<p>ಮಂಡ್ಯ: ಅರಣ್ಯ ಇಲಾಖೆಯು ದಿನಗೂಲಿ ನೌಕರರ ಬಗೆಗೆ ತಾರತಮ್ಯ ನೀತಿಯನ್ನು ಹೊಂದಿದ್ದು ಎಂದು ಆರೋಪಿಸಿರುವ ದಿನಗೂಲಿ ನೌಕರರು, ಬೇಡಿಕೆಗಳ ಈಡೇರಿಕೆಗೆ ಆಗ್ರಹಪಡಿಸಿ ಸೋಮವಾರ ಮಂಡ್ಯದಲ್ಲಿ ಇಲಾಖೆಯ ಕಚೇರಿಯ ಎದುರು ಧರಣಿ ಪ್ರತಿಭಟನೆಯನ್ನು ನಡೆಸಿದರು.<br /> <br /> 1-7-1984ಕ್ಕೂ ಮುನ್ನ ದಿನಗೂಲಿ ನೌಕರರಾಗಿ ಸೇರಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಯ ಮಾಹಿತಿ ಕಳುಹಿಸುವಂತೆ ಸರ್ಕಾರ ಕೋರಿದ್ದರೂ, ಜಿಲ್ಲಾವಾರು ಇಂಥ ಮಾಹಿತಿ ಕಳುಹಿಸುವಲ್ಲಿ ವಿಳಂಬ ಮಾಡಲಾಗುತ್ತಿದೆ ಎಂದು ನೌಕರರು ದೂರಿದ್ದಾರೆ.<br /> <br /> ಇದೂ ಸೇರಿ ಒಟ್ಟು ನಾಲ್ಕು ಪ್ರಮುಖ ಬೇಡಿಕೆಗಳನ್ನು ಉಲ್ಲೇಖಿಸಿರುವ ನೌಕರರು, ಈ ಬಗೆಗೆ ಹಲವು ಮನವಿ ಸಲ್ಲಿಸಿದ್ದರೂ ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲ. ಹೀಗಾಗಿ, ಈಗ ಬೇಡಿಕೆ ಈಡೇರುವ ತನಕ ಪ್ರತಿಭಟಿಸಲಾಗುವುದು ಎಂದು ಮನವಿಯಲ್ಲಿ ಎಚ್ಚರಿಸಿದರು.<br /> <br /> ಈ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಮೂಲಕ ಸರ್ಕಾರಕ್ಕೆ ಸಲ್ಲಿಸಿದ ಮನವಿಯಲ್ಲಿ ನೌಕರರು, ಪುನರಾವರ್ತಿತ ಪ್ರತಿಭಟನೆಯ ನಂತರವೂ ಕ್ರಮ ಜರುಗಿಸುತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.<br /> <br /> ಮಂಡ್ಯ ವಿಭಾಗದಲ್ಲಿಯೇ ಕಳೆದ ಮೂರು ವರ್ಷಗಳಿಂದ ಪಿಸಿಪಿ ನೌಕರರಿಗೆ ವಿವಿಧ ವಲಯಗಳಲ್ಲಿ ಕಡಿಮೆ ಮಂಜೂರಿ ಮಾಡಲಾಗಿದೆ. ಈ ವ್ಯತ್ಯಾಸದ ಮಜೂರಿಯನ್ನು ಆದಷ್ಟು ಶೀಘ್ರ ಪಾವತಿಸಬೇಕು ಎಂದು ಒತ್ತಾಯಿಸಲಾಗಿದೆ.<br /> <br /> ಸಂಘದ ಮುಖಂಡರಾದ ಎ.ಎಂ.