<p><strong>ಮಂಡ್ಯ:</strong> ರಾಜ್ಯ ಕಾಂಗ್ರೆಸ್ ಕರೆಯಂತೆ ಜಿಲ್ಲೆಯಲ್ಲಿಯೂ ಪಕ್ಷದ ಮುಖಂಡರು `ಕಾಂಗ್ರೆಸ್ ನಡಿಗೆ -ಜನರ ಬಳಿಗೆ~ ಕಾರ್ಯಕ್ರಮಕ್ಕೆ ಬುಧವಾರ (ಜೂನ್ 15) ಚಾಲನೆ ನೀಡಲಿದ್ದಾರೆ.<br /> <br /> ಮಂಗಳವಾರ ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಯಕ್ರಮ ವಿವರ ಕುರಿತ ಕಿರುಹೊತ್ತಿಗೆಯನ್ನು ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎಸ್. ಆತ್ಮಾನಂದ ಅವರು ಬಿಡುಗಡೆ ಮಾಡಿದರು.<br /> ಜಿಲ್ಲೆಯಲ್ಲಿ ಕಾರ್ಯಕ್ರಮ ಜಾರಿಗೊಳಿಸುವ ಉಸ್ತುವಾರಿಯನ್ನು ಮಾಜಿ ಸಚಿವ ಸಿ.ಎಂ. ಇಬ್ರಾಹಿಂ, ಶಾಸಕ ಎಂ. ಕೃಷ್ಣಪ್ಪ ಅವರಿಗೆ ವಹಿಸಲಾಗಿದೆ.<br /> <br /> ಬುಧವಾರ ಎಲ್ಲ 14 ಬ್ಲಾಕ್ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ 14 ಪಂಚಾಯಿತಿಗಳಲ್ಲಿ ಏಕ ಕಾಲದಲ್ಲಿ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ. ಒಟ್ಟು 60 ದಿನ ಕಾಲ ಪಂಚಾಯಿತಿ ಮತ್ತು ಬೂತ್ ಮಟ್ಟದಲ್ಲಿ ಪಕ್ಷದ ಸಂಘಟನೆಗೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.<br /> <br /> ಪಕ್ಷದ ಸಂಘಟನೆಗೆ ಪೂರ್ವಭಾವಿಯಾಗಿ ಈ ಕಾರ್ಯಕ್ರಮವನ್ನು ರೂಪಿಸಿದ್ದು, 14 ಬ್ಲಾಕ್ ಕಾಂಗ್ರೆಸ್ ಸಮಿತಿಗಳಿಗೆ ಜಿಲ್ಲೆಯ ಕಾಂಗ್ರೆಸ್ ಮುಖಂಡರ ಉಸ್ತುವಾರಿಯಲ್ಲಿ ತಲಾ 4 ಜನರಂತೆ 14 ತಂಡ ರಚಿಸಲಾಗಿದೆ. ಆಯಾ ವ್ಯಾಪ್ತಿಯ ಪಂಚಾಯಿತಿ ಮತ್ತು ಬೂತ್ ಮಟ್ಟದಲ್ಲಿ ಪಕ್ಷ ಬಲಪಡಿಸಲು ಈಸಮಿತಿಗಳು ಕಾರ್ಯ ನಿರ್ವಹಿಸಲಿವೆ ಎಂದು ಹೇಳಿಕೆ ತಿಳಿಸಿದೆ.<br /> <br /> ಮಂಗಳವಾರ ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಸುರೇಶ್ಗೌಡ, ಮಾಜಿ ಶಾಸಕಿ ಮಲ್ಲಾಜಮ್ಮ, ಮಧು ಮಾದೇಗೌಡ, ಮುಖಂಡರಾದ ಯಮದೂರು ಸಿದ್ದರಾಜು, ಡಾ.ಮೂರ್ತಿ, ಎಂಂ.ಬಿ. ಶ್ರೀಕಾಂತ್, ಪಿ.