<p><strong>ಮೈಸೂರು:</strong> ಮೈಸೂರು ನಗರವೂ ಸೇರಿದಂತೆ ಜಿಲ್ಲೆಯ ವ್ಯಾಪ್ತಿಯಲ್ಲಿ ಕೋವಿಡ್-19 ಸೋಂಕು ಹರಡುವಿಕೆ ತಡೆಗಟ್ಟುವ ಮುಂಜಾಗ್ರತೆಯ ಕ್ರಮವಾಗಿ ಮತ್ತು ಜನಸಂದಣಿ ನಿಯಂತ್ರಣಕ್ಕಾಗಿ, ಗೌರಿ–ಗಣೇಶ ಹಬ್ಬದ ಅಂಗವಾಗಿ ಆ.19ರಿಂದ 22ರವರೆಗೆ 4 ದಿನ ದೇವರಾಜ ಮಾರುಕಟ್ಟೆಯ ಹೂವಿನ ವ್ಯಾಪಾರದ ಸಗಟು ಮತ್ತು ಚಿಲ್ಲರೆ ಮಾರಾಟ ಮಳಿಗೆಗಳನ್ನು ಮುಚ್ಚಲು ಪಾಲಿಕೆ ಆಡಳಿತ ಆದೇಶ ಹೊರಡಿಸಿದೆ.</p>.<p>ದೇವರಾಜ ಮಾರುಕಟ್ಟೆ ಹೂವಿನ ವ್ಯಾಪಾರಸ್ಥರ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಈ ನಾಲ್ಕು ದಿನ ಜೀವರಾಯನಕಟ್ಟೆ ಮೈದಾನದಲ್ಲಿ (ಜೆ.ಕೆ. ಗ್ರೌಂಡ್) ವಹಿವಾಟಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p class="Briefhead">ಮಾಂಸದ ಅಂಗಡಿ ಬಂದ್ 22ಕ್ಕೆ</p>.<p>ಮೈಸೂರು: ಗಣೇಶ ಚತುರ್ಥಿ ಪ್ರಯುಕ್ತ ಆ.22ರ ಶನಿವಾರ ಮೈಸೂರು ಮಹಾನಗರ ಪಾಲಿಕೆಗೆ ಒಳಪಟ್ಟ ಕುರಿ, ಮೇಕೆ, ದನ, ಎಮ್ಮೆ, ಕೋಳಿ ಮಾಂಸ, ಹಂದಿ ಮಾಂಸ, ಮತ್ತು ಮೀನು ವ್ಯಾಪಾರವನ್ನು ಕಡ್ಡಾಯವಾಗಿ ನಿಷೇಧಿಸಲು ಆದೇಶ ನೀಡಲಾಗಿದೆ ಎಂದು ಮಹಾನಗರ ಪಾಲಿಕೆಯ ಪಶುವೈದ್ಯಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಮೈಸೂರು ನಗರವೂ ಸೇರಿದಂತೆ ಜಿಲ್ಲೆಯ ವ್ಯಾಪ್ತಿಯಲ್ಲಿ ಕೋವಿಡ್-19 ಸೋಂಕು ಹರಡುವಿಕೆ ತಡೆಗಟ್ಟುವ ಮುಂಜಾಗ್ರತೆಯ ಕ್ರಮವಾಗಿ ಮತ್ತು ಜನಸಂದಣಿ ನಿಯಂತ್ರಣಕ್ಕಾಗಿ, ಗೌರಿ–ಗಣೇಶ ಹಬ್ಬದ ಅಂಗವಾಗಿ ಆ.19ರಿಂದ 22ರವರೆಗೆ 4 ದಿನ ದೇವರಾಜ ಮಾರುಕಟ್ಟೆಯ ಹೂವಿನ ವ್ಯಾಪಾರದ ಸಗಟು ಮತ್ತು ಚಿಲ್ಲರೆ ಮಾರಾಟ ಮಳಿಗೆಗಳನ್ನು ಮುಚ್ಚಲು ಪಾಲಿಕೆ ಆಡಳಿತ ಆದೇಶ ಹೊರಡಿಸಿದೆ.</p>.<p>ದೇವರಾಜ ಮಾರುಕಟ್ಟೆ ಹೂವಿನ ವ್ಯಾಪಾರಸ್ಥರ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಈ ನಾಲ್ಕು ದಿನ ಜೀವರಾಯನಕಟ್ಟೆ ಮೈದಾನದಲ್ಲಿ (ಜೆ.ಕೆ. ಗ್ರೌಂಡ್) ವಹಿವಾಟಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p class="Briefhead">ಮಾಂಸದ ಅಂಗಡಿ ಬಂದ್ 22ಕ್ಕೆ</p>.<p>ಮೈಸೂರು: ಗಣೇಶ ಚತುರ್ಥಿ ಪ್ರಯುಕ್ತ ಆ.22ರ ಶನಿವಾರ ಮೈಸೂರು ಮಹಾನಗರ ಪಾಲಿಕೆಗೆ ಒಳಪಟ್ಟ ಕುರಿ, ಮೇಕೆ, ದನ, ಎಮ್ಮೆ, ಕೋಳಿ ಮಾಂಸ, ಹಂದಿ ಮಾಂಸ, ಮತ್ತು ಮೀನು ವ್ಯಾಪಾರವನ್ನು ಕಡ್ಡಾಯವಾಗಿ ನಿಷೇಧಿಸಲು ಆದೇಶ ನೀಡಲಾಗಿದೆ ಎಂದು ಮಹಾನಗರ ಪಾಲಿಕೆಯ ಪಶುವೈದ್ಯಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>