ಅಧಿಕಾರಿಗಳು ಮತ್ತು ಜನ ಪ್ರತಿನಿಧಿಗಳು ನೆಪ ಹೇಳಿಕೊಂಡು ಸರ್ಕಾರದ ಆಸ್ತಿಯನ್ನುಪಾಳು ಕೊಂಪೆಯನ್ನಾಗಿ ಮಾಡುತ್ತಿದ್ದಾರೆ. ಬೆಸಗರಹಳ್ಳಿ ಸಾರಿಗೆ ಬಸ್ ನಿಲ್ದಾಣ ಬಳಿ ಬೀದಿ ಬದಿ ವ್ಯಾಪಾರಿಗಳು ತಳ್ಳುವ ಗಾಡಿಯಲ್ಲಿ ತರಕಾರಿ, ಸೊಪ್ಪು, ಹಣ್ಣು, ಹೂವು ಸೇರಿದಂತೆ ದಿನ ಬಳಕೆಯವಸ್ತುಗಳನ್ನು ಮಾರಾಟ ಮಾಡುತ್ತಿ ದ್ದಾರೆ. ಪ್ರತಿನಿತ್ಯ ಸಂತೆ ಕಟ್ಟಡಗಳಲ್ಲಿ ವ್ಯಾಪಾರ ವ್ಯವಹಾರ ಮಾಡಲು ಅನುವು ಮಾಡಿಕೊಡಬೇಕು. ಸಂತೆಯ ನೂತನ ಕಟ್ಟಡದಲ್ಲಿ ಕುಡಿಯುವ ನೀರು, ವಿದ್ಯುತ್, ಶೌಚಾಲಯ ಮತ್ತು ವಾಹನ ನಿಲುಗಡೆಗೆ ವ್ಯವಸ್ಥೆ ಕಲ್ಪಿಸಬೇಕಿದೆ ಎನ್ನುತ್ತಾರೆ ಸ್ಥಳೀಯರಾದ ಪಣ್ಣೆದೊಡ್ಡಿ ವೆಂಕಟೇಶ್, ಬಿ.ಶ್ರೀನಿವಾಸ್, ಮರಲಿಂಗ.