‘ರೈಲ್ವೆ ಸುರಕ್ಷತಾ ಆಯುಕ್ತರಿಂದ ಕಾಮಗಾರಿ ಪರಿಶೀಲನೆ ನಡೆದಿರುವುದರಿಂದ ಈ ಮಾರ್ಗದಲ್ಲಿ ಆದಷ್ಟು ಶೀಘ್ರ ರೈಲುಗಳು ಓಡಾಡಲಿವೆ. ಕೆಂಗೇರಿಯಿಂದ ಯಲಿಯೂರು ವರೆಗೆ ಈ ರೈಲು ಮಾರ್ಗದ ವಿದ್ಯುದೀಕರಣ ಕಾರ್ಯ ಪೂರ್ಣಗೊಂಡಿದೆ. ಯಲಿಯೂರಿನಿಂದ ಮೈಸೂರು ವರೆಗಿನ ವಿದ್ಯುದೀಕರಣ ಕಾಮಗಾರಿ ಬಾಕಿ ಇದ್ದು, ತಿಂಗಳಾಂತ್ಯಕ್ಕೆ ಪೂರ್ಣಗೊಳ್ಳುವ ಸಾಧ್ಯತೆ ಇದೆ’ ಎಂದು ಅಧಿಕಾರಿಗಳು ತಿಳಿಸಿದರು.