<p><strong>ಭಾರತೀನಗರ:</strong> ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು. ಸ್ವಾವಲಂಬಿಗಳಾಗಲು ಸಂಜೀವಿನಿ ಒಕ್ಕೂಟ ಸಹಕಾರಿಯಾಗಲಿದೆ ಎಂದು ಸಂಜೀವಿನಿ ಯೋಜನೆಯ ವಲಯ ಮೇಲ್ವಿಚಾರಕ ಅಮೃತ್ ರಾಜ್ ಹೇಳಿದರು.</p>.<p>ಇಲ್ಲಿಯ ಅಂಬೇಡ್ಕರ್ ಭವನದಲ್ಲಿ ನಡೆದ ಭಾರತೀನಗರ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು.</p>.<p>ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ಹೆಸರಿನಲ್ಲಿ ಸಂಜೀವಿನಿ ಒಕ್ಕೂಟ ತೆರೆಯಲಾಗಿದೆ. ಈ ಒಕ್ಕೂಟ ಎಲ್ಲ ರಾಜ್ಯಗಳಲ್ಲೂ ಇದೆ. ಇದು ಮಹಿಳೆಯರಿಗಾಗಿ ಮಾಡಿರುವ ಯೋಜನೆ. ಒಕ್ಕೂಟದಿಂದ ಕೌಶಲಾಭಿವೃದ್ಧಿ, ಉದ್ಯಮ ಶೀಲತೆಯನ್ನು ರೂಢಿಸಿಕೊಳ್ಳಲು ಉಪಯುಕ್ತವಾಗಲಿದೆ. ಇದರಿಂದ ಬರುವ ಹಣದಿಂದ ಮಹಿಳೆಯರು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು. ಈ ಒಕ್ಕೂಟವನ್ನು ಬಳಸಿಕೊಂಡವರಿಗೆ ವಿವಿಧ ರೀತಿಯ ಯೋಜನೆಯಲ್ಲಿ ಹೆಚ್ಚು ಹಣ ಗಳಿಸಬಹುದಾಗಿದೆ ಎಂದರು.</p>.<p>ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ಹೆಸರಿನಲ್ಲಿ ದೇಶದಾದ್ಯಂತ ತಂದಿರುವ ಈ ಯೋಜನೆ ಎಲ್ಲ ರಾಜ್ಯಗಳಲ್ಲಿಯೂ ಜಾರಿಯಲ್ಲಿದೆ. ಒಂದೊಂದು ರಾಜ್ಯದಲ್ಲಿ ಒಂದೊಂದು ಹೆಸರಿನಲ್ಲಿ ಒಕ್ಕೂಟಗಳು ನಡೆಯುತ್ತಿವೆ. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಒಕ್ಕೂಟದಲ್ಲಿ ಮಹಿಳೆಯರು ತೊಡಗಿಸಿಕೊಂಡು ಹಣ ಗಳಿಸುತ್ತಿದ್ದಾರೆ ಎಂದು ಹೇಳಿದರು.</p>.<p>ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎನ್.ಸುಧಾ ಉದ್ಘಾಟಿಸಿದರು. ಭಾರತೀನಗರ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಎಸ್.ಎಸ್.ಮಂಗಳಗೌರಿ ಮಾತನಾಡಿದರು.</p>.<p>ಒಕ್ಕೂಟದ ಕಾರ್ಯದರ್ಶಿ ನಾಗಮ್ಮ, ಖಜಾಂಚಿ ಸುಜಾತ, ಜ್ಯೋತಿ, ಸುಧಾ, ಸವಿತ, ಮಮತ, ಲಕ್ಷ್ಮಿ, ವಸಂತಮ್ಮ, ಲೀಲಾರಾಮೇಗೌಡ, ಗ್ರಾ.