ನಾಗರಾಜು, ಉಪಾಧ್ಯಕ್ಷ ನಾಗರಾಜನಾಯ್ಕ, ಗಂಗಾಧರಯ್ಯ, ಕೃಷ್ಣ ಮತ್ತಿತರರು ಪ್ರತಿಭಟನೆಯಲ್ಲಿ ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಡ್ಯ: ಅರಣ್ಯ ಇಲಾಖೆಯು ದಿನಗೂಲಿ ನೌಕರರ ಬಗೆಗೆ ತಾರತಮ್ಯ ನೀತಿಯನ್ನು ಹೊಂದಿದ್ದು ಎಂದು ಆರೋಪಿಸಿರುವ ದಿನಗೂಲಿ ನೌಕರರು, ಬೇಡಿಕೆಗಳ ಈಡೇರಿಕೆಗೆ ಆಗ್ರಹಪಡಿಸಿ ಸೋಮವಾರ ಮಂಡ್ಯದಲ್ಲಿ ಇಲಾಖೆಯ ಕಚೇರಿಯ ಎದುರು ಧರಣಿ ಪ್ರತಿಭಟನೆಯನ್ನು ನಡೆಸಿದರು.<br /> <br /> 1-7-1984ಕ್ಕೂ ಮುನ್ನ ದಿನಗೂಲಿ ನೌಕರರಾಗಿ ಸೇರಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಯ ಮಾಹಿತಿ ಕಳುಹಿಸುವಂತೆ ಸರ್ಕಾರ ಕೋರಿದ್ದರೂ, ಜಿಲ್ಲಾವಾರು ಇಂಥ ಮಾಹಿತಿ ಕಳುಹಿಸುವಲ್ಲಿ ವಿಳಂಬ ಮಾಡಲಾಗುತ್ತಿದೆ ಎಂದು ನೌಕರರು ದೂರಿದ್ದಾರೆ.<br /> <br /> ಇದೂ ಸೇರಿ ಒಟ್ಟು ನಾಲ್ಕು ಪ್ರಮುಖ ಬೇಡಿಕೆಗಳನ್ನು ಉಲ್ಲೇಖಿಸಿರುವ ನೌಕರರು, ಈ ಬಗೆಗೆ ಹಲವು ಮನವಿ ಸಲ್ಲಿಸಿದ್ದರೂ ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲ. ಹೀಗಾಗಿ, ಈಗ ಬೇಡಿಕೆ ಈಡೇರುವ ತನಕ ಪ್ರತಿಭಟಿಸಲಾಗುವುದು ಎಂದು ಮನವಿಯಲ್ಲಿ ಎಚ್ಚರಿಸಿದರು.<br /> <br /> ಈ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಮೂಲಕ ಸರ್ಕಾರಕ್ಕೆ ಸಲ್ಲಿಸಿದ ಮನವಿಯಲ್ಲಿ ನೌಕರರು, ಪುನರಾವರ್ತಿತ ಪ್ರತಿಭಟನೆಯ ನಂತರವೂ ಕ್ರಮ ಜರುಗಿಸುತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.<br /> <br /> ಮಂಡ್ಯ ವಿಭಾಗದಲ್ಲಿಯೇ ಕಳೆದ ಮೂರು ವರ್ಷಗಳಿಂದ ಪಿಸಿಪಿ ನೌಕರರಿಗೆ ವಿವಿಧ ವಲಯಗಳಲ್ಲಿ ಕಡಿಮೆ ಮಂಜೂರಿ ಮಾಡಲಾಗಿದೆ. ಈ ವ್ಯತ್ಯಾಸದ ಮಜೂರಿಯನ್ನು ಆದಷ್ಟು ಶೀಘ್ರ ಪಾವತಿಸಬೇಕು ಎಂದು ಒತ್ತಾಯಿಸಲಾಗಿದೆ.<br /> <br /> ಸಂಘದ ಮುಖಂಡರಾದ ಎ.ಎಂ.ನಾಗರಾಜು, ಉಪಾಧ್ಯಕ್ಷ ನಾಗರಾಜನಾಯ್ಕ, ಗಂಗಾಧರಯ್ಯ, ಕೃಷ್ಣ ಮತ್ತಿತರರು ಪ್ರತಿಭಟನೆಯಲ್ಲಿ ಇದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>