<p><strong>ಮದ್ದೂರು: </strong>ರಾಷ್ಟ್ರದೆಲ್ಲೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮದ ಕಾಣುತ್ತಿದೆ. ಆದರೆ, ಇಂದಿಗೂ ರಸ್ತೆಯಂಚಿನ ಗುಡಿಸಲಲ್ಲಿ ಜೀವ ಭಯದೊಂದಿಗೆ ಬದುಕು ಸಾಗಿಸುತ್ತಿರುವ ನಿವಾಸಿಗಳು ಮಾತ್ರ ಸ್ವಂತ ಸೂರಿನ ಕನಸು ಯಾವಾಗ ನನಸಾಗುತ್ತದೆ ಎಂದು ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.</p>.<p>ಮದ್ದೂರು ಸಮೀಪದ ವೈದ್ಯನಾಥಪುರ ಸಂಪರ್ಕಿಸುವ ರಸ್ತೆಯ ಎಡಬದಿಯಲ್ಲಿ ಸ್ವಾತಂತ್ರ್ಯ ಪೂರ್ವದಿಂದಲೂ ಗುಡಿಸಲು ಕಟ್ಟಿಕೊಂಡು ವಾಸವಾಗಿರುವ 10 ಬಡ ಕುಟುಂಬಗಳ ಸ್ವಂತ ಸೂರು ಹೊಂದುವ ಕನಸು ದೇಶಕ್ಕೆ ಸ್ವಾತಂತ್ರ್ಯ ಲಭಿಸಿ ಏಳು ದಶಕಗಳು ಕಳೆಯುತ್ತ ಬಂದರೂ ನನಸಾಗಿಲ್ಲ.</p>.<p>ಪ್ರಸಿದ್ಧ ಪ್ರವಾಸಿ ಕ್ಷೇತ್ರ ವೈದ್ಯನಾಥಪುರಕ್ಕೆ ನೂರಾರು ಪ್ರವಾಸಿಗರು ಬಂದು ಹೋಗುತ್ತಾರೆ. ಪ್ರತಿನಿತ್ಯ ನೂರಾರು ವಾಹನಗಳು ಈ ರಸ್ತೆಯ ಮೂಲಕವೇ ಸಾಗುತ್ತವೆ. ಆರು ತಿಂಗಳ ಹಿಂದೆ ಬ್ರೇಕ್ ವೈಫಲ್ಯಗೊಂಡ ಕಾರೊಂದು ಇಲ್ಲಿನ ಗುಡಿಸಲೊಂದಕ್ಕೆ ನುಗ್ಗಿತು. ಆ ಗುಡಿಸಲಿನ ನಿವಾಸಿಗಳು ಕೂಲಿಗೆ ಹೋಗಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ. ಅಂದಿನಿಂದ ಇಂದಿನವರೆಗೆ ಗುಡಿಸಲ ನಿವಾಸಿಗಳು ಜೀವ ಭಯದಲ್ಲಿಯೇ ದಿನ ದೂಡುತ್ತಿದ್ದಾರೆ.</p>.<p>ನಗರಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿರುವ ವೈದ್ಯನಾಥಪುರ ಗಡಿಯ ಈ ಗುಡಿಸಲುವಾಸಿಗಳ ಹೆಸರು ಮತದಾರರ ಪಟ್ಟಿಯಲ್ಲಿದೆ. ಅವರಿಗೆ ಮತದಾರರ ಗುರುತಿನ ಚೀಟಿಯೂ ಇದೆ. ಬಿಪಿಎಲ್ ಪಡಿತರ ಚೀಟಿಯೂ ಇದೆ. ಎಲ್ಲ ನಿವಾಸಿಗಳೂ ಆಧಾರ್ ಗುರುತಿನ ಚೀಟಿಯನ್ನು ಮಾಡಿಸಿದ್ದಾರೆ. ಆದರೆ ಅವರಿಗೆ ನಿವೇಶನಗಳ ಹಕ್ಕುಪತ್ರ ಇಂದಿಗೂ ಸಿಕ್ಕಿಲ್ಲ.</p>.