<p><strong>ಮಂಡ್ಯ:</strong> ಮನುಷ್ಯನ ದಾಹ ಹೆಚ್ಚುತ್ತಿರುವುದರಿಂದ ಸಮಾಜದಲ್ಲಿ ನೈತಿಕ ಅಧಃಪತನವಾಗುತ್ತಿದೆ ಎಂದು ಸಾಹಿತಿ ಪ್ರೊ. ಚಂದ್ರಶೇಖರ ಪಾಟೀಲ ತೀವ್ರ ಕಳವಳ ವ್ಯಕ್ತಪಡಿಸಿದರು.<br /> <br /> ನಗರದ ರೈತ ಸಭಾಂಗಣದಲ್ಲಿ ಕರ್ನಾಟಕ ಸಂಘದ ವತಿಯಿಂದ ಸೋಮವಾರ ನಡೆದ ಅರಸಮ್ಮ ಮೆಣಸೇಗೌಡ ಕೃಷಿ ಪ್ರಶಸ್ತಿಯನ್ನು ಪ್ರಗತಿಪರ ರೈತ ಎ.ಪಿ. ದೊಡ್ಡಲಿಂಗೇಗೌಡ ಅವರಿಗೆ ಪ್ರದಾನ ಮಾಡಿ ಅವರು ಮಾತನಾಡಿದರು. <br /> <br /> ಸ್ವಾಭಿಮಾನ ಬೆಳೆಸಿಕೊಳ್ಳಬೇಕು. ಸ್ವಾವಲಂಬನೆ ಸಾಧಿಸಬೇಕು. ಸಮಾಧಾನದಿಂದ ಇರಬೇಕು. ಆಗ ಮಾತ್ರ ಬದುಕು ಹಸನಾಗುತ್ತದೆ. ರೈತರು ಆತ್ಮಹತ್ಯೆ ನಿರ್ಧಾರದಿಂದ ದೂರ ಉಳಿಯಬಹುದು ಎಂದರು.<br /> <br /> ಭೂಮಿಗೆ ಜಾತಿ ಇಲ್ಲ. ರೈತ ಎಲ್ಲರಿಗೂ ಅನ್ನದಾತನಾಗಿದ್ದಾನೆ. ಆತ ನೆಮ್ಮದಿಯಿಂದ ಇದ್ದಾಗ ಮಾತ್ರ ನಾವೆಲ್ಲರೂ ನೆಮ್ಮದಿಯಿಂದ ಇರಲು ಸಾಧ್ಯ. ಕೆಲಸ ಯಾವುದೇ ಇರಲಿ, ಅದರಲ್ಲಿ ಕೌಶಲ್ಯವನ್ನು ಸಾಧಿಸಬೇಕು. ಆಗ ಸಾಧನೆ ಸಾಧ್ಯವಾಗುತ್ತದೆ ಎಂದು ಹೇಳಿದರು.<br /> <br /> ಇಂದಿನ ರಾಜಕಾರಣವು ಜಾತೀಕಾರಣವಾಗಿದೆ. ಇಂದಿನ ಪರಿಸ್ಥಿತಿಗೆ ರಾಜಕಾರಣಿಗಳು ಹಾಗೂ ಧರ್ಮ ಗುರುಗಳು ಕಾರಣರಾಗಿದ್ದಾರೆ. ಇದನ್ನು ಸರಿಪಡಿಸುವ ಕುರಿತು ಚಿಂತನೆ ನಡೆಯಬೇಕಿದೆ ಎಂದು ಅಭಿಪ್ರಾಯಪಟ್ಟರು.<br /> <br /> ಪ್ರಶಸ್ತಿ ಸ್ವೀಕರಿಸಿದ ಎ.ಪಿ. ದೊಡ್ಡಲಿಂಗೇಗೌಡ ಮಾತನಾಡಿ, ಭೂಮಿಯಲ್ಲಿ ಸಿಗುವ ನೆಮ್ಮದಿಯನ್ನು ಬಿಟ್ಟು, ನೆಮ್ಮದಿಯನ್ನು ಹುಡುಕಿಕೊಂಡು ರೈತರು, ರೈತರ ಮಕ್ಕಳು ಪಟ್ಟಣಕ್ಕೆ ಹೋಗುತ್ತಿದ್ದಾರೆ. ಕಷ್ಟ ಪಟ್ಟರೆ ಕೃಷಿಯಲ್ಲಿಯೂ ಲಾಭವಿದೆ ಎಂದರು.