‘ಆಸ್ಪತ್ರೆ ಆವರಣದಲ್ಲಿ ಜನೌಷಧಿ ಮಳಿಗೆಯನ್ನು ಶೀಘ್ರವೇ ಆರಂಭಿಸಲಾಗುವುದು. ಇದೇ ರೀತಿ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧಿ ಮಳಿಗೆ ಆರಂಭಿಸಲು ಕ್ರಮಕೈಗೊಳ್ಳಲಾಗುವುದು. ಈ ಹಿಂದೆಯೂ ನಾನು ಆರೋಗ್ಯ ಸಚಿವನಾಗಿ ಕೆಲಸ ಮಾಡಿದ್ದೇನೆ. ನನ್ನ ಪಾಲಿಗೆ ಬಡವರ ಕೆಲಸ ದೇವರ ಕೆಲಸ. ಹೀಗಾಗಿ, ನನ್ನ ಅವಧಿಯಲ್ಲಿ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಿಸುತ್ತೇನೆ’ ಎಂದು ಭರವಸೆ ನೀಡಿದರು.