<p>ರಸ್ತೆ ಬದಿಯಲ್ಲಿ ಇವರ ನಿವೇಶನಗಳಿರುವುದರಿಂದ ಅವರಿಗೆ ಹಕ್ಕು ಪತ್ರ ನೀಡಲು ಬರುವುದಿಲ್ಲ ಎಂಬುದು ಅಧಿಕಾರಿಗಳ ವಾದ. ಇನ್ನೊಂದೆಡೆ ಸುರಕ್ಷಿತವಾಗಿರುವ ಸ್ಥಳದಲ್ಲಿ ನಿವೇಶನ ನೀಡಿ, ಸ್ವಂತ ಸೂರು ಹೊಂದುವ ಕನಸನ್ನು ನನಸಾಗಿಸುವ ಇಚ್ಛಾಶಕ್ತಿ ಇಲ್ಲಿನ ಸ್ಥಳೀಯ ಜನಪ್ರತಿನಿಧಿಗಳಲ್ಲಿ ಇಲ್ಲ ಎಂಬುದು ನಿವಾಸಿಗಳ ಅಳಲು.</p>.<p>ಗುಡಿಸಲುಗಳಿಗೆ ವಿದ್ಯುತ್ ಸಂಪರ್ಕವೂ ಇಲ್ಲ. ರಾತ್ರಿಯಾದರೆ ವಿಷಜಂತುಗಳ ಹಾವಳಿ. ಸೀಮೆಎಣ್ಣೆ ಬುಡ್ಡಿ ಬೆಳಕಿನಲ್ಲಿಯೇ ಇಲ್ಲಿನ ಜನ ರಾತ್ರಿ ಕಳೆಯಬೇಕು. ಮಳೆ ಬಂದಾಗ ಅವರ ಪಾಡು ಅಷ್ಟಿಷ್ಟಲ್ಲ. ಏರು ರಸ್ತೆಯಿಂದ ಇವರ ಗುಡಿಸಲುಗಳಿಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗುತ್ತದೆ.</p>.<p>‘ಮಳೆ ಬಂದರೆ ರಾತ್ರಿ ಇಡೀ ಗುಡಿಸಲಿಗೆ ನುಗ್ಗಿದ ನೀರನ್ನು ಹೊರ ಹಾಕುವುದೇ ಕೆಲಸ’ ಎನ್ನುತ್ತಾರೆ ಇಲ್ಲಿನ ನಿವಾಸಿ ಕೃಷ್ಣ. ಗುಡಿಸಲು ಬಳಿಯೇ ಒಂದು ಕೊಳವೆಬಾವಿ, ಕೈಪಂಪಿದೆ. ಅಲ್ಲಿಂದ ನೀರು ತಂದು ಸ್ನಾನ, ಶೌಚಕ್ಕೆ ಬಳಸಬೇಕಿದೆ. ಈ ಗುಡಿಸಲಿನಲ್ಲಿ ವಾಸವಾಗಿರುವ ಒಂದಷ್ಟು ಮಕ್ಕಳು ಸಮೀಪದ ವೈದ್ಯನಾಥಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಓದಲು ಹೋಗುತ್ತಾರೆ. ಐದನೇ ತರಗತಿಯವರೆಗೆ ಮಾತ್ರ ಓದು. ಬಳಿಕ ಕೂಲಿ ಕೆಲಸವೇ.</p>.<p>‘ನಮ್ಮ ತಂದೆ ಅಣ್ಣಾಮಲೈ 50ವರ್ಷಗಳ ಹಿಂದೆ ತಮಿಳುನಾಡಿನ ಗ್ರಾಮವೊಂದರಿಂದ ಇಲ್ಲಿಗೆ ಕೂಲಿ ಅರಸಿ ಬಂದಿದ್ದರು. ಬಳಿಕ ಇಲ್ಲಿಯೇ ಗುಡಿಸಲು ಕಟ್ಟಿ ನೆಲೆಯಾದರು. ಅವರ ಜತೆ ಹತ್ತಾರು ಬಡ ಕುಟುಂಬಗಳು ಕೂಲಿಯರಸಿ ತಮಿಳುನಾಡಿನಿಂದ ಇಲ್ಲಿಗೆ ಬಂದು ನೆಲೆಯಾದವು. ಅಂದಿನಿಂದ ಇಲ್ಲಿಯವರೆಗೆ ಇಲ್ಲಿಯೇ ಇದ್ದೇವೆ.</p>.<p>ಚುನಾವಣೆಗಳಲ್ಲಿ ಓಟು ಹಾಕುತ್ತಿದ್ದೇವೆ. ಎಲ್ಲ ರಾಜಕಾರಣಿಗಳು, ಸ್ಥಳೀಯ ಜನಪ್ರತಿನಿಧಿಗಳು ಇಲ್ಲಿಗೆ ಹಲವು ಬಾರಿ ಬಂದು ಹೋಗಿದ್ದಾರೆ. ಆದರೆ ಇದುವರೆಗೂ ನಮಗೆ ಈ ಜಾಗದ ಹಕ್ಕು ಪತ್ರವನ್ನಾಗಲಿ, ಬೇರೆ ಕಡೆ ಮನೆಯನ್ನಾಗಲಿ ಕಟ್ಟಿಕೊಟ್ಟಿಲ್ಲ’ ಎನ್ನುತ್ತಾರೆ ಇಲ್ಲಿನ ನಿವಾಸಿ ರಾಮು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು: </strong>ರಾಷ್ಟ್ರದೆಲ್ಲೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮದ ಕಾಣುತ್ತಿದೆ. ಆದರೆ, ಇಂದಿಗೂ ರಸ್ತೆಯಂಚಿನ ಗುಡಿಸಲಲ್ಲಿ ಜೀವ ಭಯದೊಂದಿಗೆ ಬದುಕು ಸಾಗಿಸುತ್ತಿರುವ ನಿವಾಸಿಗಳು ಮಾತ್ರ ಸ್ವಂತ ಸೂರಿನ ಕನಸು ಯಾವಾಗ ನನಸಾಗುತ್ತದೆ ಎಂದು ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.</p>.<p>ಮದ್ದೂರು ಸಮೀಪದ ವೈದ್ಯನಾಥಪುರ ಸಂಪರ್ಕಿಸುವ ರಸ್ತೆಯ ಎಡಬದಿಯಲ್ಲಿ ಸ್ವಾತಂತ್ರ್ಯ ಪೂರ್ವದಿಂದಲೂ ಗುಡಿಸಲು ಕಟ್ಟಿಕೊಂಡು ವಾಸವಾಗಿರುವ 10 ಬಡ ಕುಟುಂಬಗಳ ಸ್ವಂತ ಸೂರು ಹೊಂದುವ ಕನಸು ದೇಶಕ್ಕೆ ಸ್ವಾತಂತ್ರ್ಯ ಲಭಿಸಿ ಏಳು ದಶಕಗಳು ಕಳೆಯುತ್ತ ಬಂದರೂ ನನಸಾಗಿಲ್ಲ.</p>.<p>ಪ್ರಸಿದ್ಧ ಪ್ರವಾಸಿ ಕ್ಷೇತ್ರ ವೈದ್ಯನಾಥಪುರಕ್ಕೆ ನೂರಾರು ಪ್ರವಾಸಿಗರು ಬಂದು ಹೋಗುತ್ತಾರೆ. ಪ್ರತಿನಿತ್ಯ ನೂರಾರು ವಾಹನಗಳು ಈ ರಸ್ತೆಯ ಮೂಲಕವೇ ಸಾಗುತ್ತವೆ. ಆರು ತಿಂಗಳ ಹಿಂದೆ ಬ್ರೇಕ್ ವೈಫಲ್ಯಗೊಂಡ ಕಾರೊಂದು ಇಲ್ಲಿನ ಗುಡಿಸಲೊಂದಕ್ಕೆ ನುಗ್ಗಿತು. ಆ ಗುಡಿಸಲಿನ ನಿವಾಸಿಗಳು ಕೂಲಿಗೆ ಹೋಗಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ. ಅಂದಿನಿಂದ ಇಂದಿನವರೆಗೆ ಗುಡಿಸಲ ನಿವಾಸಿಗಳು ಜೀವ ಭಯದಲ್ಲಿಯೇ ದಿನ ದೂಡುತ್ತಿದ್ದಾರೆ.</p>.<p>ನಗರಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿರುವ ವೈದ್ಯನಾಥಪುರ ಗಡಿಯ ಈ ಗುಡಿಸಲುವಾಸಿಗಳ ಹೆಸರು ಮತದಾರರ ಪಟ್ಟಿಯಲ್ಲಿದೆ. ಅವರಿಗೆ ಮತದಾರರ ಗುರುತಿನ ಚೀಟಿಯೂ ಇದೆ. ಬಿಪಿಎಲ್ ಪಡಿತರ ಚೀಟಿಯೂ ಇದೆ. ಎಲ್ಲ ನಿವಾಸಿಗಳೂ ಆಧಾರ್ ಗುರುತಿನ ಚೀಟಿಯನ್ನು ಮಾಡಿಸಿದ್ದಾರೆ. ಆದರೆ ಅವರಿಗೆ ನಿವೇಶನಗಳ ಹಕ್ಕುಪತ್ರ ಇಂದಿಗೂ ಸಿಕ್ಕಿಲ್ಲ.</p>.