<br /> <br /> ಅತಿಯಾಸೆಯನ್ನು ಬಿಡಬೇಕು. ಇದ್ದುದರಲ್ಲಿ ನೆಮ್ಮದಿ ಯಿಂದ ಬದುಕುವುದನ್ನು ಕಲಿಯಬೇಕು. ಕುಟುಂಬ ದೊಂದಿಗೆ ಸಂತಸದಿಂದ ಬದುಕುತ್ತಿದ್ದೇನೆ ಎಂದು ಹೇಳಿದರು.<br /> <br /> ಅಧ್ಯಕ್ಷತೆ ವಹಿಸಿದ್ದ ಜಾನಪದ ವಿದ್ವಾಂಸ ಹ.ಕ. ರಾಜೇಗೌಡ ಮಾತನಾಡಿ, ಮಧ್ಯವರ್ತಿಗಳ ಹಾವಳಿ ತಪ್ಪಿಸಬೇಕು. ರೈತರೇ ಖುದ್ದಾಗಿ ಹೊಲದಲ್ಲಿ ಕೆಲಸ ಮಾಡಿದರೆ ಲಾಭ ಗಳಿಸಲು ಸಾಧ್ಯವಾಗುತ್ತದೆ ಎಂದರು.<br /> <br /> ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ. ಜಯಪ್ರಕಾಶಗೌಡ, ಪ್ರಾಸ್ತಾವಿಕವಾಗಿ ಮಾತನಾಡಿದರು.<br /> ಶಾಸಕ ಎಂ.ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯ ಬಿ. ರಾಮಕೃಷ್ಣ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಮನುಷ್ಯನ ದಾಹ ಹೆಚ್ಚುತ್ತಿರುವುದರಿಂದ ಸಮಾಜದಲ್ಲಿ ನೈತಿಕ ಅಧಃಪತನವಾಗುತ್ತಿದೆ ಎಂದು ಸಾಹಿತಿ ಪ್ರೊ. ಚಂದ್ರಶೇಖರ ಪಾಟೀಲ ತೀವ್ರ ಕಳವಳ ವ್ಯಕ್ತಪಡಿಸಿದರು.<br /> <br /> ನಗರದ ರೈತ ಸಭಾಂಗಣದಲ್ಲಿ ಕರ್ನಾಟಕ ಸಂಘದ ವತಿಯಿಂದ ಸೋಮವಾರ ನಡೆದ ಅರಸಮ್ಮ ಮೆಣಸೇಗೌಡ ಕೃಷಿ ಪ್ರಶಸ್ತಿಯನ್ನು ಪ್ರಗತಿಪರ ರೈತ ಎ.ಪಿ. ದೊಡ್ಡಲಿಂಗೇಗೌಡ ಅವರಿಗೆ ಪ್ರದಾನ ಮಾಡಿ ಅವರು ಮಾತನಾಡಿದರು. <br /> <br /> ಸ್ವಾಭಿಮಾನ ಬೆಳೆಸಿಕೊಳ್ಳಬೇಕು. ಸ್ವಾವಲಂಬನೆ ಸಾಧಿಸಬೇಕು. ಸಮಾಧಾನದಿಂದ ಇರಬೇಕು. ಆಗ ಮಾತ್ರ ಬದುಕು ಹಸನಾಗುತ್ತದೆ. ರೈತರು ಆತ್ಮಹತ್ಯೆ ನಿರ್ಧಾರದಿಂದ ದೂರ ಉಳಿಯಬಹುದು ಎಂದರು.