‘ಮುಳುಗಡೆ ಪ್ರದೇಶಗಳ ಶಾಶ್ವತ ಸ್ಥಳಾಂತರದ ಅವಶ್ಯಕತೆ ಇದೆ. ಸಂತ್ರಸ್ತರು ತಾತ್ಕಾಲಿಕವಾಗಿ 18/17 ಅಡಿ ಶೆಡ್ ನಿರ್ಮಿಸಿಕೊಡುವಂತೆ ಕೇಳುತ್ತಿದ್ದಾರೆ. ಶೌಚಾಲಯ, ಸ್ನಾನಗೃಹ, ಶುದ್ಧ ಕುಡಿಯುವ ನೀರು ಒದಗಿಸಬೇಕಾಗಿದೆ. ಈ ಬಗ್ಗೆ ಸಮಗ್ರವಾಗಿ ಅಧ್ಯಯನ ಮಾಡಿ, ಮುಖ್ಯಮಂತ್ರಿ ಜತೆ ಚರ್ಚೆ ನಡೆಸುತ್ತೇನೆ. ನಾನು ವಿರೋಧ ಪಕ್ಷದಲ್ಲಿದ್ದರೂ ಸರ್ಕಾರಕ್ಕೆ ಸಹಕಾರ ನೀಡುತ್ತೇನೆ’ ಎಂದರು.