<p>ಕೃಷ್ಣರಾಜಪೇಟೆ: ಮಲೆ ಮಹದೇಶ್ವರ ಜಯಂತ್ಯುತ್ಸವದ ಅಂಗವಾಗಿ ತಾಲ್ಲೂಕಿಗೆ ಸೆಪ್ಟೆಂಬರ್ 2ರಂದು ಆಗಮಿಸುತ್ತಿರುವ ಮಲೆಮಹದೇಶ್ವರ ಜ್ಯೋತಿ ಹೊತ್ತ ರಥದ ಸ್ವಾಗತಕ್ಕೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆಯು ಶಾಸಕ ಕೆ.ಬಿ.ಚಂದ್ರಶೇಖರ್ ಅಧ್ಯಕ್ಷತೆಯಲ್ಲಿ ಈಚೆಗೆ ತಾಲ್ಲೂಕಿನ ಅಂಬಿಗರಹಳ್ಳಿಯ ಸಂಗಮೇಶ್ವರ ದೇವಾಲಯದ ಆವರಣದಲ್ಲಿ ನಡೆಯಿತು.<br /> <br /> ಮಲೆಮಹದೇಶ್ವರರು ತಾಲ್ಲೂಕಿನ ಅಂಬಿಗರಹಳ್ಳಿ ಸಮೀಪದ ತ್ರಿವೇಣಿ ಸಂಗಮ ಕ್ಷೇತ್ರದಲ್ಲಿ ಉಳಿದಿದ್ದರು ಎಂಬ ಐತಿಹ್ಯಗಳು ಈ ಭಾಗದಲ್ಲಿ ಪ್ರಚಲಿತದಲ್ಲಿವೆ. ಈ ಹಿನ್ನೆಲೆಯಲ್ಲಿ ಮಹದೇಶ್ವರ ಜ್ಯೋತಿ ರಥವು ತಾಲ್ಲೂಕಿನಲ್ಲಿ ಸಂಚರಿಸಲಿದೆ. ತಾಲ್ಲೂಕಿನ ಐಪನಹಳ್ಳಿ ಬಳಿ ಸೆ.2ರಂದು ರಥವನ್ನು ಅದ್ದೂರಿಯಾಗಿ ಸ್ವಾಗತಿಸಬೇಕು.<br /> <br /> ಅಂದು ರಾತ್ರಿ ತ್ರಿವೇಣಿ ನದಿಗಳ ಸಂಗಮ ಕ್ಷೇತ್ರದಲ್ಲಿ ಜ್ಯೋತಿ ಉಳಿಯಲಿದ್ದು, ಇಡೀ ರಾತ್ರಿ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ನಂತರ ಸೆ.3ರಂದು ಪಾಂಡವಪುರ ತಾಲ್ಲೂಕಿಗೆ ತೆರಳುವ ಜ್ಯೋತಿನ್ನು ತಾಲ್ಲೂಕಿನ ಗಡಿಯಲ್ಲಿ ಬೀಳ್ಕೊಡುವುದು ಎಂದು ತೀರ್ಮಾನಿಸಲಾಯಿತು. <br /> <br /> ಬಾಳೆಹೊನ್ನೂರು ರಂಭಾಪುರಿ ಮಠದ ತೆಂಡೆಕೆರೆ ಶಾಖೆಯ ಗಂಗಾಧರ ಶಿವಾಚಾರ್ಯ ಸ್ವಾಮೀಜಿ ಸಭೆಯ ಸಾನ್ನಿಧ್ಯ ವಹಿಸಿದ್ದರು. ಸಂಸದ ಎಚ್.ವಿಶ್ವನಾಥ್, ವಿಧಾನಸಭೆ ಮಾಜಿ ಅಧ್ಯಕ್ಷ ಕೃಷ್ಣ, ಜಯಂತ್ಯುತ್ಸವ ಆಚರಣಾ ಸಮಿತಿ ಅಧ್ಯಕ್ಷ ಡಿ.ಮಾದೇಗೌಡ, ತಹಶೀಲ್ದಾರ್ ಡಾ.ಎಚ್.ಎಲ್.ನಾಗರಾಜ್ ಇತರರು ಇದ್ದರು.<br /> <br /> ಜ್ಯೋತಿ ಸ್ವಾಗತ ಸಮಿತಿ ಅಧ್ಯಕ್ಷರಾಗಿ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಅಂ.ಚಿ.ಸಣ್ಣಸ್ವಾಮಿಗೌಡ, ಕಾರ್ಯಾಧ್ಯಕ್ಷರಾಗಿ ಡಾ.ಎಂ.ಬಿ.ಗೌಡ, ಗೌರವಾಧ್ಯಕ್ಷರಾಗಿ ನಿವೃತ್ತ ಎಂಜಿನಿಯರ್ ನಾಗರಾಜು ಅವರನ್ನು ಸಭೆ ಆಯ್ಕೆ ಮಾಡಲಾಯಿತು. <br /> <br /> <strong>`ನೇಕಾರರು ಸಂಘಟಿತರಾಗಿ~</strong><br /> ಸಾಮಾಜಿಕವಾಗಿ ಹಿಂದುಳಿದಿರುವ ನೇಕಾರರು ತಮ್ಮ ನ್ಯಾಯಯುತ ಹಕ್ಕುಗಳಿಗಾಗಿ ಸಂಘಟಿತ ಪ್ರಯತ್ನ ನಡೆಸಬೇಕು ಎಂದು ವಾಣಿಜ್ಯೋದ್ಯಮಿ ಜಿ.