<p>ರಸ್ತೆ ಬದಿಯಲ್ಲಿ ಇವರ ನಿವೇಶನಗಳಿರುವುದರಿಂದ ಅವರಿಗೆ ಹಕ್ಕು ಪತ್ರ ನೀಡಲು ಬರುವುದಿಲ್ಲ ಎಂಬುದು ಅಧಿಕಾರಿಗಳ ವಾದ. ಇನ್ನೊಂದೆಡೆ ಸುರಕ್ಷಿತವಾಗಿರುವ ಸ್ಥಳದಲ್ಲಿ ನಿವೇಶನ ನೀಡಿ, ಸ್ವಂತ ಸೂರು ಹೊಂದುವ ಕನಸನ್ನು ನನಸಾಗಿಸುವ ಇಚ್ಛಾಶಕ್ತಿ ಇಲ್ಲಿನ ಸ್ಥಳೀಯ ಜನಪ್ರತಿನಿಧಿಗಳಲ್ಲಿ ಇಲ್ಲ ಎಂಬುದು ನಿವಾಸಿಗಳ ಅಳಲು.</p>.<p>ಗುಡಿಸಲುಗಳಿಗೆ ವಿದ್ಯುತ್ ಸಂಪರ್ಕವೂ ಇಲ್ಲ. ರಾತ್ರಿಯಾದರೆ ವಿಷಜಂತುಗಳ ಹಾವಳಿ. ಸೀಮೆಎಣ್ಣೆ ಬುಡ್ಡಿ ಬೆಳಕಿನಲ್ಲಿಯೇ ಇಲ್ಲಿನ ಜನ ರಾತ್ರಿ ಕಳೆಯಬೇಕು. ಮಳೆ ಬಂದಾಗ ಅವರ ಪಾಡು ಅಷ್ಟಿಷ್ಟಲ್ಲ. ಏರು ರಸ್ತೆಯಿಂದ ಇವರ ಗುಡಿಸಲುಗಳಿಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗುತ್ತದೆ.</p>.<p>‘ಮಳೆ ಬಂದರೆ ರಾತ್ರಿ ಇಡೀ ಗುಡಿಸಲಿಗೆ ನುಗ್ಗಿದ ನೀರನ್ನು ಹೊರ ಹಾಕುವುದೇ ಕೆಲಸ’ ಎನ್ನುತ್ತಾರೆ ಇಲ್ಲಿನ ನಿವಾಸಿ ಕೃಷ್ಣ. ಗುಡಿಸಲು ಬಳಿಯೇ ಒಂದು ಕೊಳವೆಬಾವಿ, ಕೈಪಂಪಿದೆ. ಅಲ್ಲಿಂದ ನೀರು ತಂದು ಸ್ನಾನ, ಶೌಚಕ್ಕೆ ಬಳಸಬೇಕಿದೆ. ಈ ಗುಡಿಸಲಿನಲ್ಲಿ ವಾಸವಾಗಿರುವ ಒಂದಷ್ಟು ಮಕ್ಕಳು ಸಮೀಪದ ವೈದ್ಯನಾಥಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಓದಲು ಹೋಗುತ್ತಾರೆ. ಐದನೇ ತರಗತಿಯವರೆಗೆ ಮಾತ್ರ ಓದು. ಬಳಿಕ ಕೂಲಿ ಕೆಲಸವೇ.</p>.<p>‘ನಮ್ಮ ತಂದೆ ಅಣ್ಣಾಮಲೈ 50ವರ್ಷಗಳ ಹಿಂದೆ ತಮಿಳುನಾಡಿನ ಗ್ರಾಮವೊಂದರಿಂದ ಇಲ್ಲಿಗೆ ಕೂಲಿ ಅರಸಿ ಬಂದಿದ್ದರು. ಬಳಿಕ ಇಲ್ಲಿಯೇ ಗುಡಿಸಲು ಕಟ್ಟಿ ನೆಲೆಯಾದರು. ಅವರ ಜತೆ ಹತ್ತಾರು ಬಡ ಕುಟುಂಬಗಳು ಕೂಲಿಯರಸಿ ತಮಿಳುನಾಡಿನಿಂದ ಇಲ್ಲಿಗೆ ಬಂದು ನೆಲೆಯಾದವು. ಅಂದಿನಿಂದ ಇಲ್ಲಿಯವರೆಗೆ ಇಲ್ಲಿಯೇ ಇದ್ದೇವೆ.</p>.<p>ಚುನಾವಣೆಗಳಲ್ಲಿ ಓಟು ಹಾಕುತ್ತಿದ್ದೇವೆ. ಎಲ್ಲ ರಾಜಕಾರಣಿಗಳು, ಸ್ಥಳೀಯ ಜನಪ್ರತಿನಿಧಿಗಳು ಇಲ್ಲಿಗೆ ಹಲವು ಬಾರಿ ಬಂದು ಹೋಗಿದ್ದಾರೆ. ಆದರೆ ಇದುವರೆಗೂ ನಮಗೆ ಈ ಜಾಗದ ಹಕ್ಕು ಪತ್ರವನ್ನಾಗಲಿ, ಬೇರೆ ಕಡೆ ಮನೆಯನ್ನಾಗಲಿ ಕಟ್ಟಿಕೊಟ್ಟಿಲ್ಲ’ ಎನ್ನುತ್ತಾರೆ ಇಲ್ಲಿನ ನಿವಾಸಿ ರಾಮು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>