<p><strong>ಭಾರತೀನಗರ:</strong> ಸಮೀಪದ ಚಿಕ್ಕಅರಸಿನಕೆರೆ ಗ್ರಾಮದ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶಾಖಾ ಮಠವಾದ ಕಾಲಭೈರವೇಶ್ವರಸ್ವಾಮಿ ಪುಣ್ಯಕ್ಷೇತ್ರದಲ್ಲಿ ನಿರ್ಮಲಾನಂದನಾಥಸ್ವಾಮಿ, ಪ್ರಸನ್ನನಾಥಸ್ವಾಮಿ ಅವರ ಸಾನ್ನಿಧ್ಯದಲ್ಲಿ ಶನಿವಾರ ಬಸವಪ್ಪನ 9ನೇ ವರ್ಷದ ಪುಣ್ಯಾರಾಧನೆ ನಡೆಯಿತು.</p>.<p>ಬಸವನ ಗದ್ದುಗೆಯಲ್ಲಿ ಸ್ಥಾಪಿಸಲಾಗಿರುವ ಬಸವನ ಮೂರ್ತಿಗೆ ಗಂಧ, ಚಂದ್ರ, ವಿಭೂತಿ, ಕುಂಕುಮ, ಅರಿಸಿನ, ತುಪ್ಪ, ಜೇನುತುಪ್ಪ ಸೇರಿದಂತೆ ವಿವಿಧ ದ್ರವ್ಯಗಳಿಂದ ಮಹಾಭಿಷೇಕ ನೆರವೇರಿಸಲಾಯಿತು. ವಿವಿಧ ಪುಷ್ಟಗಳಿಂದ ಬಸವನ ಗದ್ದುಗೆ, ಮೂರ್ತಿಯನ್ನು ಅಲಂಕರಿಸಿ ಪೂಜೆ ನೆರವೇರಿಸಲಾಯಿತು.</p>.<p>ನೂರಾರು ಮಂದಿ ಭಕ್ತಾಧಿಗಳು, ಕಾಲಭೈರವೇಶ್ವರಸ್ವಾಮಿ ದೇವಾಲಯದ ಬಸವಪ್ಪ ಸಮ್ಮುಖದಲ್ಲಿ ವಿವಿಧ ಪೂಜೆಗಳನ್ನು ನೆರವೇರಿಸಿ ಕೊನೆಯಲ್ಲಿ ಮಹಾ ಮಂಗಳಾರತಿ ಮಾಡಲಾಯಿತು. ಪೂಜೆಗೆ ಬಂದಿದ್ದ ಎಲ್ಲ ಭಕ್ತಾದಿಗಳಿಗೂ ಪ್ರಸಾದ ವಿನಿಯೋಗ ನೆರವೇರಿಸಲಾಯಿತು. ಕಾಲಭೈರವೇಶ್ವರಸ್ವಾಮಿ ಚಾರಿಟಬಲ್ ಟ್ರಸ್ಟ್ನ ಎಲ್ಲ ಪದಾಧಿಕಾರಿಗಳು ಪೂಜೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾರತೀನಗರ:</strong> ಸಮೀಪದ ಚಿಕ್ಕಅರಸಿನಕೆರೆ ಗ್ರಾಮದ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶಾಖಾ ಮಠವಾದ ಕಾಲಭೈರವೇಶ್ವರಸ್ವಾಮಿ ಪುಣ್ಯಕ್ಷೇತ್ರದಲ್ಲಿ ನಿರ್ಮಲಾನಂದನಾಥಸ್ವಾಮಿ, ಪ್ರಸನ್ನನಾಥಸ್ವಾಮಿ ಅವರ ಸಾನ್ನಿಧ್ಯದಲ್ಲಿ ಶನಿವಾರ ಬಸವಪ್ಪನ 9ನೇ ವರ್ಷದ ಪುಣ್ಯಾರಾಧನೆ ನಡೆಯಿತು.</p>.<p>ಬಸವನ ಗದ್ದುಗೆಯಲ್ಲಿ ಸ್ಥಾಪಿಸಲಾಗಿರುವ ಬಸವನ ಮೂರ್ತಿಗೆ ಗಂಧ, ಚಂದ್ರ, ವಿಭೂತಿ, ಕುಂಕುಮ, ಅರಿಸಿನ, ತುಪ್ಪ, ಜೇನುತುಪ್ಪ ಸೇರಿದಂತೆ ವಿವಿಧ ದ್ರವ್ಯಗಳಿಂದ ಮಹಾಭಿಷೇಕ ನೆರವೇರಿಸಲಾಯಿತು. ವಿವಿಧ ಪುಷ್ಟಗಳಿಂದ ಬಸವನ ಗದ್ದುಗೆ, ಮೂರ್ತಿಯನ್ನು ಅಲಂಕರಿಸಿ ಪೂಜೆ ನೆರವೇರಿಸಲಾಯಿತು.</p>.<p>ನೂರಾರು ಮಂದಿ ಭಕ್ತಾಧಿಗಳು, ಕಾಲಭೈರವೇಶ್ವರಸ್ವಾಮಿ ದೇವಾಲಯದ ಬಸವಪ್ಪ ಸಮ್ಮುಖದಲ್ಲಿ ವಿವಿಧ ಪೂಜೆಗಳನ್ನು ನೆರವೇರಿಸಿ ಕೊನೆಯಲ್ಲಿ ಮಹಾ ಮಂಗಳಾರತಿ ಮಾಡಲಾಯಿತು. ಪೂಜೆಗೆ ಬಂದಿದ್ದ ಎಲ್ಲ ಭಕ್ತಾದಿಗಳಿಗೂ ಪ್ರಸಾದ ವಿನಿಯೋಗ ನೆರವೇರಿಸಲಾಯಿತು. ಕಾಲಭೈರವೇಶ್ವರಸ್ವಾಮಿ ಚಾರಿಟಬಲ್ ಟ್ರಸ್ಟ್ನ ಎಲ್ಲ ಪದಾಧಿಕಾರಿಗಳು ಪೂಜೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>