ಲೋಕಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಒತ್ತಡಕ್ಕೆ ಮಣಿದು ಮೈತ್ರಿ ಅಭ್ಯರ್ಥಿ ಕೆ.ನಿಖಿಲ್ ಪರ ಏಕಪಕ್ಷೀಯವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಚುನಾವಣಾ ಆಯೋಗಕ್ಕೆ ಹಲವು ದೂರು ದಾಖಲಾಗಿದ್ದವು. ನಿಖಿಲ್ ನಾಮಪತ್ರ ಪರಿಶೀಲನೆ ಸಂದರ್ಭದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಕಡೆ ಏಜೆಂಟರು ಆಕ್ಷೇಪಣೆ ಸಲ್ಲಿಸಿದ್ದರೂ ಅದನ್ನು ಪರಿಗಣಿಸದೇ ನಾಮಪತ್ರ ಅಂಗೀಕರಿಸಿದ್ದಾರೆ ಎಂದು ಆರೋಪಿಸಲಾಗಿತ್ತು.