ಚಿನ್ನಪ್ಪರೆಡ್ಡಿ ವರದಿಯನ್ನು ಯಥಾವತ್ತಾಗಿ ಜಾರಿ ಮಾಡದ ಸರ್ಕಾರ, ವರದಿಯಲ್ಲಿ ಶಿಫಾರಸ್ಸು ಮಾಡದ ಜಾತಿಗಳನ್ನು ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿಸಿ, 3ಎ, 3ಬಿ ವರ್ಗಗಳನ್ನು ಸೃಷ್ಟಿಸಿತು. ಇದರಿಂದ ಒಟ್ಟಾರೆ ಮೀಸಲಾತಿಯ ಪ್ರಮಾಣ ಶೇ 73ಕ್ಕೆ ಹೆಚ್ಚಿತು. ಪ್ರಕರಣ ಸುಪ್ರೀಂಕೋರ್ಟ್ ಮೆಟ್ಟಿಲೇರಿದಾಗ ಸರ್ಕಾರ ತನ್ನ ನಿಲುವನ್ನು ಸಮರ್ಥಿಸಿಕೊಳ್ಳಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.