ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಎಸ್‌ಐಎಲ್‌ನಲ್ಲಿ ಮಾರಾಟ:ಸಚಿವ

Last Updated 10 ಫೆಬ್ರುವರಿ 2011, 8:40 IST
ಅಕ್ಷರ ಗಾತ್ರ

ಮಂಡ್ಯ: ಮೈಸೂರು ಸಕ್ಕರೆ ಕಾರ್ಖಾನೆಯಲ್ಲಿ ಉತ್ಪಾದನೆಗೊಂಡು ಉಳಿದಿರುವ ವಿಸ್ಕಿ, ರಮ್ ಮದ್ಯವನ್ನು ಎಂಎಸ್‌ಐಎಲ್ ಮೂಲಕ ಮಾರಾಟ ಮಾಡುವ ಚಿಂತನೆ ಇದೆ ಎಂದು ಅಬಕಾರಿ ಖಾತೆ ಸಚಿವ ಎಂ.ಪಿ. ರೇಣುಕಾಚಾರ್ಯ ಅವರು ಅಭಿಪ್ರಾಯಪಟ್ಟಿದ್ದಾರೆ.

ಬುಧವಾರ ಮೈಷುಗರ್ ಕಾರ್ಖಾನೆಗೆ ಭೇಟಿ ನೀಡಿ ಕಾರ್ಖಾನೆಯ ಕಾರ್ಯ ವೈಖರಿಯನ್ನು ವೀಕ್ಷಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.ಭೇಟಿ ಸಂದರ್ಭದಲ್ಲಿ ಕಾರ್ಖಾನೆಯ ಆಡಳಿತ ಇಲ್ಲಿ ತಯಾರಾದ ಮೈ ವ್ಹಿಸ್ಕಿ, ಮೈ ಬ್ರಾಂದಿ ಹೆಸರಿನ ಮದ್ಯ ಸುಮಾರು 13 ಸಾವಿರ ಕೇಸ್ ಉಳಿದಿದೆ ಎಂಬ ಮಾಹಿತಿ ನೀಡಿದೆ. ಇದನ್ನು ವಿಲೆವಾರಿ ಮಾಡಲು ಇಲಾಖೆ ಚಿಂತನೆ ನಡೆಸಲಿದೆ ಎಂದು ಅವರು ತಿಳಿಸಿದರು.

ಜಿಲ್ಲೆಯಲ್ಲಿನ ಮೈಷುಗರ್ ಮತ್ತು ಸಹಕಾರಿ ವ್ಯಾಪ್ತಿಯ ಪಿಎಸ್‌ಎಸ್‌ಕೆ ಕಾರ್ಖಾನೆಯನ್ನು ಅಭಿವೃದ್ಧಿ ಪಡಿಸಲು ಸರ್ಕಾರ ಬದ್ಧವಾಗಿದೆ. ಅಲ್ಲದೆ, ಮೈಷುಗರ್ ಅಭಿವೃದ್ಧಿಗೆ ಬಜೆಟ್‌ನಲ್ಲಿ ಹೆಚ್ಚಿನ ಹಣಕಾಸು ಕಾದಿರಿಸುವಂತೆಯೂ ಮನವಿ ಮಾಡಲಾಗುವುದು ಎಂದರು.

ಮೈಷುಗರ್‌ನಲ್ಲಿ ಈಗಾಗಲೇ ಅಗತ್ಯ ಪ್ರಮಾಣದ ಕಬ್ಬು ಅರೆದಿದ್ದು, ಮುಂದಿನಹಂಗಾಮಿನಲ್ಲಿ 6 ಲಕ್ಷ ಟನ್ ಕಬ್ಬು ಅರೆಯುವ ಗುರಿ ಇದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಕಾರ್ಖಾನೆಯ ಅಧ್ಯಕ್ಷ ನಾಗರಾಜಪ್ಪ ಮತ್ತು ಇತರ ಅಧಿಕಾರಿಗಳು ಹಾಜರಿದ್ದರು.
 

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT