ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೊಬೈಲ್‌ ಹಾಳಾದದ್ದೇ ನೆಪ; ಮಾನಸಿಕ ಅಸ್ವಸ್ಥನಿಂದ ಬಾಲಕಿ ಕೊಲೆ

Last Updated 15 ಡಿಸೆಂಬರ್ 2019, 14:40 IST
ಅಕ್ಷರ ಗಾತ್ರ

ಶಿವಮೊಗ್ಗ: ಮೊಬೈಲ್‌ ಹಾಳು ಮಾಡಿದಳು ಎಂದು ಕೋಪಗೊಂಡ ಮಾನಸಿಕ ಅಸ್ವಸ್ಥನೊ‌ಬ್ಬ ಐದು ವರ್ಷದ ಬಾಲಕಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಇಲ್ಲಿನ ಗಾಡಿಕೊಪ್ಪದಲ್ಲಿ ಭಾನುವಾರ ನಡೆದಿದೆ.

ರಜನಿ (5)ಮೃತಪಟ್ಟ ಬಾಲಕಿ. ತೀವ್ರ ಗಾಯಗೊಂಡಿದ್ದ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದರೂ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಳೆ.

ರಜನಿಯ ತಂದೆ-ತಾಯಿ ಚಿತ್ರದುರ್ಗದವರಾಗಿದ್ದು, ಅಲ್ಲಿಯೇ ವಾಸಿಸುತ್ತಿದ್ದಾರೆ. ಮಗಳನ್ನು ಅಜ್ಜ-ಅಜ್ಜಿಯ ಮನೆಯಲ್ಲಿ ಬಿಟ್ಟಿದ್ದರು. ಮಾನಸಿಕ ಅಸ್ವಸ್ಥ ಸಂತೋಷ್ ಬಾಲಕಿಯ ಸೋದರ ಮಾವ. ಮೊಬೈಲ್ ತೆಗೆದುಕೊಳ್ಳುವ ವಿಷಯಕ್ಕೆ ಮನೆಯಲ್ಲಿ ಜಗಳ ಮಾಡಿಕೊಂಡಿದ್ದನು. ಜಗಳದ ನಂತರ ತಂದೆ ಸಂತೋಷನಿಗೆ ಮೊಬೈಲ್ ಕೊಡಿಸಿದ್ದರು. ಆದರೆ ಈ ಮೊಬೈಲನ್ನು ಬಾಲಕಿ ಒಂದು ಬಾರಿ ಹಾಳು ಮಾಡಿದ್ದಳು ಎಂಬ ಕೋಪ ಆತನಿಗೆ ಇತ್ತು. ಹೀಗಾಗಿ ರಜನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ತುಂಗಾನಗರ ಪೊಲೀಸರು ಆರೋಪಿ ಸಂತೋಷ್‌ನನ್ನು ವಶಕ್ಕೆ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT