<p><strong>ನಾಗಮಂಗಲ:</strong> ಸಮರ್ಪಕ ಬಸ್ ಸಂಚಾರಕ್ಕೆ ಆಗ್ರಹಿಸಿ ತಾಲ್ಲೂಕಿನ ದೇವಲಾಪುರ ಹೋಬಳಿಯ ದೊಡ್ಡಜಕ್ಕನಹಳ್ಳಿ ಗ್ರಾಮ ದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು ಕೆಎಸ್ಆರ್ಟಿಸಿ ಬಸ್ ತಡೆದು ಪ್ರತಿಭಟನೆ ನಡೆಸಿದರು.<br /> <br /> ನಾಗಮಂಗಲ ಯಡಿಯೂರು ಮಾರ್ಗದಲ್ಲಿ ಸಂಚರಿಸುವ ಕೆಎಸ್ಆರ್ ಟಿಸಿ ಬಸ್ಸುಗಳನ್ನು ಅವಲಂಬಿಸಿಕೊಂಡಿ ರುವ ದೊಡ್ಡಜಕ್ಕನಹಳ್ಳಿ, ತೊರೆಮಲ್ಲ ನಾಯ್ಕನಹಳ್ಳಿ, ಬಿಸನೆಲೆ, ಕತ್ತರಗುಪ್ಪೆ, ತೊಳಸಿಕೊಂಬರಿ, ಯಡವನಹಳ್ಳಿ, ದೊಡ್ಡಚಿಕ್ಕನಹಳ್ಳಿ, ಮುತ್ಸಂದ್ರ, ಅಂಕನ ಹಳ್ಳಿ, ಶಿಲ್ಪಾಪುರ, ಮೈಲಾರಪಟ್ಟಣ, ದಡಮುಡಿಕೆ ಸೇರಿ ಈ ಭಾಗದ ನೂರಾರು ವಿದ್ಯಾರ್ಥಿಗಳು ನಾಗಮಂಗಲದ ಕಾಲೇಜುಗಳಿಗೆ ತೆರಳಿ ವ್ಯಾಸಂಗ ಪಡೆಯುತ್ತಿದ್ದೇವೆ. ಆದರೆ, ಸಮಯಕ್ಕೆ ಸರಿಯಾಗಿ ಬಸ್ ಸಂಚರಿಸುತ್ತಿಲ್ಲ ಆದ್ದ ರಿಂದ ನಮಗೆ ತೊಂದರೆ ಆಗುತ್ತಿದೆ ಎಂದು ಪ್ರತಿಭಟನಾನಿರತ ವಿದ್ಯಾರ್ಥಿ ಗಳು ಆರೋಪಿಸಿದರು. ಕೆಎಸ್ಆರ್ಟಿಸಿ ಅಧಿಕಾರಿಗಳ ವಿರುದ್ಧ ವಿದ್ಯಾರ್ಥಿಗಳು ಘೋಷಣೆ ಕೂಗಿದರು.<br /> <br /> ಬಸ್ ಪಾಸ್ ಹೊಂದಿರುವ ಈ ಮಾರ್ಗದ 100ಕ್ಕೂ ಹೆಚ್ಚು ವಿದ್ಯಾರ್ಥಿ ಗಳು ಪ್ರತಿನಿತ್ಯ ಒಂದಲ್ಲೊಂದು ರೀತಿಯಲ್ಲಿ ಸಮಸ್ಯೆ ಎದುರಿಸು ವಂತಾಗಿದೆ. ಇದರಿಂದಾಗಿ ನಮ್ಮ ಪಾಠ ಪ್ರವಚನಗಳಿಗೆ ಅಡಚಣೆಯಾಗುತ್ತಿದೆ ಎಂದು ಮಕ್ಕಳು ತಮ್ಮ ಅಳಲು ತೋಡಿ ಕೊಂಡರು. ಸ್ಥಳಕ್ಕೆ ಡಿಪೊ ಅಧಿಕಾರಿಗಳು ಭೇಟಿ ನೀಡಬೇಕೆಂದು ಪಟ್ಟುಹಿಡಿದರು.<br /> <br /> ನಂತರ ಸ್ಥಳಕ್ಕೆ ಭೇಟಿ ನೀಡಿದ ನಾಗಮಂಗಲ ಕೆಎಸ್ಆರ್ಟಿಸಿ ಡಿಪೊ ಅಧಿಕಾರಿಗಳು ಶಾಲಾ ಕಾಲೇಜು ಸಮಯದಲ್ಲಿ ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಬಸ್ ಸಂಚಾರಕ್ಕೆ ಸೂಕ್ತ ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನೆ ಕೈಬಿಟ್ಟರು.<br /> <br /> ಯತೀಶ್ಗೌಡ, ವಿನಯ್, ವೀಣಾ, ಹೇಮಾ, ಚಂದು, ಅರ್ಷಿತಾ, ಮಮತಾ, ಪ್ರೇಮಕುಮಾರ್, ಸಂಜು, ಸಂತೋಷ್, ಮೋಹನ್, ವಿವೇಕ, ಮಂಜು ಪ್ರತಿ ಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗಮಂಗಲ:</strong> ಸಮರ್ಪಕ ಬಸ್ ಸಂಚಾರಕ್ಕೆ ಆಗ್ರಹಿಸಿ ತಾಲ್ಲೂಕಿನ ದೇವಲಾಪುರ ಹೋಬಳಿಯ ದೊಡ್ಡಜಕ್ಕನಹಳ್ಳಿ ಗ್ರಾಮ ದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು ಕೆಎಸ್ಆರ್ಟಿಸಿ ಬಸ್ ತಡೆದು ಪ್ರತಿಭಟನೆ ನಡೆಸಿದರು.<br /> <br /> ನಾಗಮಂಗಲ ಯಡಿಯೂರು ಮಾರ್ಗದಲ್ಲಿ ಸಂಚರಿಸುವ ಕೆಎಸ್ಆರ್ ಟಿಸಿ ಬಸ್ಸುಗಳನ್ನು ಅವಲಂಬಿಸಿಕೊಂಡಿ ರುವ ದೊಡ್ಡಜಕ್ಕನಹಳ್ಳಿ, ತೊರೆಮಲ್ಲ ನಾಯ್ಕನಹಳ್ಳಿ, ಬಿಸನೆಲೆ, ಕತ್ತರಗುಪ್ಪೆ, ತೊಳಸಿಕೊಂಬರಿ, ಯಡವನಹಳ್ಳಿ, ದೊಡ್ಡಚಿಕ್ಕನಹಳ್ಳಿ, ಮುತ್ಸಂದ್ರ, ಅಂಕನ ಹಳ್ಳಿ, ಶಿಲ್ಪಾಪುರ, ಮೈಲಾರಪಟ್ಟಣ, ದಡಮುಡಿಕೆ ಸೇರಿ ಈ ಭಾಗದ ನೂರಾರು ವಿದ್ಯಾರ್ಥಿಗಳು ನಾಗಮಂಗಲದ ಕಾಲೇಜುಗಳಿಗೆ ತೆರಳಿ ವ್ಯಾಸಂಗ ಪಡೆಯುತ್ತಿದ್ದೇವೆ. ಆದರೆ, ಸಮಯಕ್ಕೆ ಸರಿಯಾಗಿ ಬಸ್ ಸಂಚರಿಸುತ್ತಿಲ್ಲ ಆದ್ದ ರಿಂದ ನಮಗೆ ತೊಂದರೆ ಆಗುತ್ತಿದೆ ಎಂದು ಪ್ರತಿಭಟನಾನಿರತ ವಿದ್ಯಾರ್ಥಿ ಗಳು ಆರೋಪಿಸಿದರು. ಕೆಎಸ್ಆರ್ಟಿಸಿ ಅಧಿಕಾರಿಗಳ ವಿರುದ್ಧ ವಿದ್ಯಾರ್ಥಿಗಳು ಘೋಷಣೆ ಕೂಗಿದರು.<br /> <br /> ಬಸ್ ಪಾಸ್ ಹೊಂದಿರುವ ಈ ಮಾರ್ಗದ 100ಕ್ಕೂ ಹೆಚ್ಚು ವಿದ್ಯಾರ್ಥಿ ಗಳು ಪ್ರತಿನಿತ್ಯ ಒಂದಲ್ಲೊಂದು ರೀತಿಯಲ್ಲಿ ಸಮಸ್ಯೆ ಎದುರಿಸು ವಂತಾಗಿದೆ. ಇದರಿಂದಾಗಿ ನಮ್ಮ ಪಾಠ ಪ್ರವಚನಗಳಿಗೆ ಅಡಚಣೆಯಾಗುತ್ತಿದೆ ಎಂದು ಮಕ್ಕಳು ತಮ್ಮ ಅಳಲು ತೋಡಿ ಕೊಂಡರು. ಸ್ಥಳಕ್ಕೆ ಡಿಪೊ ಅಧಿಕಾರಿಗಳು ಭೇಟಿ ನೀಡಬೇಕೆಂದು ಪಟ್ಟುಹಿಡಿದರು.<br /> <br /> ನಂತರ ಸ್ಥಳಕ್ಕೆ ಭೇಟಿ ನೀಡಿದ ನಾಗಮಂಗಲ ಕೆಎಸ್ಆರ್ಟಿಸಿ ಡಿಪೊ ಅಧಿಕಾರಿಗಳು ಶಾಲಾ ಕಾಲೇಜು ಸಮಯದಲ್ಲಿ ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಬಸ್ ಸಂಚಾರಕ್ಕೆ ಸೂಕ್ತ ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನೆ ಕೈಬಿಟ್ಟರು.<br /> <br /> ಯತೀಶ್ಗೌಡ, ವಿನಯ್, ವೀಣಾ, ಹೇಮಾ, ಚಂದು, ಅರ್ಷಿತಾ, ಮಮತಾ, ಪ್ರೇಮಕುಮಾರ್, ಸಂಜು, ಸಂತೋಷ್, ಮೋಹನ್, ವಿವೇಕ, ಮಂಜು ಪ್ರತಿ ಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>