<p><strong>ಕೆ.ಆರ್.ಪೇಟೆ:</strong> ಮಹಿಳೆಯರ ಸ್ವಾವಲಂಬಿ ಮತ್ತು ಸ್ವಾಭಿಮಾನಿ ಬದುಕಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಯೋಗೇಶ್ ತಿಳಿಸಿದರು.</p>.<p>ತಾಲ್ಲೂಕಿನ ಕಸಬಾ ಹೋಬಳಿಯ ಬಿಬಿ ಕಾವಲು ಗ್ರಾಮದಲ್ಲಿ ಹರಿಹರಪುರ ವಲಯ ವತಿಯಿಂದ ಆಯೋಜಿಸಿದ್ದ ಮಹಿಳಾ ಜ್ಞಾನ ವಿಕಾಸ ಕೇಂದ್ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಮಹಿಳೆ ನಿಶ್ಚಿಂತೆಯಿಂದ ತನ್ನ ಬದುಕು ಕಟ್ಟಿಕೊಳ್ಳಲು ಲೋಕ ಜ್ಞಾನ ಹೊಂದಿರಬೇಕು. ಈ ಕಾರಣದಿಂದ ಮಹಿಳಾ ಜ್ಞಾನ ವಿಕಾಸ ಕೇಂದ್ರ ಶ್ರಮಿಸುತ್ತಿದೆ. ಮಹಿಳೆಯರಿಗೆ ಶಿಕ್ಷಣ, ಆರೋಗ್ಯ, ನೈರ್ಮಲ್ಯ, ಸ್ವಯಂ ಉದ್ಯೋಗ ಸೇರಿದಂತೆ ವಿವಿಧ ಸಾಮಾಜಿಕ ಜ್ಞಾನದ ಮಾಹಿತಿ ನೀಡಿ ಜಾಗೃತಿಗೊಳಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿದೆ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಗ್ರಾ.ಪಂ ಸದಸ್ಯ ಮೋಹನ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಈಚೆಗೆ ಪೋಕ್ಸೊ ಪ್ರಕರಣಗಳು ಹೆಚ್ಚಾಗಿ ದಾಖಲಾಗುತ್ತಿದ್ದು ಮಹಿಳೆಯರು ಎಚ್ಚರವಹಿಸಬೇಕು. ಮಕ್ಕಳು ಹೆಚ್ಚಾಗಿ ಮೊಬೈಲ್ ಫೋನ್ ಬಳಸುವುದು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಭಾಗವಹಿಸದಂತೆ ನೋಡಿಕೊಳ್ಳಬೇಕೆಂದು ಸಲಹೆ ನೀಡಿದರು.</p>.<p>ಮಲ್ಲಿಕಾರ್ಜುನ ಚಾರಿಟಬಲ್ ಟ್ರಸ್ಟ್ ಟ್ರಸ್ಟಿ ಗಂಜಿಗೆರೆ ಮಹೇಶ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಕೂಡ ವ್ಯಾಪಾರ, ಕೈಗಾರಿಕೆಯಂತಹ ಸ್ವಯಂ ಉದ್ಯೋಗಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಆರ್ಥಿಕವಾಗಿ ಉತ್ತಮ ಸ್ಥಾನಮಾನ ಗಳಿಸುತಿದ್ದು, ಈ ನಿಟ್ಟಿನಲ್ಲಿ ಇನ್ನೂ ಹೆಚ್ಚಾಗಿ ಸಕ್ರಿಯವಾಗಬೇಕು ಎಂದರು.</p>.<p>ಕಾರ್ಯಕ್ರಮದಲ್ಲಿ ಕಿಕ್ಕೇರಿ ವಿಭಾಗದ ಧರ್ಮಸ್ಥಳ ಯೋಜನಧಿಕಾರಿ ಪ್ರಸಾದ್, ಪ್ರಮುಖರಾದ ಡೊಂಕಯ್ಯ, ಸಿಂಗಯ್ಯ, ಸಂಸ್ಥೆಯ ಮೇಲ್ವಿಚಾರಕಿ ಸಂಗೀತ ದಿನೇಶ್, ಸಮನ್ವಯ ಅಧಿಕಾರಿ ನಂದಿನಿ, ಸೇವಾಪ್ರತಿನಿಧಿ ವೀಣಾ, ಮಂಜುಳ, ಶ್ರುತಿ, ಪೂರ್ಣಿಮಾ, ಗೀತಾ,ರೇಖಾ, ಸೇರಿದಂತೆ ಗ್ರಾಮಸ್ಥರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪೇಟೆ:</strong> ಮಹಿಳೆಯರ ಸ್ವಾವಲಂಬಿ ಮತ್ತು ಸ್ವಾಭಿಮಾನಿ ಬದುಕಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಯೋಗೇಶ್ ತಿಳಿಸಿದರು.