ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶ್ರೀರಂಗಪಟ್ಟಣ: ನದಿಯಲ್ಲಿ ಮುಳುಗಿ ಯುವಕ ಸಾವು

Published 29 ಫೆಬ್ರುವರಿ 2024, 15:30 IST
Last Updated 29 ಫೆಬ್ರುವರಿ 2024, 15:30 IST
ಅಕ್ಷರ ಗಾತ್ರ

ಶ್ರೀರಂಗಪಟ್ಟಣ: ತಾಲ್ಲೂಕಿನ ಬಲಮುರಿ ಬಳಿ ಕಾವೇರಿ ನದಿಯಲ್ಲಿ ಬೆಂಗಳೂರಿನ ಯುವಕನೊಬ್ಬ ಬುಧವಾರ ಸಂಜೆ ಮುಳುಗಿ ಮತಪಟ್ಟಿದ್ದು, ಗುರುವಾರ ಬೆಳಿಗ್ಗೆ ಶವ ಪತ್ತೆಯಾಗಿದೆ.

ಬೆಂಗಳೂರಿನ ಬನ್ನೇರುಘಟ್ಟದ ವಿನಯ್‌ (22) ಮೃತಪಟ್ಟಿದ್ದಾರೆ. ಸ್ನೇಹಿತರ ಜತೆ ಬಲಮುರಿ ಪ್ರಕೃತಿ ತಾಣಕ್ಕೆ ಪ್ರವಾಸಕ್ಕೆ ಬಂದಿದ್ದ ವಿನಯ್‌ ಈಜಲು ನದಿಗೆ ಇಳಿದಾಗ ಸುಳಿಗೆ ಸಿಕ್ಕಿ ಜಲ ಸಮಾಧಿಯಾಗಿದ್ದರು, ಈಜುಗಾರರ ನೆರವಿನಿಂದ ಪೊಲೀಸರು ಗುರುವಾರ ಬೆಳಿಗ್ಗೆ ನದಿಯಿಂದ ಶವವನ್ನು ಮೇಲೆ ತೆಗೆದು ಪಂಚನಾಮೆ ನಡೆಸಿದ ಬಳಿಕ ವಾರಸುದಾರರಿಗೆ ಒಪ್ಪಿಸಿದರು. ಕೆಆರ್‌ಎಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT