<p><strong>ಮಂಡ್ಯ: </strong>ಪೊಟಾಷ್, ಡಿಎಪಿ, ಸುಫಲಾ, ಯೂರಿಯಾ ಸೇರಿದಂತೆ ವಿವಿಧ ರಸಗೊಬ್ಬರಗಳ ಬೆಲೆ ಏರಿಕೆ ಆಗಿರುವುದನ್ನು ಖಂಡಿಸಿ ರೈತ ಸಂಘದ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.<br /> <br /> ಮೈಸೂರು-ಬೆಂಗಳೂರು ಹೆದ್ದಾ ರಿಯ ಸರ್ಕಾರಿ ಬಸ್ ನಿಲ್ದಾಣ ಸಮೀಪ ವೃತ್ತದಲ್ಲಿ ಜಮಾವಣೆಗೊಂಡ ರೈತರು, ಮಾನವ ಸರಳಿ ನಿರ್ಮಿಸಿ ಕೆಲ ಕಾಲ ರಸ್ತೆಯಲ್ಲಿನ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದರು. ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.<br /> <br /> ರೈತರು ಬೆಳೆದ ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಲೆ ನೀಡಲು ಮೀನಾಮೇಷ ಎಣಿಸುವ ಸರ್ಕಾರ ಅಗತ್ಯ ರಸಗೊಬ್ಬರಗಳ ಬೆಲೆಯನ್ನು ಏಕಾಏಕೀ ಏರಿಸುವ ಮೂಲಕ ರೈತರನ್ನು ಶೋಷಿಸುತ್ತಿದೆ. ಈಗಾಗಲೇ ಬೇಸಾಯದ ವೆಚ್ಚ ದುಪ್ಪಟವಾಗಿದೆ. ಈಗ ರಸಗೊಬ್ಬರದ ಬೆಲೆಯನ್ನೂ ಹೆಚ್ಚಿಸಿರುವುದು ಸರಿಯಲ್ಲ ಎಂದು ಕಿಡಿಕಾರಿದರು.<br /> <br /> ಡಿಎಪಿ ಹಳೇ ದರ ರೂ 490 ಇದ್ದು, ಈಗ ರೂ. 670ಕ್ಕೆ ಏರಿಕೆ ಆಗಿದೆ. ಅದೇ ರೀತಿ, 10:26:26 ಗೊಬ್ಬರದ ಬೆಲೆ ರೂ. 730ಕ್ಕೆ, ಪೊಟಾಸ್ ದರ ರೂ. 390ಕ್ಕೆ, 20:20:20 ಗೊಬ್ಬರ ಬೆಲೆ ರೂ 565 ಆಗಿದೆ. ಜತೆಗೆ, ಕ್ರಿಮಿ ನಾಶಕ ಔಷಧಗಳ ಬೆಲೆಯೂ ಏರಿದೆ. ಬೇಸಾಯ ಕಷ್ಟವಾಗುತ್ತಿದ್ದು, ರೈತರ ನೆರವಿಗೆ ಸರ್ಕಾರ ಧಾವಿಸಬೇಕು ಎಂದು ಆಗ್ರಹಿಸಿದರು.<br /> <br /> ರೈತ ಸಂಘದ ಎಸ್. ಸುರೇಶ್, ಹನಿಯಂಬಾಡಿ ನಾಗರಾಜು, ಬೊಮ್ಮೇಗೌಡ, ಸೋಮಶೇಖರ್, ಹಲ್ಲೇಗೆರೆ ಶಿವರಾಮು, ಮುದ್ದೇಗೌಡ, ಬಳ್ಳಾರಿಗೌಡ, ಸಿದ್ದೇಗೌಡ ಅವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ: </strong>ಪೊಟಾಷ್, ಡಿಎಪಿ, ಸುಫಲಾ, ಯೂರಿಯಾ ಸೇರಿದಂತೆ ವಿವಿಧ ರಸಗೊಬ್ಬರಗಳ ಬೆಲೆ ಏರಿಕೆ ಆಗಿರುವುದನ್ನು ಖಂಡಿಸಿ ರೈತ ಸಂಘದ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.<br /> <br /> ಮೈಸೂರು-ಬೆಂಗಳೂರು ಹೆದ್ದಾ ರಿಯ ಸರ್ಕಾರಿ ಬಸ್ ನಿಲ್ದಾಣ ಸಮೀಪ ವೃತ್ತದಲ್ಲಿ ಜಮಾವಣೆಗೊಂಡ ರೈತರು, ಮಾನವ ಸರಳಿ ನಿರ್ಮಿಸಿ ಕೆಲ ಕಾಲ ರಸ್ತೆಯಲ್ಲಿನ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದರು. ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.<br /> <br /> ರೈತರು ಬೆಳೆದ ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಲೆ ನೀಡಲು ಮೀನಾಮೇಷ ಎಣಿಸುವ ಸರ್ಕಾರ ಅಗತ್ಯ ರಸಗೊಬ್ಬರಗಳ ಬೆಲೆಯನ್ನು ಏಕಾಏಕೀ ಏರಿಸುವ ಮೂಲಕ ರೈತರನ್ನು ಶೋಷಿಸುತ್ತಿದೆ. ಈಗಾಗಲೇ ಬೇಸಾಯದ ವೆಚ್ಚ ದುಪ್ಪಟವಾಗಿದೆ. ಈಗ ರಸಗೊಬ್ಬರದ ಬೆಲೆಯನ್ನೂ ಹೆಚ್ಚಿಸಿರುವುದು ಸರಿಯಲ್ಲ ಎಂದು ಕಿಡಿಕಾರಿದರು.<br /> <br /> ಡಿಎಪಿ ಹಳೇ ದರ ರೂ 490 ಇದ್ದು, ಈಗ ರೂ. 670ಕ್ಕೆ ಏರಿಕೆ ಆಗಿದೆ. ಅದೇ ರೀತಿ, 10:26:26 ಗೊಬ್ಬರದ ಬೆಲೆ ರೂ. 730ಕ್ಕೆ, ಪೊಟಾಸ್ ದರ ರೂ. 390ಕ್ಕೆ, 20:20:20 ಗೊಬ್ಬರ ಬೆಲೆ ರೂ 565 ಆಗಿದೆ. ಜತೆಗೆ, ಕ್ರಿಮಿ ನಾಶಕ ಔಷಧಗಳ ಬೆಲೆಯೂ ಏರಿದೆ. ಬೇಸಾಯ ಕಷ್ಟವಾಗುತ್ತಿದ್ದು, ರೈತರ ನೆರವಿಗೆ ಸರ್ಕಾರ ಧಾವಿಸಬೇಕು ಎಂದು ಆಗ್ರಹಿಸಿದರು.<br /> <br /> ರೈತ ಸಂಘದ ಎಸ್. ಸುರೇಶ್, ಹನಿಯಂಬಾಡಿ ನಾಗರಾಜು, ಬೊಮ್ಮೇಗೌಡ, ಸೋಮಶೇಖರ್, ಹಲ್ಲೇಗೆರೆ ಶಿವರಾಮು, ಮುದ್ದೇಗೌಡ, ಬಳ್ಳಾರಿಗೌಡ, ಸಿದ್ದೇಗೌಡ ಅವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>