ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಡ್ಯ: ಲಂಚ ಪಡೆಯುತ್ತಿದ್ದ ಇಬ್ಬರು ಮಹಿಳಾ ಅಧಿಕಾರಿಗಳು ಎಸಿಬಿ ಬಲೆಗೆ

Last Updated 15 ಏಪ್ರಿಲ್ 2017, 10:12 IST
ಅಕ್ಷರ ಗಾತ್ರ

ಮಂಡ್ಯ: ಮಂಡ್ಯ ನೀರಾವರಿ ಇಲಾಖೆಯ ಇಬ್ಬರು ಮಹಿಳಾ ಅಧಿಕಾರಿಗಳು ಲಂಚ ತೆಗೆದುಕೊಳ್ಳುತ್ತಿದ್ದ ವೇಳೆ ಎಸಿಬಿ ತಂಡಕ್ಕೆ ಸಿಕ್ಕಿದ್ದಾರೆ.

ನೀರಾವರಿ ಇಲಾಖೆ ತಾಂತ್ರಿಕ ವಿಭಾಗದ ಅಧಿಕಾರಿಗಳಾದ ಎಇಇ ಜ್ಯೋತಿ, ಎಇ ಶೋಭಾ ಎಸಿಬಿ ಬಲೆಗೆ ಸಿಕ್ಕವರು.

ರಾಮನಗರದ ಗುತ್ತಿಗೆದಾರ ಕೃಷ್ಣಪ್ಪ ಎಂಬುವವರ ಬಳಿ ₹10 ಸಾವಿರ ಲಂಚ ತೆಗೆದುಕೊಳ್ಳುತ್ತಿದ್ದರು. ರಸ್ತೆ, ಚರಂಡಿ ಕಾಮಗಾರಿ ಪೂರ್ಣಗೊಂಡ ವರದಿಗಾಗಿ ₹12 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಬಂಧಿತ ಇಬ್ಬರು ಅಧಿಕಾರಿಗಳ ವಿಚಾರಣೆ ಕೈಗೊಳ್ಳಲಾಗಿದೆ ಎಸಿಬಿ ಅಧಿಕಾರಿಗಳು ಹೇಳಿದ್ದಾರೆ.

ಎಸಿಬಿ ಡಿವೈಎಸ್ಪಿ ಶೈಲೇಂದ್ರ, ಸಿಪಿಐ ವೆಂಕಟೇಗೌಡ, ಪಿಎಸ್ಐ ಪ್ರಶಾಂತ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT