<p><strong>ಕಿಕ್ಕೇರಿ</strong>: ಯುವತಿ ಪ್ರೀತಿ ನಿರಾಕರಿಸಿದ ಕಾರಣ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕನೊಬ್ಬ ಭಾನುವಾರ ಪ್ರೇಮಿಗಳ ದಿನವೇ ಮೃತಪಟ್ಟಿರುವ ಘಟನೆ ಸಮೀಪದ ಲಿಂಗಾಪುರ ಗ್ರಾಮದಲ್ಲಿ ನಡೆದಿದೆ.</p>.<p>ಗ್ರಾಮದ ಮಂಜಯ್ಯ ಅವರ ಮಗ ಎಲ್.ಎಂ.ಸಚಿನ್ ಕುಮಾರ್ (20) ಮೃತಪಟ್ಟ ಯುವಕ. ಈತ ಕೆ.ಆರ್.ಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ಬಿ.ಎ ಓದುತ್ತಿದ್ದ. ಇದೇ ಕಾಲೇಜಿನಲ್ಲಿ ಬಿಎಸ್ಸಿ ಓದುತ್ತಿದ್ದ ಯುವತಿಯೊಬ್ಬರನ್ನು ಪ್ರೀತಿಸುತ್ತಿದ್ದ. ಇಬ್ಬರು ಪಿಯುಸಿಯಿಂದಲೂ ಸ್ನೇಹಿತರಾಗಿದ್ದರು ಎನ್ನಲಾಗಿದೆ.</p>.<p>ಯುವತಿಯು ಸಚಿನ್ ಕುಮಾರ್ಗೆ ರಾಖಿ ಕಟ್ಟಲು ಮುಂದಾಗಿದ್ದಾರೆ. ಇದರಿಂದ ಮನನೊಂದು ಸಚಿನ್ ಕುಮಾರ್ ಫೆ.5ರಂದು ಕ್ರಿಮಿನಾಶಕ ಸೇವಿಸಿದ್ದ. ಅನಾರೋಗ್ಯದಿಂದ ಮಲಗಿದ್ದಾನೆ ಎಂದು ಮನೆಯವರು ಸುಮ್ಮನಾಗಿದ್ದರು. ಹೊಟ್ಟೆನೋವು ತಾಳಲಾರದೆ ಒದ್ದಾಡುತ್ತಿರುವಾಗ ಪೋಷಕರು ವಿಚಾರಿಸಿದ್ದಾರೆ, ಆಗ ವಿಷ ಸೇವಿಸಿರುವ ವಿಷಯ ಬೆಳಗಿಗೆ ಬಂದಿದೆ.</p>.<p>ಕೂಡಲೇ ಪೋಷಕರು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ನಂತರ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದ ಆತ ಭಾನುವಾರ ಮೃತಪಟ್ಟಿದ್ದಾನೆ. ಈ ಕುರಿತು ಪ್ರಕರಣ ದಾಖಲಾಗಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಿಕ್ಕೇರಿ</strong>: ಯುವತಿ ಪ್ರೀತಿ ನಿರಾಕರಿಸಿದ ಕಾರಣ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕನೊಬ್ಬ ಭಾನುವಾರ ಪ್ರೇಮಿಗಳ ದಿನವೇ ಮೃತಪಟ್ಟಿರುವ ಘಟನೆ ಸಮೀಪದ ಲಿಂಗಾಪುರ ಗ್ರಾಮದಲ್ಲಿ ನಡೆದಿದೆ.</p>.<p>ಗ್ರಾಮದ ಮಂಜಯ್ಯ ಅವರ ಮಗ ಎಲ್.ಎಂ.ಸಚಿನ್ ಕುಮಾರ್ (20) ಮೃತಪಟ್ಟ ಯುವಕ. ಈತ ಕೆ.ಆರ್.ಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ಬಿ.ಎ ಓದುತ್ತಿದ್ದ. ಇದೇ ಕಾಲೇಜಿನಲ್ಲಿ ಬಿಎಸ್ಸಿ ಓದುತ್ತಿದ್ದ ಯುವತಿಯೊಬ್ಬರನ್ನು ಪ್ರೀತಿಸುತ್ತಿದ್ದ. ಇಬ್ಬರು ಪಿಯುಸಿಯಿಂದಲೂ ಸ್ನೇಹಿತರಾಗಿದ್ದರು ಎನ್ನಲಾಗಿದೆ.</p>.<p>ಯುವತಿಯು ಸಚಿನ್ ಕುಮಾರ್ಗೆ ರಾಖಿ ಕಟ್ಟಲು ಮುಂದಾಗಿದ್ದಾರೆ. ಇದರಿಂದ ಮನನೊಂದು ಸಚಿನ್ ಕುಮಾರ್ ಫೆ.5ರಂದು ಕ್ರಿಮಿನಾಶಕ ಸೇವಿಸಿದ್ದ. ಅನಾರೋಗ್ಯದಿಂದ ಮಲಗಿದ್ದಾನೆ ಎಂದು ಮನೆಯವರು ಸುಮ್ಮನಾಗಿದ್ದರು. ಹೊಟ್ಟೆನೋವು ತಾಳಲಾರದೆ ಒದ್ದಾಡುತ್ತಿರುವಾಗ ಪೋಷಕರು ವಿಚಾರಿಸಿದ್ದಾರೆ, ಆಗ ವಿಷ ಸೇವಿಸಿರುವ ವಿಷಯ ಬೆಳಗಿಗೆ ಬಂದಿದೆ.</p>.<p>ಕೂಡಲೇ ಪೋಷಕರು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ನಂತರ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದ ಆತ ಭಾನುವಾರ ಮೃತಪಟ್ಟಿದ್ದಾನೆ. ಈ ಕುರಿತು ಪ್ರಕರಣ ದಾಖಲಾಗಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>