ಮೈಸೂರು: ನಗರದ ಸುತ್ತೂರು ಮಠದಲ್ಲಿ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ 107ನೇ ಜಯಂತಿ ಮಹೋತ್ಸವದ ಅಂಗವಾಗಿ ಜೆಎಸ್ಎಸ್ ಆಸ್ಪತ್ರೆ ಹಾಗೂ ಜೆಎಸ್ಎಸ್ ಎಎಚ್ಇಆರ್ ವತಿಯಿಂದ ಗುರುವಾರ ಸ್ವಯಂಪ್ರೇರಿತ ರಕ್ತದಾನ ಶಿಬಿರ ಮತ್ತು ಅಂಗಾಂಗ ದಾನ ನೋಂದಣಿ ಕಾರ್ಯಕ್ರಮ ನಡೆಯಿತು.
ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹಾಗೂ ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಸಾನ್ನಿಧ್ಯದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಉದ್ಘಾಟಿಸಿದರು.
50 ಮಂದಿ ರಕ್ತ ದಾನ ಮಾಡಿದರು. 14 ಜನ ದೇಹ ಹಾಗೂ 11 ಮಂದಿ ನೇತ್ರದಾನಕ್ಕೆ ಹೆಸರು ನೋಂದಾಯಿಸಿದರು.
ಮೇಯರ್ ಸುನಂದಾ ಫಾಲನೇತ್ರ, ಜೆಎಸ್ಎಸ್ ಆಸ್ಪತ್ರೆಯ ಪ್ರಭಾರ ನಿರ್ದೇಶಕ ಡಾ.ಸಿ.ಪಿ.ಮಧು, ರಕ್ತನಿಧಿ ಕೇಂದ್ರದ ಅಧಿಕಾರಿ ಡಾ.ಪಿ.ಪಲ್ಲವಿ ಇದ್ದರು.