ಬೆಂಗಳೂರಿನ ಬನ್ನೇರುಘಟ್ಟದ ವಿನಯ್ (22) ಮೃತಪಟ್ಟಿದ್ದಾರೆ. ಸ್ನೇಹಿತರ ಜತೆ ಬಲಮುರಿ ಪ್ರಕೃತಿ ತಾಣಕ್ಕೆ ಪ್ರವಾಸಕ್ಕೆ ಬಂದಿದ್ದ ವಿನಯ್ ಈಜಲು ನದಿಗೆ ಇಳಿದಾಗ ಸುಳಿಗೆ ಸಿಕ್ಕಿ ಜಲ ಸಮಾಧಿಯಾಗಿದ್ದರು, ಈಜುಗಾರರ ನೆರವಿನಿಂದ ಪೊಲೀಸರು ಗುರುವಾರ ಬೆಳಿಗ್ಗೆ ನದಿಯಿಂದ ಶವವನ್ನು ಮೇಲೆ ತೆಗೆದು ಪಂಚನಾಮೆ ನಡೆಸಿದ ಬಳಿಕ ವಾರಸುದಾರರಿಗೆ ಒಪ್ಪಿಸಿದರು. ಕೆಆರ್ಎಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.