‘ಬಜೆಟ್ ಬಳಿಕ ಸಚಿವ ಸಂಪುಟ ವಿಸ್ತರಣೆ ಆಗುವ ನಿರೀಕ್ಷೆ ಇದೆ. ಮುಂದಿನ 3–4 ತಿಂಗಳಲ್ಲಿ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಬದಲಾವಣೆಗಳು ಆಗಲಿವೆ’ ಎಂದರು.
‘ಉತ್ತರ ಕರ್ನಾಟಕ ಎಂದರೆ ಹುಬ್ಬಳ್ಳಿ–ಧಾರವಾಡ ಮಾತ್ರ ಅಲ್ಲ. ಇನ್ವೆಸ್ಟ್ ಕರ್ನಾಟಕವನ್ನು ಹುಬ್ಬಳ್ಳಿ ಬದಲು ಉತ್ತರ ಕರ್ನಾಟಕದ ಬೇರೆ ಜಿಲ್ಲೆಗಳಲ್ಲಿ ಮಾಡಬಹುದಿತ್ತು. ಬರೀ ಹುಬ್ಬಳ್ಳಿ-ಧಾರವಾಡಕ್ಕೆ ಯೋಜನೆಗಳನ್ನು ತಂದರೆ ಹೇಗೆ? ಕಲಬುರ್ಗಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಿಗೂ ಯೋಜನೆಗಳನ್ನು ತರಬೇಕು’ ಎಂದು ಆಗ್ರಹಿಸಿದರು.