<p>ಕೆ.ಆರ್.ಪೇಟೆ: ಗ್ರಾಮೀಣ ಪ್ರದೇಶದ ಜನರ ಅಭಿವೃದ್ಧಿಗೆ ಸರ್ಕಾದಿಂದ ಕೋಟ್ಯಂತರ ರೂಪಾಯಿ ಅನುದಾನ ಬಂದರೂ ಕಾರ್ಯಾನುಷ್ಠಾನವಾಗಿಲ್ಲ ಎಂದು ಶಾಸಕ ಎಚ್.ಟಿ. ಮಂಜು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಾರ್ಯಕ್ರಮಗಳ ಪರಾಮರ್ಶೆ ನಡೆಸಿ ಅವರು ಮಾತನಾಡಿದರು.</p>.<p>ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಸರ್ಕಾರಗಳು ಕೋಟ್ಯಂತರ ರೂಪಾಯಿ ಮೀಸಲಿಟ್ಟರೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪ್ರಗತಿ ಕಾಣುತ್ತಿಲ್ಲ. ಹಾಗಾದರೆ ನೀವೆಲ್ಲ ಏನು ಮಾಡುತ್ತಿದ್ದೀರಾ? ಹಣವಿದ್ದರೂ ಕಾಮಗಾರಿಗಳನ್ನು ಏಕೆ ಪ್ರಾರಂಭಿಸಿಲ್ಲ ಎಂದು ಪಿಡಿಒಗಳನ್ನು ತರಾಟೆಗೆ ತೆಗೆದುಕೊಂಡರಲ್ಲದೆ ತಾಲ್ಲೂಕಿನ ಬಹುತೇಕ ಗ್ರಾಮಗಳಲ್ಲಿ ರುದ್ರಭೂಮಿಗೆ ಜಾಗ ಗುರುತಿಸಿಲ್ಲ. ಈ ಉಡಾಫೆ ವರ್ತನೆ ಸರಿಯಲ್ಲ ಎಂದು ಎಚ್ಚರಿಸಿದರು.</p>.<p>‘ತಾಲ್ಲೂಕಿಗೆ ಮಂಜೂರಾಗಿರುವ ಮನೆಗಳನ್ನು ನಿಗದಿತ ಸಮಯದಲ್ಲಿ ಹಸ್ತಾಂತರಿಸುವ ಕಾರ್ಯ ಮಾಡುವಂತೆ ಸೂಚಿಸಿದ ಶಾಸಕರು ವಿಳಂಬವಾದಲ್ಲಿ ಶಿಸ್ತಿನ ಕ್ರಮ ಕೈಗೊಳ್ಳಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.</p>.<p>‘2-3 ವರ್ಷಗಳಿಂದ 2,475 ಮನೆಗಳನ್ನು ನೀಡಿದೆ. ಆದರೆ ಅವುಗಳ ಪೈಕಿ ನೀಡಿರುವ 1005 ಮನೆಗಳ ಕಾಮಗಾರಿಯನ್ನು ಆರಂಭಿಸಿಯೇ ಇಲ್ಲ. ಜಿಪಿಎಸ್ ಸೇರಿದಂತೆ ಎಲ್ಲಾ ಮನೆ ಕೆಲಸಕ್ಕೆ ಹಣ ಕೇಳುತ್ತೀರೆಂದು ದೂರು ಬಂದಿದೆ. ಈ ಬಗ್ಗೆ ಆತ್ಮ ವಿಮರ್ಶೆ ಮಾಡಿಕೊಳ್ಳಿ ಎರಡು ವರ್ಷಗಳಾದರೂ ಮನೆ ನಿರ್ಮಾಣ ಸಂಬಂಧ ಸಮರ್ಪಕವಾಗಿ ಕರ್ತವ್ಯ ನಿರ್ವಹಿಸದ ಅಧಿಕಾರಿಗಳ ವಿರುದ್ಧ ಕ್ರಮ ವಹಿಸಿ’ ಎಂದು ಇಒಗೆ ಸೂಚಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಇಒ ಸತೀಶ್, ತಾಲ್ಲೂಕು ಯೋಜನಾಧಿಕಾರಿ ಶ್ರೀನಿವಾಸ್, ನರೇಗಾ ಆಡಳಿತ ಸಹಾಯಕ ನಿರ್ದೇಶಕ ಡಾ. ನರಸಿಂಹರಾಜು, ನರೇಗಾ ಎಡಿ ಉಮಾಶಂಕರ್ ಸೇರಿದಂತೆ 34 ಗ್ರಾಮ ಪಂಚಾಯಿತಿಗಳ ಪಿಡಿಒ ಮತ್ತು ನೌಕರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆ.ಆರ್.ಪೇಟೆ: ಗ್ರಾಮೀಣ ಪ್ರದೇಶದ ಜನರ ಅಭಿವೃದ್ಧಿಗೆ ಸರ್ಕಾದಿಂದ ಕೋಟ್ಯಂತರ ರೂಪಾಯಿ ಅನುದಾನ ಬಂದರೂ ಕಾರ್ಯಾನುಷ್ಠಾನವಾಗಿಲ್ಲ ಎಂದು ಶಾಸಕ ಎಚ್.ಟಿ. ಮಂಜು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಾರ್ಯಕ್ರಮಗಳ ಪರಾಮರ್ಶೆ ನಡೆಸಿ ಅವರು ಮಾತನಾಡಿದರು.</p>.<p>ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಸರ್ಕಾರಗಳು ಕೋಟ್ಯಂತರ ರೂಪಾಯಿ ಮೀಸಲಿಟ್ಟರೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪ್ರಗತಿ ಕಾಣುತ್ತಿಲ್ಲ. ಹಾಗಾದರೆ ನೀವೆಲ್ಲ ಏನು ಮಾಡುತ್ತಿದ್ದೀರಾ? ಹಣವಿದ್ದರೂ ಕಾಮಗಾರಿಗಳನ್ನು ಏಕೆ ಪ್ರಾರಂಭಿಸಿಲ್ಲ ಎಂದು ಪಿಡಿಒಗಳನ್ನು ತರಾಟೆಗೆ ತೆಗೆದುಕೊಂಡರಲ್ಲದೆ ತಾಲ್ಲೂಕಿನ ಬಹುತೇಕ ಗ್ರಾಮಗಳಲ್ಲಿ ರುದ್ರಭೂಮಿಗೆ ಜಾಗ ಗುರುತಿಸಿಲ್ಲ. ಈ ಉಡಾಫೆ ವರ್ತನೆ ಸರಿಯಲ್ಲ ಎಂದು ಎಚ್ಚರಿಸಿದರು.</p>.<p>‘ತಾಲ್ಲೂಕಿಗೆ ಮಂಜೂರಾಗಿರುವ ಮನೆಗಳನ್ನು ನಿಗದಿತ ಸಮಯದಲ್ಲಿ ಹಸ್ತಾಂತರಿಸುವ ಕಾರ್ಯ ಮಾಡುವಂತೆ ಸೂಚಿಸಿದ ಶಾಸಕರು ವಿಳಂಬವಾದಲ್ಲಿ ಶಿಸ್ತಿನ ಕ್ರಮ ಕೈಗೊಳ್ಳಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.</p>.<p>‘2-3 ವರ್ಷಗಳಿಂದ 2,475 ಮನೆಗಳನ್ನು ನೀಡಿದೆ. ಆದರೆ ಅವುಗಳ ಪೈಕಿ ನೀಡಿರುವ 1005 ಮನೆಗಳ ಕಾಮಗಾರಿಯನ್ನು ಆರಂಭಿಸಿಯೇ ಇಲ್ಲ. ಜಿಪಿಎಸ್ ಸೇರಿದಂತೆ ಎಲ್ಲಾ ಮನೆ ಕೆಲಸಕ್ಕೆ ಹಣ ಕೇಳುತ್ತೀರೆಂದು ದೂರು ಬಂದಿದೆ. ಈ ಬಗ್ಗೆ ಆತ್ಮ ವಿಮರ್ಶೆ ಮಾಡಿಕೊಳ್ಳಿ ಎರಡು ವರ್ಷಗಳಾದರೂ ಮನೆ ನಿರ್ಮಾಣ ಸಂಬಂಧ ಸಮರ್ಪಕವಾಗಿ ಕರ್ತವ್ಯ ನಿರ್ವಹಿಸದ ಅಧಿಕಾರಿಗಳ ವಿರುದ್ಧ ಕ್ರಮ ವಹಿಸಿ’ ಎಂದು ಇಒಗೆ ಸೂಚಿಸಿದರು.</p>.<p>ತಾಲ್ಲೂಕು ಪಂಚಾಯಿತಿ ಇಒ ಸತೀಶ್, ತಾಲ್ಲೂಕು ಯೋಜನಾಧಿಕಾರಿ ಶ್ರೀನಿವಾಸ್, ನರೇಗಾ ಆಡಳಿತ ಸಹಾಯಕ ನಿರ್ದೇಶಕ ಡಾ. ನರಸಿಂಹರಾಜು, ನರೇಗಾ ಎಡಿ ಉಮಾಶಂಕರ್ ಸೇರಿದಂತೆ 34 ಗ್ರಾಮ ಪಂಚಾಯಿತಿಗಳ ಪಿಡಿಒ ಮತ್ತು ನೌಕರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>