ಶ್ರೀರಂಗಪಟ್ಟಣ: ಕಾರಿನಲ್ಲಿ ಕುಳಿತಿದ್ದಾಗ ಕತ್ತಿನಲ್ಲಿದ್ದ 60 ಗ್ರಾಂ ತೂಕದ ಚಿನ್ನದ ಸರವನ್ನು ಕಿತ್ತು ಓಡಿದ ಕಿಡಿಗೇಡಿಯನ್ನು ಮಹಿಳೆಯೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಸಮೀಪದ ಗಂಜಾಂ ನಿಮಿಷಾಂಬಾ ದೇವಾಲಯಕ್ಕೆ ಶನಿವಾರ ಕುಟುಂಬ ಸದಸ್ಯರ ಜತೆ ಬಂದಿದ್ದ ಬೆಂಗಳೂರು ಮಹಾಲಕ್ಷ್ಮಿಪುರಂನ ಸುರೇಶ್ಕುಮಾರ್ ಅವರ ಪತ್ನಿ ನವ್ಯಾ (23) ಈ ಸಾಹಸ ಮಾಡಿದವರು.