ಎಂ. ಸೋಮಶೇಖರ್, ಶುಭದಾಯಿನಿ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ರಾಜ್ಯ ಕಾಂಗ್ರೆಸ್ ಕರೆಯಂತೆ ಜಿಲ್ಲೆಯಲ್ಲಿಯೂ ಪಕ್ಷದ ಮುಖಂಡರು `ಕಾಂಗ್ರೆಸ್ ನಡಿಗೆ -ಜನರ ಬಳಿಗೆ~ ಕಾರ್ಯಕ್ರಮಕ್ಕೆ ಬುಧವಾರ (ಜೂನ್ 15) ಚಾಲನೆ ನೀಡಲಿದ್ದಾರೆ.<br /> <br /> ಮಂಗಳವಾರ ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಯಕ್ರಮ ವಿವರ ಕುರಿತ ಕಿರುಹೊತ್ತಿಗೆಯನ್ನು ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎಸ್. ಆತ್ಮಾನಂದ ಅವರು ಬಿಡುಗಡೆ ಮಾಡಿದರು.<br /> ಜಿಲ್ಲೆಯಲ್ಲಿ ಕಾರ್ಯಕ್ರಮ ಜಾರಿಗೊಳಿಸುವ ಉಸ್ತುವಾರಿಯನ್ನು ಮಾಜಿ ಸಚಿವ ಸಿ.ಎಂ. ಇಬ್ರಾಹಿಂ, ಶಾಸಕ ಎಂ. ಕೃಷ್ಣಪ್ಪ ಅವರಿಗೆ ವಹಿಸಲಾಗಿದೆ.<br /> <br /> ಬುಧವಾರ ಎಲ್ಲ 14 ಬ್ಲಾಕ್ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ 14 ಪಂಚಾಯಿತಿಗಳಲ್ಲಿ ಏಕ ಕಾಲದಲ್ಲಿ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ. ಒಟ್ಟು 60 ದಿನ ಕಾಲ ಪಂಚಾಯಿತಿ ಮತ್ತು ಬೂತ್ ಮಟ್ಟದಲ್ಲಿ ಪಕ್ಷದ ಸಂಘಟನೆಗೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.<br /> <br /> ಪಕ್ಷದ ಸಂಘಟನೆಗೆ ಪೂರ್ವಭಾವಿಯಾಗಿ ಈ ಕಾರ್ಯಕ್ರಮವನ್ನು ರೂಪಿಸಿದ್ದು, 14 ಬ್ಲಾಕ್ ಕಾಂಗ್ರೆಸ್ ಸಮಿತಿಗಳಿಗೆ ಜಿಲ್ಲೆಯ ಕಾಂಗ್ರೆಸ್ ಮುಖಂಡರ ಉಸ್ತುವಾರಿಯಲ್ಲಿ ತಲಾ 4 ಜನರಂತೆ 14 ತಂಡ ರಚಿಸಲಾಗಿದೆ. ಆಯಾ ವ್ಯಾಪ್ತಿಯ ಪಂಚಾಯಿತಿ ಮತ್ತು ಬೂತ್ ಮಟ್ಟದಲ್ಲಿ ಪಕ್ಷ ಬಲಪಡಿಸಲು ಈಸಮಿತಿಗಳು ಕಾರ್ಯ ನಿರ್ವಹಿಸಲಿವೆ ಎಂದು ಹೇಳಿಕೆ ತಿಳಿಸಿದೆ.<br /> <br /> ಮಂಗಳವಾರ ಪಕ್ಷದ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ಸುರೇಶ್ಗೌಡ, ಮಾಜಿ ಶಾಸಕಿ ಮಲ್ಲಾಜಮ್ಮ, ಮಧು ಮಾದೇಗೌಡ, ಮುಖಂಡರಾದ ಯಮದೂರು ಸಿದ್ದರಾಜು, ಡಾ.ಮೂರ್ತಿ, ಎಂಂ.ಬಿ. ಶ್ರೀಕಾಂತ್, ಪಿ.ಎಂ. ಸೋಮಶೇಖರ್, ಶುಭದಾಯಿನಿ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>