ವಿಜಯಪುರ: ತಮ್ಮನ್ನು ಪಕ್ಷದಿಂದ ಉಚ್ಛಾಟಿಸಬೇಕು ಎಂಬ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ‘ಹರಕು ಬಾಯಿ ಯಾರದ್ದು ಅಂತ ನಮಗೆ ಚನ್ನಾಗಿ ಗೊತ್ತಿದೆ’ ಎಂದು ಫೇಸ್ಬುಕ್ನಲ್ಲಿ ಕಿಡಿಕಾರಿದ್ದಾರೆ.
ತಮ್ಮ ಬೆಂಬಲಿಗರೊಬ್ಬರು ಫೇಸ್ಬುಕ್ನಲ್ಲಿ ಬರೆದಿರುವ ಹೇಳಿಕೆಯನ್ನು ತಮ್ಮ ಫೇಸ್ಬುಕ್ಗೆ ಟ್ಯಾಗ್ ಮಾಡಿಕೊಂಡಿದ್ದಾರೆ.
‘ಯತ್ನಾಳ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡುವುದಾದರೆ ನಿಮ್ಮನ್ನು ಮಾ...’ ಎಂದು ಬರೆದುಕೊಂಡಿರುವ ಬೆಂಬಲಿಗರ ಹೇಳಿಕೆಯನ್ನು ಪೋಸ್ಟ್ ಮಾಡಿದ್ದಾರೆ. ಇದಕ್ಕೆ ಸಾಕಷ್ಟು ಪರವಾದ ಹೇಳಿಕೆಗಳು ವ್ಯಕ್ತವಾಗಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.