ಪಂ. ಸದಸ್ಯ ಮಂಜುನಾಥ್, ಅಂಬರಹಳ್ಳಿ ಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾರತೀನಗರ:</strong> ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು. ಸ್ವಾವಲಂಬಿಗಳಾಗಲು ಸಂಜೀವಿನಿ ಒಕ್ಕೂಟ ಸಹಕಾರಿಯಾಗಲಿದೆ ಎಂದು ಸಂಜೀವಿನಿ ಯೋಜನೆಯ ವಲಯ ಮೇಲ್ವಿಚಾರಕ ಅಮೃತ್ ರಾಜ್ ಹೇಳಿದರು.</p>.<p>ಇಲ್ಲಿಯ ಅಂಬೇಡ್ಕರ್ ಭವನದಲ್ಲಿ ನಡೆದ ಭಾರತೀನಗರ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು.</p>.<p>ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ಹೆಸರಿನಲ್ಲಿ ಸಂಜೀವಿನಿ ಒಕ್ಕೂಟ ತೆರೆಯಲಾಗಿದೆ. ಈ ಒಕ್ಕೂಟ ಎಲ್ಲ ರಾಜ್ಯಗಳಲ್ಲೂ ಇದೆ. ಇದು ಮಹಿಳೆಯರಿಗಾಗಿ ಮಾಡಿರುವ ಯೋಜನೆ. ಒಕ್ಕೂಟದಿಂದ ಕೌಶಲಾಭಿವೃದ್ಧಿ, ಉದ್ಯಮ ಶೀಲತೆಯನ್ನು ರೂಢಿಸಿಕೊಳ್ಳಲು ಉಪಯುಕ್ತವಾಗಲಿದೆ. ಇದರಿಂದ ಬರುವ ಹಣದಿಂದ ಮಹಿಳೆಯರು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು. ಈ ಒಕ್ಕೂಟವನ್ನು ಬಳಸಿಕೊಂಡವರಿಗೆ ವಿವಿಧ ರೀತಿಯ ಯೋಜನೆಯಲ್ಲಿ ಹೆಚ್ಚು ಹಣ ಗಳಿಸಬಹುದಾಗಿದೆ ಎಂದರು.</p>.<p>ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ಹೆಸರಿನಲ್ಲಿ ದೇಶದಾದ್ಯಂತ ತಂದಿರುವ ಈ ಯೋಜನೆ ಎಲ್ಲ ರಾಜ್ಯಗಳಲ್ಲಿಯೂ ಜಾರಿಯಲ್ಲಿದೆ. ಒಂದೊಂದು ರಾಜ್ಯದಲ್ಲಿ ಒಂದೊಂದು ಹೆಸರಿನಲ್ಲಿ ಒಕ್ಕೂಟಗಳು ನಡೆಯುತ್ತಿವೆ. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಒಕ್ಕೂಟದಲ್ಲಿ ಮಹಿಳೆಯರು ತೊಡಗಿಸಿಕೊಂಡು ಹಣ ಗಳಿಸುತ್ತಿದ್ದಾರೆ ಎಂದು ಹೇಳಿದರು.</p>.<p>ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎನ್.ಸುಧಾ ಉದ್ಘಾಟಿಸಿದರು. ಭಾರತೀನಗರ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಎಸ್.ಎಸ್.ಮಂಗಳಗೌರಿ ಮಾತನಾಡಿದರು.</p>.<p>ಒಕ್ಕೂಟದ ಕಾರ್ಯದರ್ಶಿ ನಾಗಮ್ಮ, ಖಜಾಂಚಿ ಸುಜಾತ, ಜ್ಯೋತಿ, ಸುಧಾ, ಸವಿತ, ಮಮತ, ಲಕ್ಷ್ಮಿ, ವಸಂತಮ್ಮ, ಲೀಲಾರಾಮೇಗೌಡ, ಗ್ರಾ.ಪಂ. ಸದಸ್ಯ ಮಂಜುನಾಥ್, ಅಂಬರಹಳ್ಳಿ ಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>