<br /> <br /> ಭೂಮಿಗೆ ಜಾತಿ ಇಲ್ಲ. ರೈತ ಎಲ್ಲರಿಗೂ ಅನ್ನದಾತನಾಗಿದ್ದಾನೆ. ಆತ ನೆಮ್ಮದಿಯಿಂದ ಇದ್ದಾಗ ಮಾತ್ರ ನಾವೆಲ್ಲರೂ ನೆಮ್ಮದಿಯಿಂದ ಇರಲು ಸಾಧ್ಯ. ಕೆಲಸ ಯಾವುದೇ ಇರಲಿ, ಅದರಲ್ಲಿ ಕೌಶಲ್ಯವನ್ನು ಸಾಧಿಸಬೇಕು. ಆಗ ಸಾಧನೆ ಸಾಧ್ಯವಾಗುತ್ತದೆ ಎಂದು ಹೇಳಿದರು.<br /> <br /> ಇಂದಿನ ರಾಜಕಾರಣವು ಜಾತೀಕಾರಣವಾಗಿದೆ. ಇಂದಿನ ಪರಿಸ್ಥಿತಿಗೆ ರಾಜಕಾರಣಿಗಳು ಹಾಗೂ ಧರ್ಮ ಗುರುಗಳು ಕಾರಣರಾಗಿದ್ದಾರೆ. ಇದನ್ನು ಸರಿಪಡಿಸುವ ಕುರಿತು ಚಿಂತನೆ ನಡೆಯಬೇಕಿದೆ ಎಂದು ಅಭಿಪ್ರಾಯಪಟ್ಟರು.<br /> <br /> ಪ್ರಶಸ್ತಿ ಸ್ವೀಕರಿಸಿದ ಎ.ಪಿ. ದೊಡ್ಡಲಿಂಗೇಗೌಡ ಮಾತನಾಡಿ, ಭೂಮಿಯಲ್ಲಿ ಸಿಗುವ ನೆಮ್ಮದಿಯನ್ನು ಬಿಟ್ಟು, ನೆಮ್ಮದಿಯನ್ನು ಹುಡುಕಿಕೊಂಡು ರೈತರು, ರೈತರ ಮಕ್ಕಳು ಪಟ್ಟಣಕ್ಕೆ ಹೋಗುತ್ತಿದ್ದಾರೆ. ಕಷ್ಟ ಪಟ್ಟರೆ ಕೃಷಿಯಲ್ಲಿಯೂ ಲಾಭವಿದೆ ಎಂದರು.<br /> <br /> ಅತಿಯಾಸೆಯನ್ನು ಬಿಡಬೇಕು. ಇದ್ದುದರಲ್ಲಿ ನೆಮ್ಮದಿ ಯಿಂದ ಬದುಕುವುದನ್ನು ಕಲಿಯಬೇಕು. ಕುಟುಂಬ ದೊಂದಿಗೆ ಸಂತಸದಿಂದ ಬದುಕುತ್ತಿದ್ದೇನೆ ಎಂದು ಹೇಳಿದರು.<br /> <br /> ಅಧ್ಯಕ್ಷತೆ ವಹಿಸಿದ್ದ ಜಾನಪದ ವಿದ್ವಾಂಸ ಹ.ಕ. ರಾಜೇಗೌಡ ಮಾತನಾಡಿ, ಮಧ್ಯವರ್ತಿಗಳ ಹಾವಳಿ ತಪ್ಪಿಸಬೇಕು. ರೈತರೇ ಖುದ್ದಾಗಿ ಹೊಲದಲ್ಲಿ ಕೆಲಸ ಮಾಡಿದರೆ ಲಾಭ ಗಳಿಸಲು ಸಾಧ್ಯವಾಗುತ್ತದೆ ಎಂದರು.<br /> <br /> ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ. ಜಯಪ್ರಕಾಶಗೌಡ, ಪ್ರಾಸ್ತಾವಿಕವಾಗಿ ಮಾತನಾಡಿದರು.<br /> ಶಾಸಕ ಎಂ.ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯ ಬಿ. ರಾಮಕೃಷ್ಣ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>