ಸೋಮಶೇಖರ್ ತಿಳಿಸಿದರು.<br /> <br /> ತಾಲ್ಲೂಕಿನ ಹೊಸಹೊಳಲು ಗ್ರಾಮದ ಲಕ್ಷ್ಮೀನಾರಾಯಣ ನೇಯ್ಗೆಯವರ ಸಹಕಾರ ಸಂಘದಲ್ಲಿ ಈಚೆಗೆ ನಡೆದ ಕಾರ್ಯಕ್ರಮದಲ್ಲಿ ವಾಣಿಜ್ಯ ಸಂಕೀರ್ಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಜನಾಂಗದ ಯುವಕರು ಕೀಳರಿಮೆ ಬಿಟ್ಟು, ಸಂಘಟನಾ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.<br /> <br /> ಸಂಘದ ಅಧ್ಯಕ್ಷ ಎಚ್.ಆರ್.ಲೋಕೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಖಾದಿ ಮಂಡಲಿ ಮಾಜಿ ಅಧ್ಯಕ್ಷ ಡಾ.ಶ್ರೀನಿವಾಸಶೆಟ್ಟಿ, ಮುಖಂಡರಾದ ವೆಂಕಟಶೆಟ್ಟಿ, ಎಚ್.ಟಿ.ರಾಜು, ಕುಮಾರಣ್ಣ, ಶಿವರಾಂ ಶೆಟ್ಟಿ, ರಂಗಸ್ವಾಮಿ, ನರೇಂದ್ರಬಾಬು ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೃಷ್ಣರಾಜಪೇಟೆ: ಮಲೆ ಮಹದೇಶ್ವರ ಜಯಂತ್ಯುತ್ಸವದ ಅಂಗವಾಗಿ ತಾಲ್ಲೂಕಿಗೆ ಸೆಪ್ಟೆಂಬರ್ 2ರಂದು ಆಗಮಿಸುತ್ತಿರುವ ಮಲೆಮಹದೇಶ್ವರ ಜ್ಯೋತಿ ಹೊತ್ತ ರಥದ ಸ್ವಾಗತಕ್ಕೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆಯು ಶಾಸಕ ಕೆ.ಬಿ.ಚಂದ್ರಶೇಖರ್ ಅಧ್ಯಕ್ಷತೆಯಲ್ಲಿ ಈಚೆಗೆ ತಾಲ್ಲೂಕಿನ ಅಂಬಿಗರಹಳ್ಳಿಯ ಸಂಗಮೇಶ್ವರ ದೇವಾಲಯದ ಆವರಣದಲ್ಲಿ ನಡೆಯಿತು.<br /> <br /> ಮಲೆಮಹದೇಶ್ವರರು ತಾಲ್ಲೂಕಿನ ಅಂಬಿಗರಹಳ್ಳಿ ಸಮೀಪದ ತ್ರಿವೇಣಿ ಸಂಗಮ ಕ್ಷೇತ್ರದಲ್ಲಿ ಉಳಿದಿದ್ದರು ಎಂಬ ಐತಿಹ್ಯಗಳು ಈ ಭಾಗದಲ್ಲಿ ಪ್ರಚಲಿತದಲ್ಲಿವೆ. ಈ ಹಿನ್ನೆಲೆಯಲ್ಲಿ ಮಹದೇಶ್ವರ ಜ್ಯೋತಿ ರಥವು ತಾಲ್ಲೂಕಿನಲ್ಲಿ ಸಂಚರಿಸಲಿದೆ. ತಾಲ್ಲೂಕಿನ ಐಪನಹಳ್ಳಿ ಬಳಿ ಸೆ.2ರಂದು ರಥವನ್ನು ಅದ್ದೂರಿಯಾಗಿ ಸ್ವಾಗತಿಸಬೇಕು.