<p><strong>ಕೃಷ್ಣರಾಜಪೇಟೆ: </strong>ಕಳೆದ ಎರಡು ದಿನಗಳಿಂದ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಬೆಳೆಗಳು ಕೊಚ್ಚಿಹೋಗಿದ್ದು, ರೈತರಿಗೆ ಅಪಾರ ನಷ್ಟ ಉಂಟಾಗಿದೆ.ತಾಲ್ಲೂಕಿನ ಮರುವನಹಳ್ಳಿ ಗ್ರಾಮದ ವ್ಯಾಪ್ತಿಯ ಹತ್ತಕ್ಕೂ ಹೆಚ್ಚು ರೈತರಿಗೆ ಸೇರಿದ ಜಮೀನಿನಲ್ಲಿ ಬೆಳೆದು ನಿಂತಿದ್ದ, ಬತ್ತದ ಬೆಳೆ ಸಂಪೂರ್ಣ ಕೊಚ್ಚಿಹೋಗಿದೆ. <br /> <br /> ಇದಲ್ಲದೆ ತಾಲ್ಲೂಕಿನ ಭಾರತೀಪುರ ಕ್ರಾಸ್ ಪಂಚಾಯ್ತಿ ವ್ಯಾಪ್ತಿಗೆ ಸೇರಿದ ಗ್ರಾಮಗಳ ರೈತರ ಕಣಗಳಲ್ಲಿ ಒಣಗಿ ಹಾಕಿದ್ದ ರಾಗಿಹುಲ್ಲು ಮತ್ತು ರಾಗಿ ಫಸಲು ಮಳೆಗೆ ಆಹುತಿಯಾಗಿದೆ. ಈ ಘಟನೆಗಳಿಂದ ರೈತರಿಗೆ ಲಕ್ಷಾಂತರ ರೂ. ನಷ್ಟವಾಗಿದೆ. ತಾ.ಪಂ ಉಪಾಧ್ಯಕ್ಷ ಮಹದೇವೇಗೌಡ, ಮಾಜಿ ಅಧ್ಯಕ್ಷ ವೆಂಕಟಸುಬ್ಬೇಗೌಡ, ರೈತಮುಖಂಡ ಮರುವನಹಳ್ಳಿ ಶಂಕರ್ ಸೇರಿದಂತೆ ಹಲವು ಮುಖಂಡರು ಸ್ಥಳಗಳಿಗೆ ಭೇಟಿ ನೀಡಿದ್ದು, ಸಂತ್ರಸ್ತರ ರೈತರಿಗೆ ಪರಿಹಾರ ಒದಗಿಸುವ ಭರವಸೆ ನೀಡಿದ್ದಾರೆ.<br /> <br /> ಮರುವನಹಳ್ಳಿ ಗ್ರಾಮದ ಬಳಿ ನೀರಿನ ಪ್ರವಾಹದಿಂದ ಕೊಚ್ಚಿ ಹೋಗಿರುವ ಮುದ್ದನಕಟ್ಟೆ ಪ್ರದೇಶಕ್ಕೆ ಕಾವೇರಿ ನೀರಾವರಿ ನಿಗಮದ ಕಾರ್ಯ ಪಾಲಕ ಎಂಜಿನಿಯರ್ ಮರಿಸ್ವಾಮಿ, ಸಹಾಯಕ ಕಾರ್ಯಪಾಲಕ ಅಭಿಯಂತರ ಶಿವಮಾದಪ್ಪ ಮತ್ತಿತರ ಅಧಿಕಾರಿಗಳು ಭೇಟಿ ನೀಡಿ ಬೆಳೆ ಹಾನಿ ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೃಷ್ಣರಾಜಪೇಟೆ: </strong>ಕಳೆದ ಎರಡು ದಿನಗಳಿಂದ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಬೆಳೆಗಳು ಕೊಚ್ಚಿಹೋಗಿದ್ದು, ರೈತರಿಗೆ ಅಪಾರ ನಷ್ಟ ಉಂಟಾಗಿದೆ.ತಾಲ್ಲೂಕಿನ ಮರುವನಹಳ್ಳಿ ಗ್ರಾಮದ ವ್ಯಾಪ್ತಿಯ ಹತ್ತಕ್ಕೂ ಹೆಚ್ಚು ರೈತರಿಗೆ ಸೇರಿದ ಜಮೀನಿನಲ್ಲಿ ಬೆಳೆದು ನಿಂತಿದ್ದ, ಬತ್ತದ ಬೆಳೆ ಸಂಪೂರ್ಣ ಕೊಚ್ಚಿಹೋಗಿದೆ. <br /> <br /> ಇದಲ್ಲದೆ ತಾಲ್ಲೂಕಿನ ಭಾರತೀಪುರ ಕ್ರಾಸ್ ಪಂಚಾಯ್ತಿ ವ್ಯಾಪ್ತಿಗೆ ಸೇರಿದ ಗ್ರಾಮಗಳ ರೈತರ ಕಣಗಳಲ್ಲಿ ಒಣಗಿ ಹಾಕಿದ್ದ ರಾಗಿಹುಲ್ಲು ಮತ್ತು ರಾಗಿ ಫಸಲು ಮಳೆಗೆ ಆಹುತಿಯಾಗಿದೆ. ಈ ಘಟನೆಗಳಿಂದ ರೈತರಿಗೆ ಲಕ್ಷಾಂತರ ರೂ. ನಷ್ಟವಾಗಿದೆ. ತಾ.ಪಂ ಉಪಾಧ್ಯಕ್ಷ ಮಹದೇವೇಗೌಡ, ಮಾಜಿ ಅಧ್ಯಕ್ಷ ವೆಂಕಟಸುಬ್ಬೇಗೌಡ, ರೈತಮುಖಂಡ ಮರುವನಹಳ್ಳಿ ಶಂಕರ್ ಸೇರಿದಂತೆ ಹಲವು ಮುಖಂಡರು ಸ್ಥಳಗಳಿಗೆ ಭೇಟಿ ನೀಡಿದ್ದು, ಸಂತ್ರಸ್ತರ ರೈತರಿಗೆ ಪರಿಹಾರ ಒದಗಿಸುವ ಭರವಸೆ ನೀಡಿದ್ದಾರೆ.<br /> <br /> ಮರುವನಹಳ್ಳಿ ಗ್ರಾಮದ ಬಳಿ ನೀರಿನ ಪ್ರವಾಹದಿಂದ ಕೊಚ್ಚಿ ಹೋಗಿರುವ ಮುದ್ದನಕಟ್ಟೆ ಪ್ರದೇಶಕ್ಕೆ ಕಾವೇರಿ ನೀರಾವರಿ ನಿಗಮದ ಕಾರ್ಯ ಪಾಲಕ ಎಂಜಿನಿಯರ್ ಮರಿಸ್ವಾಮಿ, ಸಹಾಯಕ ಕಾರ್ಯಪಾಲಕ ಅಭಿಯಂತರ ಶಿವಮಾದಪ್ಪ ಮತ್ತಿತರ ಅಧಿಕಾರಿಗಳು ಭೇಟಿ ನೀಡಿ ಬೆಳೆ ಹಾನಿ ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>