<p><strong>ಮೈಸೂರು:</strong> ‘ನನ್ನ ಐದನೇ ತಲೆಮಾರಿನ ಅಜ್ಜನನ್ನು ಬಲಾತ್ಕಾರದಿಂದ ಮತಾಂತರ ಮಾಡಿದವ ಟಿಪ್ಪು ಸುಲ್ತಾನ್. ನಾನು ಆತನನ್ನು ಹೇಗೆ ಗೌರವಿಸಲಿ, ಹೇಗೆ ಅವನ ಜಯಂತಿ ಆಚರಿಸಲಿ’ ಎಂದು ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಶನಿವಾರ ಪ್ರಶ್ನಿಸಿದರು.</p>.<p>ಸಾಧ್ವಿ ಪತ್ರಿಕೆ ಅಂತರ್ಜಾಲ ಆವೃತ್ತಿಯ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿ, ‘ರಂಗಾಯಣದ ನಿರ್ದೇಶಕನಾಗಿ ಮೈಸೂರಿಗೆ ಬಂದ ಆರಂಭದಲ್ಲಿ ಬಹಳ ಮಂದಿಗೆ ಟಿಪ್ಪು ಬಗ್ಗೆ ಬಹಳ ಹೆಮ್ಮೆ ಇರುವುದು ತಿಳಿಯಿತು. ಅವರನ್ನು ಕಂಡಾಗ ನನಗೆ ಥೂ... ಎನಿಸಿಬಿಡುತಿತ್ತು’ ಎಂದು ಹರಿಹಾಯ್ದರು.</p>.<p>ಸಿಎಎ ವಿರುದ್ಧ ಹೋರಾಡುವವರಿಗೆ ಸಂವಿಧಾನದ ಬಗ್ಗೆ ಅಲ್ಪ ಜ್ಞಾನವೂ ಇಲ್ಲ. ಪಾಠ, ನಾಟಕದ ಮೂಲಕ ಅವರಿಗೆ ಸಂವಿಧಾನ ತಿಳಿಸಿಕೊಡಿ ಎಂದು ಕೇಂದ್ರ ಸರ್ಕಾರ ರಂಗಾಯಣಕ್ಕೆ ₹ 15 ಲಕ್ಷ ಕೊಟ್ಟಿದೆ ಎಂದರು.</p>.<p>ಕೆಲವರು ಅಂಬೇಡ್ಕರ್, ಗಾಂಧಿ, ಬುದ್ಧ ಅವರನ್ನು ಮುಂದಿಟ್ಟುಕೊಂಡು ಹೋರಾಟ ಮಾಡುತ್ತಿದ್ದಾರೆ. ಹಾಗೆ ಮಾಡಲು ಅವರಿಗೆ ಅಧಿಕಾರ ಕೊಟ್ಟವರು ಯಾರು? ಅಂಬೇಡ್ಕರ್, ಗಾಂಧಿ ಯಾರಪ್ಪನ ಸೊತ್ತು? ಎಂದು ಕಿಡಿಕಾರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ನನ್ನ ಐದನೇ ತಲೆಮಾರಿನ ಅಜ್ಜನನ್ನು ಬಲಾತ್ಕಾರದಿಂದ ಮತಾಂತರ ಮಾಡಿದವ ಟಿಪ್ಪು ಸುಲ್ತಾನ್. ನಾನು ಆತನನ್ನು ಹೇಗೆ ಗೌರವಿಸಲಿ, ಹೇಗೆ ಅವನ ಜಯಂತಿ ಆಚರಿಸಲಿ’ ಎಂದು ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಶನಿವಾರ ಪ್ರಶ್ನಿಸಿದರು.</p>.<p>ಸಾಧ್ವಿ ಪತ್ರಿಕೆ ಅಂತರ್ಜಾಲ ಆವೃತ್ತಿಯ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾತನಾಡಿ, ‘ರಂಗಾಯಣದ ನಿರ್ದೇಶಕನಾಗಿ ಮೈಸೂರಿಗೆ ಬಂದ ಆರಂಭದಲ್ಲಿ ಬಹಳ ಮಂದಿಗೆ ಟಿಪ್ಪು ಬಗ್ಗೆ ಬಹಳ ಹೆಮ್ಮೆ ಇರುವುದು ತಿಳಿಯಿತು. ಅವರನ್ನು ಕಂಡಾಗ ನನಗೆ ಥೂ... ಎನಿಸಿಬಿಡುತಿತ್ತು’ ಎಂದು ಹರಿಹಾಯ್ದರು.</p>.<p>ಸಿಎಎ ವಿರುದ್ಧ ಹೋರಾಡುವವರಿಗೆ ಸಂವಿಧಾನದ ಬಗ್ಗೆ ಅಲ್ಪ ಜ್ಞಾನವೂ ಇಲ್ಲ. ಪಾಠ, ನಾಟಕದ ಮೂಲಕ ಅವರಿಗೆ ಸಂವಿಧಾನ ತಿಳಿಸಿಕೊಡಿ ಎಂದು ಕೇಂದ್ರ ಸರ್ಕಾರ ರಂಗಾಯಣಕ್ಕೆ ₹ 15 ಲಕ್ಷ ಕೊಟ್ಟಿದೆ ಎಂದರು.</p>.<p>ಕೆಲವರು ಅಂಬೇಡ್ಕರ್, ಗಾಂಧಿ, ಬುದ್ಧ ಅವರನ್ನು ಮುಂದಿಟ್ಟುಕೊಂಡು ಹೋರಾಟ ಮಾಡುತ್ತಿದ್ದಾರೆ. ಹಾಗೆ ಮಾಡಲು ಅವರಿಗೆ ಅಧಿಕಾರ ಕೊಟ್ಟವರು ಯಾರು? ಅಂಬೇಡ್ಕರ್, ಗಾಂಧಿ ಯಾರಪ್ಪನ ಸೊತ್ತು? ಎಂದು ಕಿಡಿಕಾರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>