ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಗರದಲ್ಲಿ ಮತ್ತೆರಡು ಮರ ಧರೆಗೆ

Last Updated 14 ಮಾರ್ಚ್ 2021, 5:53 IST
ಅಕ್ಷರ ಗಾತ್ರ

ಮೈಸೂರು: ನಗರದಲ್ಲಿ ಶನಿವಾರವೂ 2 ಮರಗಳು ಧರೆಗುರುಳಿದ್ದು, 2 ದಿನಗಳಲ್ಲಿ 3 ಮರಗಳು ಉರುಳಿ ಬಿದ್ದಿವೆ.

ಜಯಚಾಮರಾಜ ಒಡೆಯರ್ ವೃತ್ತ (ಹಾರ್ಡಿಂಜ್ ವೃತ್ತ)ದಲ್ಲಿ ಬೃಹತ್ ಗಾತ್ರದ ಮರವೊಂದು ಮುಂಜಾನೆ ಉರುಳಿದೆ. ಈ ಸಮಯದಲ್ಲಿ ಹೆಚ್ಚಿನ ವಾಹನ ಸಂಚಾರ ಇಲ್ಲದೇ ಇದ್ದುದ್ದರಿಂದ ಯಾವುದೇ ಅನಾಹುತ ಆಗಿಲ್ಲ.

ನಂಜನಗೂಡು ಮುಖ್ಯರಸ್ತೆಯಲ್ಲಿರುವ ಜೆಎಸ್‌ಎಸ್ ಕಲಾ, ವಾಣಿಜ್ಯ ಕಾಲೇಜು ಸಮೀಪದ ವೃತ್ತದಲ್ಲಿ ಸಂಜೆ ಮರವೊಂದು ಉರುಳಿ ಬಿದ್ದಿದೆ. ಇದು ವಿದ್ಯುತ್ ಕಂಬದ ಮೇಲೆ ಬಿದ್ದುದ್ದರಿಂದ ಕಂಬ ಬಾಗಿದೆ. ಕೂಡಲೇ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ಯಾವುದೇ ಅನಾಹುತ ಸಂಭವಿಸಲಿಲ್ಲ.

ಎರಡು ಕಡೆಯೂ ಪಾಲಿಕೆ ಅಭಯ್ ರಕ್ಷಣಾ ತಂಡ ಕಾರ್ಯಚರಣೆ ನಡೆಸಿ ಮರಗಳನ್ನು ತೆರವುಗೊಳಿಸಿತು. ಶುಕ್ರವಾರವಷ್ಟೇ ವಿ.ವಿ.ಮೊಹಲ್ಲಾದ ಲಾಯಲ್ ವರ್ಲ್ಡ್‌ ಬಳಿ ಮರವೊಂದು ಉರುಳಿ ಕಾರು ಜಖಂಗೊಂಡಿತ್ತು.

ಮಳೆ, ಗಾಳಿ ಇಲ್ಲದಿದ್ದರೂ ಮರಗಳು ಇದ್ದಕ್ಕಿದ್ದಂತೆ ಉರುಳಿ ಬೀಳುತ್ತಿರುವುದು ಸಾರ್ವಜನಿಕರಲ್ಲಿ ಭೀತಿ ಮೂಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT