ಗುರುವಾರ ರಾತ್ರಿ ಹಣ ಕೇಳಿದಾಗ ಯುವಕರ ಗುಂಪು ತಾವು ಇರುವಲ್ಲಿಗೆ ಬರುವಂತೆ ತಿಳಿಸಿದ್ದಾರೆ. ಯುವಕನೊಬ್ಬನನ್ನು ಕಳುಹಿಸಿ ಬೋರಾಪುರದಿಂದ ಹುಲಿಗೆರೆಪುರಕ್ಕೆ ಹೋಗುವ ವಿ.ಸಿ ನಾಲೆ ಬಳಿಗೆ ಕರೆಸಿಕೊಂಡಿದ್ದಾರೆ. ಹಣ ಕೊಡುವಂತೆ ಕೇಳಿದಾಗ ಯುವಕರ ಗುಂಪು ಪುನೀತ್ ಮೇಲೆ ಸೌದೆಯಿಂದ ತಲೆಗೆ ಹಲ್ಲೆ ಮಾಡಿದೆ.
ತೀವ್ರವಾಗಿ ಗಾಯಗೊಂಡಿದ್ದ ಪುನೀತ್ನನ್ನು ಭಾರತೀನಗರದ ಜಿ.ಮಾದೇಗೌಡ ಸೂಪರ್ ಸ್ಪೆಷಾಲಿಟಿ ದಾಖಲಿಸಲಾಗಿದೆ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಿಕಿತ್ಸೆಗೆ ಸ್ಪಂದಿಸದ ಪುನೀತ್ ಮೃತಪಟ್ಟಿದ್ದಾರೆ.
ಘಟನೆಯ ನಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದರು. ರಾತ್ರಿಯಿಡೀ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮದ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.