<p>ನಾಗಮಂಗಲ: ರೈತರು ಕೃಷಿಯ ಜತೆಗೆ ಹೈನುಗಾರಿಕೆಯಲ್ಲಿ ತೊಡಗುವುದರಿಂದ ಆರ್ಥಿಕವಾಗಿ ಅಭಿವೃದ್ಧಿಯಾಗಬಹುದು ಎಂದು ಶಾಸಕ ಎನ್. ಚಲುವರಾಯಸ್ವಾಮಿ ಅಭಿಪ್ರಾಯ ಪಟ್ಟರು.<br /> <br /> ಈಚೆಗೆ ತಾಲ್ಲೂಕಿನ ಹೊಣಕೆರೆ ಹೋಬಳಿಯ ಗೊಟಕಹಳ್ಳಿಯಲ್ಲಿ ನೂತನ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.<br /> <br /> ಮನ್ಮುಲ್ ನಿರ್ದೇಶಕ ತಟ್ಟಹಳ್ಳಿ ನರಸಿಂಹಮೂರ್ತಿ ಮಾತನಾಡಿ, ರೈತರು ಒಕ್ಕೂಟಕ್ಕೆ ಗುಣಮಟ್ಟದ ಹಾಲನ್ನು ನೀಡಿದರೆ ಉತ್ತಮ ಬೆಲೆ ದೊರೆಯುತ್ತದೆ. ಜತೆಗೆ ಒಕ್ಕೂಟವು ಸುಗಮವಾಗಿ ನಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.<br /> <br /> ಚಿಣ್ಯ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಯರಾಮು, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಕೆ.ಪಿ. ಶಿವನಂಜೇಗೌಡ, ಟಿಎಪಿಸಿಎಂಎಸ್ ಮಾಜಿ ನಿರ್ದೇಶಕ ಹೊಸೂರು ಕೃಷ್ಣೇಗೌಡ, ಮುಖಂಡರಾದ ಬಲರಾಮ, ಕೃಷ್ಣೇಗೌಡ, ರಾಮಚಂದ್ರ ಇದ್ದರು.<br /> <br /> <strong>ಕೆರೆಗೆ ನೀರು ತುಂಬಿಸಲು ಒತ್ತಾಯ: ಪ್ರತಿಭಟನೆ</strong><br /> ಕೃಷ್ಣರಾಜಪೇಟೆ: ಗ್ರಾಮಗಳ ಕೆರೆಕಟ್ಟೆ ಗಳಿಗೆ ಹೇಮಾವತಿ ನಾಲೆಯಿಂದ ನೀರು ತುಂಬಿಸುವಂತೆ ಒತ್ತಾಯಿಸಿ ಹೆಗ್ಗಡಹಳ್ಳಿ, ಕರೋಟಿ, ಕುಂದನಹಳ್ಳಿ ಗ್ರಾಮಸ್ಥರು ಪಟ್ಟಣದ ಹೇಮಾವತಿ ಜಲಾಶಯ ಯೋಜನೆಯ ಕಚೇರಿಗೆ ಸೋಮವಾರ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.<br /> <br /> ಶಾಸಕರ ಭೇಟಿ: ಪ್ರತಿಭಟನೆ ವಿಷಯ ತಿಳಿದು ಸ್ಥಳಕ್ಕೆ ಬಂದ ಶಾಸಕ ಕೆ.ಸಿ. ನಾರಾಯಣಗೌಡ ಜನರ ಸಮಸ್ಯೆ ಆಲಿಸಿದರು. ತಕ್ಷಣ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುವಂತೆ ಅಧಿಕಾರಿ ಗಳಿಗೆ ಸೂಚಿಸಿದರು. ಒಂದೆರಡು ದಿನಗಳಲ್ಲಿ ಕೆರೆಗಳಿಗೆ ನೀರು ತುಂಬಿಸುವ ಭರವಸೆ ದೊರಕಿದ ನಂತರ ಪ್ರತಿಭಟನೆ ಹಿಂದಕ್ಕೆ ಪಡೆಯಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಾಗಮಂಗಲ: ರೈತರು ಕೃಷಿಯ ಜತೆಗೆ ಹೈನುಗಾರಿಕೆಯಲ್ಲಿ ತೊಡಗುವುದರಿಂದ ಆರ್ಥಿಕವಾಗಿ ಅಭಿವೃದ್ಧಿಯಾಗಬಹುದು ಎಂದು ಶಾಸಕ ಎನ್. ಚಲುವರಾಯಸ್ವಾಮಿ ಅಭಿಪ್ರಾಯ ಪಟ್ಟರು.