</p>.<p>ತಾಲ್ಲೂಕಿನ ಕಸಬಾ ಹೋಬಳಿಯ ಬಿಬಿ ಕಾವಲು ಗ್ರಾಮದಲ್ಲಿ ಹರಿಹರಪುರ ವಲಯ ವತಿಯಿಂದ ಆಯೋಜಿಸಿದ್ದ ಮಹಿಳಾ ಜ್ಞಾನ ವಿಕಾಸ ಕೇಂದ್ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಮಹಿಳೆ ನಿಶ್ಚಿಂತೆಯಿಂದ ತನ್ನ ಬದುಕು ಕಟ್ಟಿಕೊಳ್ಳಲು ಲೋಕ ಜ್ಞಾನ ಹೊಂದಿರಬೇಕು. ಈ ಕಾರಣದಿಂದ ಮಹಿಳಾ ಜ್ಞಾನ ವಿಕಾಸ ಕೇಂದ್ರ ಶ್ರಮಿಸುತ್ತಿದೆ. ಮಹಿಳೆಯರಿಗೆ ಶಿಕ್ಷಣ, ಆರೋಗ್ಯ, ನೈರ್ಮಲ್ಯ, ಸ್ವಯಂ ಉದ್ಯೋಗ ಸೇರಿದಂತೆ ವಿವಿಧ ಸಾಮಾಜಿಕ ಜ್ಞಾನದ ಮಾಹಿತಿ ನೀಡಿ ಜಾಗೃತಿಗೊಳಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿದೆ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಗ್ರಾ.ಪಂ ಸದಸ್ಯ ಮೋಹನ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಈಚೆಗೆ ಪೋಕ್ಸೊ ಪ್ರಕರಣಗಳು ಹೆಚ್ಚಾಗಿ ದಾಖಲಾಗುತ್ತಿದ್ದು ಮಹಿಳೆಯರು ಎಚ್ಚರವಹಿಸಬೇಕು. ಮಕ್ಕಳು ಹೆಚ್ಚಾಗಿ ಮೊಬೈಲ್ ಫೋನ್ ಬಳಸುವುದು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಭಾಗವಹಿಸದಂತೆ ನೋಡಿಕೊಳ್ಳಬೇಕೆಂದು ಸಲಹೆ ನೀಡಿದರು.</p>.<p>ಮಲ್ಲಿಕಾರ್ಜುನ ಚಾರಿಟಬಲ್ ಟ್ರಸ್ಟ್ ಟ್ರಸ್ಟಿ ಗಂಜಿಗೆರೆ ಮಹೇಶ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಕೂಡ ವ್ಯಾಪಾರ, ಕೈಗಾರಿಕೆಯಂತಹ ಸ್ವಯಂ ಉದ್ಯೋಗಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಆರ್ಥಿಕವಾಗಿ ಉತ್ತಮ ಸ್ಥಾನಮಾನ ಗಳಿಸುತಿದ್ದು, ಈ ನಿಟ್ಟಿನಲ್ಲಿ ಇನ್ನೂ ಹೆಚ್ಚಾಗಿ ಸಕ್ರಿಯವಾಗಬೇಕು ಎಂದರು.</p>.<p>ಕಾರ್ಯಕ್ರಮದಲ್ಲಿ ಕಿಕ್ಕೇರಿ ವಿಭಾಗದ ಧರ್ಮಸ್ಥಳ ಯೋಜನಧಿಕಾರಿ ಪ್ರಸಾದ್, ಪ್ರಮುಖರಾದ ಡೊಂಕಯ್ಯ, ಸಿಂಗಯ್ಯ, ಸಂಸ್ಥೆಯ ಮೇಲ್ವಿಚಾರಕಿ ಸಂಗೀತ ದಿನೇಶ್, ಸಮನ್ವಯ ಅಧಿಕಾರಿ ನಂದಿನಿ, ಸೇವಾಪ್ರತಿನಿಧಿ ವೀಣಾ, ಮಂಜುಳ, ಶ್ರುತಿ, ಪೂರ್ಣಿಮಾ, ಗೀತಾ,ರೇಖಾ, ಸೇರಿದಂತೆ ಗ್ರಾಮಸ್ಥರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>