<br /> <br /> ಅಂದು ರಾತ್ರಿ ತ್ರಿವೇಣಿ ನದಿಗಳ ಸಂಗಮ ಕ್ಷೇತ್ರದಲ್ಲಿ ಜ್ಯೋತಿ ಉಳಿಯಲಿದ್ದು, ಇಡೀ ರಾತ್ರಿ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ನಂತರ ಸೆ.3ರಂದು ಪಾಂಡವಪುರ ತಾಲ್ಲೂಕಿಗೆ ತೆರಳುವ ಜ್ಯೋತಿನ್ನು ತಾಲ್ಲೂಕಿನ ಗಡಿಯಲ್ಲಿ ಬೀಳ್ಕೊಡುವುದು ಎಂದು ತೀರ್ಮಾನಿಸಲಾಯಿತು. <br /> <br /> ಬಾಳೆಹೊನ್ನೂರು ರಂಭಾಪುರಿ ಮಠದ ತೆಂಡೆಕೆರೆ ಶಾಖೆಯ ಗಂಗಾಧರ ಶಿವಾಚಾರ್ಯ ಸ್ವಾಮೀಜಿ ಸಭೆಯ ಸಾನ್ನಿಧ್ಯ ವಹಿಸಿದ್ದರು. ಸಂಸದ ಎಚ್.ವಿಶ್ವನಾಥ್, ವಿಧಾನಸಭೆ ಮಾಜಿ ಅಧ್ಯಕ್ಷ ಕೃಷ್ಣ, ಜಯಂತ್ಯುತ್ಸವ ಆಚರಣಾ ಸಮಿತಿ ಅಧ್ಯಕ್ಷ ಡಿ.ಮಾದೇಗೌಡ, ತಹಶೀಲ್ದಾರ್ ಡಾ.ಎಚ್.ಎಲ್.ನಾಗರಾಜ್ ಇತರರು ಇದ್ದರು.<br /> <br /> ಜ್ಯೋತಿ ಸ್ವಾಗತ ಸಮಿತಿ ಅಧ್ಯಕ್ಷರಾಗಿ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಅಂ.ಚಿ.ಸಣ್ಣಸ್ವಾಮಿಗೌಡ, ಕಾರ್ಯಾಧ್ಯಕ್ಷರಾಗಿ ಡಾ.ಎಂ.ಬಿ.ಗೌಡ, ಗೌರವಾಧ್ಯಕ್ಷರಾಗಿ ನಿವೃತ್ತ ಎಂಜಿನಿಯರ್ ನಾಗರಾಜು ಅವರನ್ನು ಸಭೆ ಆಯ್ಕೆ ಮಾಡಲಾಯಿತು. <br /> <br /> <strong>`ನೇಕಾರರು ಸಂಘಟಿತರಾಗಿ~</strong><br /> ಸಾಮಾಜಿಕವಾಗಿ ಹಿಂದುಳಿದಿರುವ ನೇಕಾರರು ತಮ್ಮ ನ್ಯಾಯಯುತ ಹಕ್ಕುಗಳಿಗಾಗಿ ಸಂಘಟಿತ ಪ್ರಯತ್ನ ನಡೆಸಬೇಕು ಎಂದು ವಾಣಿಜ್ಯೋದ್ಯಮಿ ಜಿ.ಸೋಮಶೇಖರ್ ತಿಳಿಸಿದರು.<br /> <br /> ತಾಲ್ಲೂಕಿನ ಹೊಸಹೊಳಲು ಗ್ರಾಮದ ಲಕ್ಷ್ಮೀನಾರಾಯಣ ನೇಯ್ಗೆಯವರ ಸಹಕಾರ ಸಂಘದಲ್ಲಿ ಈಚೆಗೆ ನಡೆದ ಕಾರ್ಯಕ್ರಮದಲ್ಲಿ ವಾಣಿಜ್ಯ ಸಂಕೀರ್ಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಜನಾಂಗದ ಯುವಕರು ಕೀಳರಿಮೆ ಬಿಟ್ಟು, ಸಂಘಟನಾ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.<br /> <br /> ಸಂಘದ ಅಧ್ಯಕ್ಷ ಎಚ್.ಆರ್.ಲೋಕೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಖಾದಿ ಮಂಡಲಿ ಮಾಜಿ ಅಧ್ಯಕ್ಷ ಡಾ.ಶ್ರೀನಿವಾಸಶೆಟ್ಟಿ, ಮುಖಂಡರಾದ ವೆಂಕಟಶೆಟ್ಟಿ, ಎಚ್.ಟಿ.ರಾಜು, ಕುಮಾರಣ್ಣ, ಶಿವರಾಂ ಶೆಟ್ಟಿ, ರಂಗಸ್ವಾಮಿ, ನರೇಂದ್ರಬಾಬು ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>