರಗಳ ಸಾಧಕರನ್ನು ಅಭಿನಂದಿಸಿ, ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಿಸಲಾಯಿತು.</p>.<p>ಟ್ರಸ್ಟ್ ಅಧ್ಯಕ್ಷ ಕೆ.ಜಿ.ರಮೇಶ್, ಮನ್ ಮುಲ್ ನಿರ್ದೇಶಕ ಡಿ.ಕೃಷ್ಣೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪಿ.ರಾಜು, ನಿವೃತ್ತ ಶಿಕ್ಷಕರಾದ ಎನ್.ನಾಗರಾಜು, ಕಾಂತರಾಜು ಹಾಗೂ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ಪಾಲ್ಗೊಂಡಿದ್ದರು.</p>.<p>ಮಾದಹಳ್ಳಿಯಲ್ಲಿ ಜಯಂತಿ: ತಾಲ್ಲೂಕಿನ ಮಾದಹಳ್ಳಿ ಗ್ರಾಮದ ಮುಖ್ಯ ರಸ್ತೆ ಬಳಿಯ ಗ್ರಾಮಸ್ಥರು ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಿಸಿದರು.</p>.<p>ಗ್ರಾ.ಪಂ.ಮಾಜಿ ಸದಸ್ಯ ಎಂ.ಜಿ.ರಮೇಶ್ ಮಾತನಾಡಿ, ಕೆಂಪೇಗೌಡರ ಆದರ್ಶವನ್ನು ಎಲ್ಲರೂ ಪಾಲಿಸಬೇಕು ಎಂದು ಸಲಹೆ ನೀಡಿದರು.</p>.<p>ಗ್ರಾ.ಪಂ. ಸದಸ್ಯ ಅಭಿಲಾಷ್ ಗೌಡ, ಸಹಕಾರ ಸಂಘದ ಅಧ್ಯಕ್ಷ ಆನಂದ್, ಮುಖಂಡರಾದ ಮಹೇಶ್, ದೇವರಾಜು, ಎಂ.ಪಿ.ರಾಜು, ಎಂ.ಪಿ.ಉಮೇಶ್, ಮೊಗಣ್ಣ, ಚಿಕ್ಕಣ್ಣ, ಕೆಂಪೇಗೌಡ, ಸುರೇಶ್, ಅಭಿ, ಗಿರೀಶ್, ಬಸವರಾಜು, ಪ್ರಕಾಶ್, ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಳವಳ್ಳಿ:</strong> ನಾಡಿನ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ನಾಡಪ್ರಭು ಕೆಂಪೇಗೌಡರು ಸಮ ಸಮಾಜದ ನಿರ್ಮಾಣಕ್ಕೆ ಮುನ್ನುಡಿ ಬರೆದಿದ್ದರು ಎಂದು ಮಂಡ್ಯ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶ್ ಗೌಡ ಹೇಳಿದರು.</p>.<p>ತಾಲ್ಲೂಕಿನ ಕೋರೇಗಾಲ ಗ್ರಾಮದಲ್ಲಿ ಶ್ರೀ ಬಾಲಾಜಿ ಸಾಂಸ್ಕೃತಿಕ ಟ್ರಸ್ಟ್ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ ಹಾಗೂ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತ್ಯುತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಜನರಿಗೆ ಉದ್ಯೋಗ ಕಲ್ಪಿಸಲು ಅನೇಕ ಕಾರ್ಖಾನೆಗಳನ್ನು ಸ್ಥಾಪಿಸಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ತಳಸಮುದಾಯಗಳಿಗೆ ಶಿಕ್ಷಣ ಮತ್ತು ಉದ್ಯೋಗ ನೀಡಲು ಶಾಲಾ- ಕಾಲೇಜು ಆರಂಭಿಸಿದರು. ನಾಡಪ್ರಭು ಕೆಂಪೇಗೌಡರು ಕೋಟೆ, ಪೇಟೆ, ಗುಡಿ, ಕೆರೆ, ಉದ್ಯಾನವನಗಳ ಪರಿಕಲ್ಪನೆಗಳೊಂದಿಗೆ ನವ ಬೆಂಗಳೂರು ನಿರ್ಮಾಣಕ್ಕೆ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.</p>.<p>ನಿವೃತ್ತ ಪ್ರಾಂಶುಪಾಲ ಪುಟ್ಟಸ್ವಾಮಿಗೌಡ ಮಾತನಾಡಿ, ಮಹನೀಯರನ್ನು ನಿರಂತರ ಸ್ಮರಿಸುವ ಜತೆಗೆ ಸಮಾಜಮುಖಿ ಚಟುವಟಿಕೆಗಳನ್ನು ನಡೆಸಬೇಕು ಎಂದು ಸಲಹೆ ನೀಡಿದರು.</p>.<p>ವಿವಿಧ ಕ್ಷೇತ್ರಗಳ ಸಾಧಕರನ್ನು ಅಭಿನಂದಿಸಿ, ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಿಸಲಾಯಿತು.</p>.<p>ಟ್ರಸ್ಟ್ ಅಧ್ಯಕ್ಷ ಕೆ.ಜಿ.ರಮೇಶ್, ಮನ್ ಮುಲ್ ನಿರ್ದೇಶಕ ಡಿ.ಕೃಷ್ಣೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪಿ.ರಾಜು, ನಿವೃತ್ತ ಶಿಕ್ಷಕರಾದ ಎನ್.ನಾಗರಾಜು, ಕಾಂತರಾಜು ಹಾಗೂ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ಪಾಲ್ಗೊಂಡಿದ್ದರು.</p>.<p>ಮಾದಹಳ್ಳಿಯಲ್ಲಿ ಜಯಂತಿ: ತಾಲ್ಲೂಕಿನ ಮಾದಹಳ್ಳಿ ಗ್ರಾಮದ ಮುಖ್ಯ ರಸ್ತೆ ಬಳಿಯ ಗ್ರಾಮಸ್ಥರು ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಿಸಿದರು.</p>.<p>ಗ್ರಾ.ಪಂ.ಮಾಜಿ ಸದಸ್ಯ ಎಂ.ಜಿ.ರಮೇಶ್ ಮಾತನಾಡಿ, ಕೆಂಪೇಗೌಡರ ಆದರ್ಶವನ್ನು ಎಲ್ಲರೂ ಪಾಲಿಸಬೇಕು ಎಂದು ಸಲಹೆ ನೀಡಿದರು.</p>.<p>ಗ್ರಾ.ಪಂ. ಸದಸ್ಯ ಅಭಿಲಾಷ್ ಗೌಡ, ಸಹಕಾರ ಸಂಘದ ಅಧ್ಯಕ್ಷ ಆನಂದ್, ಮುಖಂಡರಾದ ಮಹೇಶ್, ದೇವರಾಜು, ಎಂ.ಪಿ.ರಾಜು, ಎಂ.ಪಿ.ಉಮೇಶ್, ಮೊಗಣ್ಣ, ಚಿಕ್ಕಣ್ಣ, ಕೆಂಪೇಗೌಡ, ಸುರೇಶ್, ಅಭಿ, ಗಿರೀಶ್, ಬಸವರಾಜು, ಪ್ರಕಾಶ್, ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>