<p><strong>ಶ್ರೀರಂಗಪಟ್ಟಣ:</strong> ‘ಅಧಿಕ ರಕ್ತದೊತ್ತಡ ಸದ್ದಿಲ್ಲದ ಕೊಲೆಗಾರನಾಗಿದ್ದು ವರ್ಷದಲ್ಲಿ ಎರಡು ಬಾರಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು’ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ. ಬೆನ್ನೂರ ಸಲಹೆ ನೀಡಿದರು.</p>.<p>ತಾಲ್ಲೂಕಿನ ನಗುವನಹಳ್ಳಿಯಲ್ಲಿ, ತಾಲ್ಲೂಕು ಆರೋಗ್ಯಾಧಿಕಾರಿಯವರ ಕಚೇರಿ ಮತ್ತು ಆಯುಷ್ಮಾನ್ ಆರೋಗ್ಯ ಮಂದಿರದ ವತಿಯಿಂದ ಶನಿವಾರ ಏರ್ಪಡಿಸಿದ್ದ ‘ವಿಶ್ವ ಅಧಿಕ ರಕ್ತದೊತ್ತಡ ದಿನಾಚರಣೆ’ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮದ್ಯಪಾನ, ಧೂಮಪಾನ ಮತ್ತು ಕರಿದ ಆಹಾರ ಪದಾರ್ಥಗಳ ಸೇವನೆ ಅಧಿಕ ರಕ್ತದೊತ್ತಡಕ್ಕೆ ಕಾರಣ. ಒಮ್ಮೆ ಈ ಕಾಯಿಲೆ ಕಾಣಿಸಿಕೊಂಡರೆ ಜೀವನ ಪರ್ಯಂತ ಕಾಡುತ್ತದೆ. ಸಮತೋಲಿತ ಆಹಾರ ಸೇವನೆ, ಧ್ಯಾನ, ಯೋಗಾಭ್ಯಾಸದಿಂದ ಈ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು’ ಎಂದು ಅವರು ತಿಳಿಸಿದರು.</p>.<p>ಸಾಂಕ್ರಾಮಿಕ ರೋಗಶಾಸ್ತ್ರಜ್ಞೆ ಮೇಘನಾ ಮಾತನಾಡಿ, ‘ಅಧಿಕ ರಕ್ತದೊತ್ತಡದಿಂದ ಬಳಲುವವರಲ್ಲಿ ಇತರ ಆರೋಗ್ಯ ಸಮಸ್ಯೆಗಳೂ ಕಾಣಿಸಿಕೊಳ್ಳುತ್ತವೆ. ಹಾಗಾಗಿ ಮುನ್ನೆಚ್ಚರಿಕೆ ವಹಿಸಬೇಕು’ ಎಂದರು.</p>.<p>ಡಾ.ನಾನಾ ಚವ್ಹಾಣ್, ಡಾ.ಶ್ರೀಲಕ್ಷ್ಮಿ, ಆರೋಗ್ಯ ಶುಶ್ರೂಣಾಧಿಕಾರಿ ಸೌಮ್ಯಾ, ಸುಮಾ, ನೇತ್ರಾವತಿ, ಲೀಲಾ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ:</strong> ‘ಅಧಿಕ ರಕ್ತದೊತ್ತಡ ಸದ್ದಿಲ್ಲದ ಕೊಲೆಗಾರನಾಗಿದ್ದು ವರ್ಷದಲ್ಲಿ ಎರಡು ಬಾರಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು’ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ. ಬೆನ್ನೂರ ಸಲಹೆ ನೀಡಿದರು.</p>.<p>ತಾಲ್ಲೂಕಿನ ನಗುವನಹಳ್ಳಿಯಲ್ಲಿ, ತಾಲ್ಲೂಕು ಆರೋಗ್ಯಾಧಿಕಾರಿಯವರ ಕಚೇರಿ ಮತ್ತು ಆಯುಷ್ಮಾನ್ ಆರೋಗ್ಯ ಮಂದಿರದ ವತಿಯಿಂದ ಶನಿವಾರ ಏರ್ಪಡಿಸಿದ್ದ ‘ವಿಶ್ವ ಅಧಿಕ ರಕ್ತದೊತ್ತಡ ದಿನಾಚರಣೆ’ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಮದ್ಯಪಾನ, ಧೂಮಪಾನ ಮತ್ತು ಕರಿದ ಆಹಾರ ಪದಾರ್ಥಗಳ ಸೇವನೆ ಅಧಿಕ ರಕ್ತದೊತ್ತಡಕ್ಕೆ ಕಾರಣ. ಒಮ್ಮೆ ಈ ಕಾಯಿಲೆ ಕಾಣಿಸಿಕೊಂಡರೆ ಜೀವನ ಪರ್ಯಂತ ಕಾಡುತ್ತದೆ. ಸಮತೋಲಿತ ಆಹಾರ ಸೇವನೆ, ಧ್ಯಾನ, ಯೋಗಾಭ್ಯಾಸದಿಂದ ಈ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು’ ಎಂದು ಅವರು ತಿಳಿಸಿದರು.</p>.<p>ಸಾಂಕ್ರಾಮಿಕ ರೋಗಶಾಸ್ತ್ರಜ್ಞೆ ಮೇಘನಾ ಮಾತನಾಡಿ, ‘ಅಧಿಕ ರಕ್ತದೊತ್ತಡದಿಂದ ಬಳಲುವವರಲ್ಲಿ ಇತರ ಆರೋಗ್ಯ ಸಮಸ್ಯೆಗಳೂ ಕಾಣಿಸಿಕೊಳ್ಳುತ್ತವೆ. ಹಾಗಾಗಿ ಮುನ್ನೆಚ್ಚರಿಕೆ ವಹಿಸಬೇಕು’ ಎಂದರು.</p>.<p>ಡಾ.ನಾನಾ ಚವ್ಹಾಣ್, ಡಾ.ಶ್ರೀಲಕ್ಷ್ಮಿ, ಆರೋಗ್ಯ ಶುಶ್ರೂಣಾಧಿಕಾರಿ ಸೌಮ್ಯಾ, ಸುಮಾ, ನೇತ್ರಾವತಿ, ಲೀಲಾ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>