<p><strong>ನಾಗಮಂಗಲ:</strong> ಸೋಮವಾರ ಸಂಜೆ ಸುರಿದ ಗುಡುಗು ಮಿಂಚಿನ ಮಳೆಯಲ್ಲಿ ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟಿದ್ದು, ಮತ್ತಿಬ್ಬರಿಗೆ ಗಂಭೀರವಾಗಿ ಗಾಯಗಳಾಗಿವೆ.</p>.<p>ತಾಲ್ಲೂಕಿನ ಬೆಳ್ಳೂರು ಹೋಬಳಿಯ ತಿಗಳರಹಳ್ಳಿಯ ಬಳಿ ಇರುವ ಗುಡ್ಡದಲ್ಲಿ ಮೂವರು ಆಡು ಮೇಯಿಸಲು ಹೋಗಿದ್ದಾಗ ಸಂಜೆ 4.30ರ ಸಮಯದಲ್ಲಿ ಮಳೆ ಬಂದಿದೆ. ಗುಡ್ಡದಲ್ಲೇ ಇರುವ ಆಲದ ಮರವೊಂದರ ಕೆಳಗೆ ನಿಂತುಕೊಂಡಿದ್ದ ವೇಳೆ ಸಿಡಿಲು ಬಡಿದು ಗ್ರಾಮದ ಪ್ರತಾಪ್ (24) ಸ್ಥಳದಲ್ಲೇ ಮೃತಪಟ್ಟಿದ್ದಾನೆ.</p>.<p>ಅಲ್ಲದೇ, ಮೃತನ ತಂದೆ ಕಾಂತರಾಜು (50) ಮತ್ತು ಸೋದರ ಪ್ರಶಾಂತ್ (20) ಗಂಭೀರವಾಗಿ ಗಾಯಗೊಂಡಿದ್ದು, ಆದಿಚುಂಚನಗಿರಿ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಡಿಲು ಬಡಿತಕ್ಕೆ ಎರಡು ಮೇಕೆಗಳು ಸ್ಥಳದಲ್ಲೇ ಮೃತಪಟ್ಟಿವೆ.</p>.<p>ಸ್ಥಳಕ್ಕೆ ಬೆಳ್ಳೂರು ಗ್ರಾಮಾಂತರ ಪೋಲಿಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ದಯಾನಂದ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗಮಂಗಲ:</strong> ಸೋಮವಾರ ಸಂಜೆ ಸುರಿದ ಗುಡುಗು ಮಿಂಚಿನ ಮಳೆಯಲ್ಲಿ ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟಿದ್ದು, ಮತ್ತಿಬ್ಬರಿಗೆ ಗಂಭೀರವಾಗಿ ಗಾಯಗಳಾಗಿವೆ.</p>.<p>ತಾಲ್ಲೂಕಿನ ಬೆಳ್ಳೂರು ಹೋಬಳಿಯ ತಿಗಳರಹಳ್ಳಿಯ ಬಳಿ ಇರುವ ಗುಡ್ಡದಲ್ಲಿ ಮೂವರು ಆಡು ಮೇಯಿಸಲು ಹೋಗಿದ್ದಾಗ ಸಂಜೆ 4.30ರ ಸಮಯದಲ್ಲಿ ಮಳೆ ಬಂದಿದೆ. ಗುಡ್ಡದಲ್ಲೇ ಇರುವ ಆಲದ ಮರವೊಂದರ ಕೆಳಗೆ ನಿಂತುಕೊಂಡಿದ್ದ ವೇಳೆ ಸಿಡಿಲು ಬಡಿದು ಗ್ರಾಮದ ಪ್ರತಾಪ್ (24) ಸ್ಥಳದಲ್ಲೇ ಮೃತಪಟ್ಟಿದ್ದಾನೆ.</p>.<p>ಅಲ್ಲದೇ, ಮೃತನ ತಂದೆ ಕಾಂತರಾಜು (50) ಮತ್ತು ಸೋದರ ಪ್ರಶಾಂತ್ (20) ಗಂಭೀರವಾಗಿ ಗಾಯಗೊಂಡಿದ್ದು, ಆದಿಚುಂಚನಗಿರಿ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಡಿಲು ಬಡಿತಕ್ಕೆ ಎರಡು ಮೇಕೆಗಳು ಸ್ಥಳದಲ್ಲೇ ಮೃತಪಟ್ಟಿವೆ.</p>.<p>ಸ್ಥಳಕ್ಕೆ ಬೆಳ್ಳೂರು ಗ್ರಾಮಾಂತರ ಪೋಲಿಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ದಯಾನಂದ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>