<p><strong>ನಾಗಮಂಗಲ:</strong> ತಾಲ್ಲೂಕಿನಾದ್ಯಂತ ಬರ ಪರಿಹಾರ ಕಾಮಗಾರಿ ನಡೆಯುತ್ತಿದೆ. ಆದರೆ, ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದೆ. ಎರಡು ದಿನಕ್ಕೊಮ್ಮೆ ನೀರು ಬಿಡುವ ವ್ಯವಸ್ಥೆ ಜನರ ಆಕ್ರೊಶಕ್ಕೆ ಕಾರಣವಾಗಿದ್ದು, ಈಗ ಸರಬರಾಜಾಗುತ್ತಿರುವ ನೀರು ಕೂಡ ಕಲುಷಿತಗೊಂಡಿದೆ ಎಂಬ ಆರೋಪ ಅಲ್ಲಲ್ಲಿ ಕೇಳಿಬಂದಿದೆ.<br /> <br /> ಪಟ್ಟಣಕ್ಕೆ ಕುಡಿಯುವ ನೀರು ಸೂಳೆಕೆರೆಯಿಂದ ಪೂರೈಕೆಯಾಗುತ್ತದೆ. ಆದರೆ, ಕೆರೆಯಲ್ಲಿ ನೀರು ಕ್ರಮೇಣ ಕಡಿಮೆಯಾಗುತ್ತಿದೆ. ನಿಗದಿತ ಸಮಯಕ್ಕೆ ಮಳೆ ಬಂದಿಲ್ಲ. ಇತ್ತ ಹೇಮಾವತಿ ನಾಲೆಗಳಿಂದಲೂ ಕೆರೆಗೆ ನೀರು ಪೂರೈಕೆಯಾಗುತ್ತಿಲ್ಲ. ನೀರಿಲ್ಲದೇ ಇದ್ದರಿಂದ ಕೆರೆಯಲ್ಲಿದ್ದ ಮೀನುಗಳು ಜೀವ ಕಳೆದುಕೊಳ್ಳುತ್ತಿವೆ. <br /> <br /> ಜನಪ್ರತಿನಿಧಿಗಳಿಗೆ ಅಧಿಕಾರಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಕುರಿತು ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಕೆಲವೇ ದಿನಗಳಲ್ಲಿ ಸೂಳೆಕೆರೆ ಸಂಪೂರ್ಣ ಬರಿದಾಗುವುದ ರಲ್ಲಿ ಯಾವುದೇ ಸಂದೇಹವಿಲ್ಲ. ಇದಕ್ಕೂ ಮುನ್ನ ಕ್ರಮ ತೆಗೆದುಕೊಳ್ಳಬೇಕು ಹಾಗು ಶುದ್ಧವಾದ ಕುಡಿಯುವ ನೀರು ಪೂರೈಕೆಯಾಗಬೇಕು ಎಂಬುದು ಪಟ್ಟಣದ ಜನತೆ ಆಗ್ರಹ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗಮಂಗಲ:</strong> ತಾಲ್ಲೂಕಿನಾದ್ಯಂತ ಬರ ಪರಿಹಾರ ಕಾಮಗಾರಿ ನಡೆಯುತ್ತಿದೆ. ಆದರೆ, ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದೆ. ಎರಡು ದಿನಕ್ಕೊಮ್ಮೆ ನೀರು ಬಿಡುವ ವ್ಯವಸ್ಥೆ ಜನರ ಆಕ್ರೊಶಕ್ಕೆ ಕಾರಣವಾಗಿದ್ದು, ಈಗ ಸರಬರಾಜಾಗುತ್ತಿರುವ ನೀರು ಕೂಡ ಕಲುಷಿತಗೊಂಡಿದೆ ಎಂಬ ಆರೋಪ ಅಲ್ಲಲ್ಲಿ ಕೇಳಿಬಂದಿದೆ.<br /> <br /> ಪಟ್ಟಣಕ್ಕೆ ಕುಡಿಯುವ ನೀರು ಸೂಳೆಕೆರೆಯಿಂದ ಪೂರೈಕೆಯಾಗುತ್ತದೆ. ಆದರೆ, ಕೆರೆಯಲ್ಲಿ ನೀರು ಕ್ರಮೇಣ ಕಡಿಮೆಯಾಗುತ್ತಿದೆ. ನಿಗದಿತ ಸಮಯಕ್ಕೆ ಮಳೆ ಬಂದಿಲ್ಲ. ಇತ್ತ ಹೇಮಾವತಿ ನಾಲೆಗಳಿಂದಲೂ ಕೆರೆಗೆ ನೀರು ಪೂರೈಕೆಯಾಗುತ್ತಿಲ್ಲ. ನೀರಿಲ್ಲದೇ ಇದ್ದರಿಂದ ಕೆರೆಯಲ್ಲಿದ್ದ ಮೀನುಗಳು ಜೀವ ಕಳೆದುಕೊಳ್ಳುತ್ತಿವೆ. <br /> <br /> ಜನಪ್ರತಿನಿಧಿಗಳಿಗೆ ಅಧಿಕಾರಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಕುರಿತು ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಕೆಲವೇ ದಿನಗಳಲ್ಲಿ ಸೂಳೆಕೆರೆ ಸಂಪೂರ್ಣ ಬರಿದಾಗುವುದ ರಲ್ಲಿ ಯಾವುದೇ ಸಂದೇಹವಿಲ್ಲ. ಇದಕ್ಕೂ ಮುನ್ನ ಕ್ರಮ ತೆಗೆದುಕೊಳ್ಳಬೇಕು ಹಾಗು ಶುದ್ಧವಾದ ಕುಡಿಯುವ ನೀರು ಪೂರೈಕೆಯಾಗಬೇಕು ಎಂಬುದು ಪಟ್ಟಣದ ಜನತೆ ಆಗ್ರಹ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>