<p><strong>ಮಂಡ್ಯ: </strong>ಮಳವಳ್ಳಿ ತಾಲ್ಲೂಕಿನ ಆಲದಹಳ್ಳಿ, ಧನಗೂರು, ಕನ್ನಲಿ ಸೇರಿದಂತೆ ಕೆಲ ಗ್ರಾಮಗಳಲ್ಲಿ ಆಗಾಗ್ಗೆ ಕಾಣಿಸಿಕೊಳ್ಳುತ್ತಿರುವ ಕಾಡಾನೆ ಹಾವಳಿ ಸಮಸ್ಯೆಗೆ ಶಾಶ್ವತ ಪರಿಹಾರವನ್ನು ನೀಡಬೇಕು ಎಂದು ಆಗ್ರಹಪಡಿಸಿ ಕನ್ನಡಸೇನೆ ಕರ್ನಾಟಕದ ಕಾರ್ಯಕರ್ತರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟಿಸಿದರು.<br /> <br /> ತಾಲ್ಲೂಕಿನ ಕಾಡು ಅಂಚಿನ ಅನೇಕ ಗ್ರಾಮಗಳಲ್ಲಿ ಈಚಿನ ದಿನಗಳಲ್ಲಿ ಕಾಡಾನೆ ಹಾವಳಿಯು ವ್ಯಾಪಕವಾಗಿದೆ. ರೈತರು ಬೆಳೆದ ಫಸಲು ಹಾನಿಯಾಗಿದೆ. ಇಷ್ಟೆಲ್ಲಾ ಆದರೂ ಜಿಲ್ಲಾಡಳಿತ ಇದನ್ನು ತಡೆಯಲು ಕ್ರಮವನ್ನೇ ತೆಗೆದುಕೊಂಡಿಲ್ಲ ಎಂದು ಕಾರ್ಯಕರ್ತರು ಆರೋಪಿಸಿದರು.<br /> <br /> ಸಿಲ್ವರ್ಜ್ಯೂಬಿಲಿ ಪಾರ್ಕ್ನಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೂ ಮೆರವಣಿಗೆಯಲ್ಲಿ ಬಂದು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಬಳಿಕ ಈ ಸಂಬಂಧ ಮನವಿ ಅರ್ಪಿಸಿದರು.<br /> <br /> ಅರಣ್ಯ ಇಲಾಖೆಯ ಸಿಬ್ಬಂದಿ ಆನೆ ಹಾವಳಿಯನ್ನು ತಡೆಯಲು ವಿಫಲರಾಗಿದ್ದು, ಗ್ರಾಮಸ್ಥರಿಗೆ ಊರನ್ನೇ ಖಾಲಿ ಮಾಡಿ ಎಂದು ಸಲಹೆ ಮಾಡುತ್ತಿದ್ದಾರೆ ಎಂದು ದೂರಿದರು.<br /> <br /> ಕಾಡಾನೆ ಹಾವಳಿ ತಡೆಯಲು ಶಾಶ್ವತ ಪರಿಹಾರ ಕ್ರಮ ಕೈಗೊಳ್ಳಬೇಕು, ನಷ್ಟವಾದ ಬೆಳೆಗಳಿಗೆ ಪರಿಹಾರ ಕೊಡಬೇಕು, ಕೃಷಿ ಭೂಮಿ ಹೊರತುಪಡಿಸಿ ಅರಣ್ಯದ ಗಡಿ ಗುರುತಿಸಬೇಕು ಎಂದು ಒತ್ತಾಯಿಸಿದರು.<br /> ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಸಿ.ಮಂಜುನಾಥ್, ಹೇಮಾವತಿ, ಹನುಮೇಶ್, ಸುಜಿತ್ಕುಮಾರ್, ವಿನೋದ್, ಜಯಮ್ಮ, ಗೌರಮ್ಮ, ಪಾರ್ವತಮ್ಮ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ: </strong>ಮಳವಳ್ಳಿ ತಾಲ್ಲೂಕಿನ ಆಲದಹಳ್ಳಿ, ಧನಗೂರು, ಕನ್ನಲಿ ಸೇರಿದಂತೆ ಕೆಲ ಗ್ರಾಮಗಳಲ್ಲಿ ಆಗಾಗ್ಗೆ ಕಾಣಿಸಿಕೊಳ್ಳುತ್ತಿರುವ ಕಾಡಾನೆ ಹಾವಳಿ ಸಮಸ್ಯೆಗೆ ಶಾಶ್ವತ ಪರಿಹಾರವನ್ನು ನೀಡಬೇಕು ಎಂದು ಆಗ್ರಹಪಡಿಸಿ ಕನ್ನಡಸೇನೆ ಕರ್ನಾಟಕದ ಕಾರ್ಯಕರ್ತರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟಿಸಿದರು.<br /> <br /> ತಾಲ್ಲೂಕಿನ ಕಾಡು ಅಂಚಿನ ಅನೇಕ ಗ್ರಾಮಗಳಲ್ಲಿ ಈಚಿನ ದಿನಗಳಲ್ಲಿ ಕಾಡಾನೆ ಹಾವಳಿಯು ವ್ಯಾಪಕವಾಗಿದೆ. ರೈತರು ಬೆಳೆದ ಫಸಲು ಹಾನಿಯಾಗಿದೆ. ಇಷ್ಟೆಲ್ಲಾ ಆದರೂ ಜಿಲ್ಲಾಡಳಿತ ಇದನ್ನು ತಡೆಯಲು ಕ್ರಮವನ್ನೇ ತೆಗೆದುಕೊಂಡಿಲ್ಲ ಎಂದು ಕಾರ್ಯಕರ್ತರು ಆರೋಪಿಸಿದರು.<br /> <br /> ಸಿಲ್ವರ್ಜ್ಯೂಬಿಲಿ ಪಾರ್ಕ್ನಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೂ ಮೆರವಣಿಗೆಯಲ್ಲಿ ಬಂದು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಬಳಿಕ ಈ ಸಂಬಂಧ ಮನವಿ ಅರ್ಪಿಸಿದರು.<br /> <br /> ಅರಣ್ಯ ಇಲಾಖೆಯ ಸಿಬ್ಬಂದಿ ಆನೆ ಹಾವಳಿಯನ್ನು ತಡೆಯಲು ವಿಫಲರಾಗಿದ್ದು, ಗ್ರಾಮಸ್ಥರಿಗೆ ಊರನ್ನೇ ಖಾಲಿ ಮಾಡಿ ಎಂದು ಸಲಹೆ ಮಾಡುತ್ತಿದ್ದಾರೆ ಎಂದು ದೂರಿದರು.<br /> <br /> ಕಾಡಾನೆ ಹಾವಳಿ ತಡೆಯಲು ಶಾಶ್ವತ ಪರಿಹಾರ ಕ್ರಮ ಕೈಗೊಳ್ಳಬೇಕು, ನಷ್ಟವಾದ ಬೆಳೆಗಳಿಗೆ ಪರಿಹಾರ ಕೊಡಬೇಕು, ಕೃಷಿ ಭೂಮಿ ಹೊರತುಪಡಿಸಿ ಅರಣ್ಯದ ಗಡಿ ಗುರುತಿಸಬೇಕು ಎಂದು ಒತ್ತಾಯಿಸಿದರು.<br /> ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಸಿ.ಮಂಜುನಾಥ್, ಹೇಮಾವತಿ, ಹನುಮೇಶ್, ಸುಜಿತ್ಕುಮಾರ್, ವಿನೋದ್, ಜಯಮ್ಮ, ಗೌರಮ್ಮ, ಪಾರ್ವತಮ್ಮ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>