<br /> <br /> ಈಚೆಗೆ ತಾಲ್ಲೂಕಿನ ಹೊಣಕೆರೆ ಹೋಬಳಿಯ ಗೊಟಕಹಳ್ಳಿಯಲ್ಲಿ ನೂತನ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.<br /> <br /> ಮನ್ಮುಲ್ ನಿರ್ದೇಶಕ ತಟ್ಟಹಳ್ಳಿ ನರಸಿಂಹಮೂರ್ತಿ ಮಾತನಾಡಿ, ರೈತರು ಒಕ್ಕೂಟಕ್ಕೆ ಗುಣಮಟ್ಟದ ಹಾಲನ್ನು ನೀಡಿದರೆ ಉತ್ತಮ ಬೆಲೆ ದೊರೆಯುತ್ತದೆ. ಜತೆಗೆ ಒಕ್ಕೂಟವು ಸುಗಮವಾಗಿ ನಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.<br /> <br /> ಚಿಣ್ಯ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಯರಾಮು, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಕೆ.ಪಿ. ಶಿವನಂಜೇಗೌಡ, ಟಿಎಪಿಸಿಎಂಎಸ್ ಮಾಜಿ ನಿರ್ದೇಶಕ ಹೊಸೂರು ಕೃಷ್ಣೇಗೌಡ, ಮುಖಂಡರಾದ ಬಲರಾಮ, ಕೃಷ್ಣೇಗೌಡ, ರಾಮಚಂದ್ರ ಇದ್ದರು.<br /> <br /> <strong>ಕೆರೆಗೆ ನೀರು ತುಂಬಿಸಲು ಒತ್ತಾಯ: ಪ್ರತಿಭಟನೆ</strong><br /> ಕೃಷ್ಣರಾಜಪೇಟೆ: ಗ್ರಾಮಗಳ ಕೆರೆಕಟ್ಟೆ ಗಳಿಗೆ ಹೇಮಾವತಿ ನಾಲೆಯಿಂದ ನೀರು ತುಂಬಿಸುವಂತೆ ಒತ್ತಾಯಿಸಿ ಹೆಗ್ಗಡಹಳ್ಳಿ, ಕರೋಟಿ, ಕುಂದನಹಳ್ಳಿ ಗ್ರಾಮಸ್ಥರು ಪಟ್ಟಣದ ಹೇಮಾವತಿ ಜಲಾಶಯ ಯೋಜನೆಯ ಕಚೇರಿಗೆ ಸೋಮವಾರ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.<br /> <br /> ಶಾಸಕರ ಭೇಟಿ: ಪ್ರತಿಭಟನೆ ವಿಷಯ ತಿಳಿದು ಸ್ಥಳಕ್ಕೆ ಬಂದ ಶಾಸಕ ಕೆ.ಸಿ. ನಾರಾಯಣಗೌಡ ಜನರ ಸಮಸ್ಯೆ ಆಲಿಸಿದರು. ತಕ್ಷಣ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗುವಂತೆ ಅಧಿಕಾರಿ ಗಳಿಗೆ ಸೂಚಿಸಿದರು. ಒಂದೆರಡು ದಿನಗಳಲ್ಲಿ ಕೆರೆಗಳಿಗೆ ನೀರು ತುಂಬಿಸುವ ಭರವಸೆ ದೊರಕಿದ ನಂತರ ಪ್ರತಿಭಟನೆ ಹಿಂದಕ್ಕೆ ಪಡೆಯಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>