ಮಲೆನಾಡಿನ ಹಲವು ಭಾಗಗಳಲ್ಲಿ ಮಂಗಳ ಹಾವಳಿ ಮಿತಿ ಮೀರಿದೆ. ಅಪಾರ ಪ್ರಮಾಣದ ಬೆಳೆ ನಷ್ಟವಾಗುತ್ತಿದೆ. ಈ ಕುರಿತುಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜತೆ ಚರ್ಚಿಸಲಾಗುವುದು. ಅಸ್ಸಾಂನಲ್ಲಿ ಈ ರೀತಿಯ ಪ್ರಯೋಗ ಯಶಸ್ವಿಯಾಗಿದೆ. ಪಾರ್ಕ್ನಲ್ಲಿ ಅವುಗಳಿಗೆ ಅಗತ್ಯವಾದ ಎಲ್ಲ ಆಹಾರ ಸಿಗುವ ಪರಿಣಾಮ ಮಂಗಗಳ ಹಾವಳಿ ನಿಯಂತ್ರಣಕ್ಕೆ ಬಂದಿದೆ. ಅಲ್ಲಿಗೆ ಅಧ್ಯಯನ ತಂಡ ಕಳುಹಿಸಲಾಗುವುದು. ಅದೇ ಮಾದರಿಯಲ್ಲಿ ಮಂಕಿ ಪಾರ್ಕ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.